ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಸಹೋದರ, ಅನಿಲ್ ಅಂಬಾನಿ ಪರ ವಕೀಲರು ಅನಿಲ್ ಅಂಬಾನಿ ಮೌಲ್ಯ ಕುಸಿದಿದೆ, ಅವರ ಬಳಿ ಹಣವಿಲ್ಲ ಎಂದು ಹೇಳಿದರೂ, ಚೀನಾ ಮೂಲದ ಬ್ಯಾಂಕುಗಳಿಗೆ ಪಡೆದ ಸಾಲಕ್ಕೆ ಆರು ವಾರದೊಳಗೆ 100 ಮಿಲಿಯನ್ ಡಾಲರ್ಗಳನ್ನು ನೀಡಬೇಕೆಂದು ಇಂಗ್ಲೆಂಡ್ ಕೋರ್ಟ್ ಆದೇಶಿಸಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಒಂದು ಕಾಲದಲ್ಲಿ ಶ್ರೀಮಂತ ಉದ್ಯಮಿಯಾಗಿದ್ದರು. ಆದರೆ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆದ ಹಲವು ವಿನಾಶಕಾರಿ ತಿರುವುಗಳಿಂದ ಅವರು ಇಂದು ಶ್ರೀಮಂತ ಉದ್ಯಮಿಯಾಗಿ ಉಳಿದಿಲ್ಲ ಎಂದು ಲಂಡನ್ ನ ಕೋರ್ಟ್ ನಲ್ಲಿ ಅವರ ವಕೀಲರು ಹೇಳಿಕೆ ನೀಡಿದ್ದಾರೆ.
ಅನಿಲ್ ಅಂಬಾನಿ ಎಲ್ಲವನ್ನೂ ಕಳೆದುಕೊಂಡಿದ್ದಾರೆ!
'2012ರ ನಂತರ ಅನಿಲ್ ಅಂಬಾನಿಯವರ ಹೂಡಿಕೆಗಳು ಮಾರುಕಟ್ಟೆಯಲ್ಲಿ ಕುಸಿಯಲಾರಂಭಿಸಿತು. ಸ್ಪೆಕ್ಟ್ರಮ್ ಹಂಚಿಕೆಯಲ್ಲಿ ಭಾರತ ಸರ್ಕಾರ ಮಾಡಿಕೊಂಡ ನೀತಿಗಳ ಬದಲಾವಣೆಯಿಂದ ದೇಶದ ಟೆಲಿಕಾಂ ವಲಯಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. 2012ರಲ್ಲಿ 7 ಶತಕೋಟಿ ಡಾಲರ್ ಗೂ ಅಧಿಕ ಇದ್ದ ಅನಿಲ್ ಅಂಬಾನಿ ಹೂಡಿಕೆ ಮೌಲ್ಯ ಇಂದು 89 ದಶಲಕ್ಷ ಡಾಲರ್ ಗೆ ಇಳಿದಿದೆ. ಅವರ ಬಾಧ್ಯತೆಗಳ ಲೆಕ್ಕ ತೆಗೆದುಕೊಂಡರೆ ಅವರ ವ್ಯವಹಾರ ಜಾಲ ಮೌಲ್ಯ ಶೂನ್ಯವಾಗಿರುತ್ತದೆ, ಒಂದು ಕಾಲದಲ್ಲಿ ಆಗರ್ಭ ಶ್ರೀಮಂತರಾಗಿದ್ದವರು ಇಂದು ಎಲ್ಲವನ್ನೂ ಕಳೆದುಕೊಂಡಿದ್ದಾರೆ, ಹೀಗಾಗಿ 700 ದಶಲಕ್ಷ ಡಾಲರ್ ನಷ್ಟು ಮೊತ್ತ ಅವರು ನ್ಯಾಯಾಲಯಕ್ಕೆ ಕಟ್ಟಲು ಸಾಧ್ಯವಿಲ್ಲ'' ಎಂದು ಯುಕೆ ಕೋರ್ಟ್ ನಲ್ಲಿ ಅಂಬಾನಿ ಬ್ಯಾರಿಸ್ಟರ್ ರಾಬರ್ಟ್ ಹೊವೆ ಹೇಳಿದ್ದಾರೆ.
ಅನಿಲ್ ಅಂಬಾನಿ ಮೇಲೆ ಕೋರ್ಟ್ ಕ್ರಮ ಏಕೆ?
ಬ್ಯಾಂಕುಗಳಿಂದ ತೆಗೆದುಕೊಂಡ ಸಾಲಗಳಿಗೆ ವೈಯಕ್ತಿಕ ಖಾತ್ರಿ ನೀಡಲು ಅನಿಲ್ ಅಂಬಾನಿ ಹಿಂದೇಟು ಹಾಕಿದಾಗ ಸಾಲದ ಒಪ್ಪಂದ ಮುರಿದ ಹಿನ್ನಲೆಯಲ್ಲಿ ಲಂಡನ್ ನ ಹೈಕೋರ್ಟ್ ತನ್ನ ಕಾನೂನು ವ್ಯಾಪ್ತಿಯಲ್ಲಿ ಅಂಬಾನಿ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಆರು ವಾರದೊಳಗೆ 100 ಮಿಲಿಯನ್ ಡಾಲರ್ಗಳನ್ನು ನೀಡಬೇಕೆಂದು ಇಂಗ್ಲೆಂಡ್ ಕೋರ್ಟ್ ನಿರ್ದೇಶಿಸಿದೆ.
ಅನಿಲ್ ಅಂಬಾನಿ ಯಾವ ಬ್ಯಾಂಕಿನಿಂದ, ಎಷ್ಟು ಸಾಲ ಪಡೆದಿದ್ದರು?
ಮೂರು ರಾಜ್ಯ-ನಿಯಂತ್ರಿತ ಚೀನೀ ಬ್ಯಾಂಕುಗಳು ಈ ಹಿಂದೆ ಮೊಕದ್ದಮೆಯನ್ನು ಸಲ್ಲಿಸಿದವು. ಚೀನಾದ ಕೈಗಾರಿಕಾ ಮತ್ತು ವಾಣಿಜ್ಯ ಬ್ಯಾಂಕ್ ಲಿಮಿಟೆಡ್, ಚೀನಾ ಅಭಿವೃದ್ಧಿ ಬ್ಯಾಂಕ್, ಚೀನಾ ರಫ್ತು-ಆಮದು ಬ್ಯಾಂಕ್ 2012ರಲ್ಲಿ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್ ಲಿಮಿಟೆಡ್ಗೆ 925.2 ಮಿಲಿಯನ್ ಅಮೆರಿಕನ್ ಡಾಲರ್ (ಭಾರತದ ರುಪಾಯಿಗಳಲ್ಲಿ 6,603 ಕೋಟಿ 80 ಲಕ್ಷದ 400) ಸಾಲವನ್ನು ನೀಡಿದ್ದವು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications