ಸದ್ಯ ಚಾಲ್ತಿಯಲ್ಲಿರುವ ಈರುಳ್ಳಿ ರಫ್ತು ನಿಷೇಧವನ್ನು 2020ರ ಫೆಬ್ರವರಿವರೆಗೂ ವಿಸ್ತರಣೆ ಮಾಡಲು ಕೇಂದ್ರ ಮನಸ್ಸು ಮಾಡಿದೆ. ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿಯಂತ್ರಣಕ್ಕಾಗಿ ಈರುಳ್ಳಿಯನ್ನು ರಫ್ತು ನಿಷೇಧ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ.
ಆಗಸ್ಟ್-ಸೆಪ್ಟೆಂಬರ್ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈರುಳ್ಳಿ ಉತ್ಪಾದನೆ ಭಾರೀ ಕುಸಿತ ಕಂಡಿದ್ದಲ್ಲದೆ, ಪೂರೈಕೆಯಲ್ಲೂ ವಿಳಂಭ ಉಂಟಾಗಿತ್ತು. ಈರುಳ್ಳಿಯನ್ನು ಅತಿ ಹೆಚ್ಚು ಬೆಳೆಯುವ ಮಹಾರಾಷ್ಟ್ರ, ಕರ್ನಾಟಕದಲ್ಲಿ ಪ್ರವಾಹದಿಂದಾಗಿ ಬೆಳೆ ಹಾನಿ ಆಗಿದ್ದಲ್ಲದೆ ಸರಬರಾಜು ಸೀಮಿತವಾಗಿತ್ತು. ದೇಶದ ಹಲವು ನಗರಗಳಲ್ಲಿ 1 ಕೆ.ಜಿ ಈರುಳ್ಳಿ ದರವು 50 ರಿಂದ 100 ರುಪಾಯಿಗೆ ತಲುಪಿತು.

'ಖಾಸಗಿ ವ್ಯಾಪಾರಿಗಳು ಈಗಾಗಲೇ ವಿದೇಶಗಳಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಮುಂದಾಗಿದ್ದಾರೆ. ಕನಿಷ್ಟ 1 ಸಾವಿರ ಟನ್ ಈರುಳ್ಳಿ ತಿಂಗಳ ಅಂತ್ಯದ ವೇಳೆಗೆ ಮತ್ತು ಮುಂದಿನ ತಿಂಗಳೊಳಗೆ ದೇಶಕ್ಕೆ ಪ್ರವೇಶಿಸುವ ನಿರೀಕ್ಷಿಯಿದೆ ' ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರವು 1 ಲಕ್ಷ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಿದ್ದಾಗಿದೆ. ಸರ್ಕಾರಿ ಸ್ವಾಮ್ಯದ ವ್ಯಾಪಾರ ಸಂಸ್ಥೆ ಎಂಎಂಟಿಸಿ 1 ಲಕ್ಷ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲಿದೆ. ನಾಫೆಡ್ ಸಂಸ್ಥೆಯು ನವೆಂಬರ್ 15ರಿಂದ ಡಿಸೆಂಬರ್ 15ರ ಅವಧಿಯಲ್ಲಿ ಈರುಳ್ಳಿಯನ್ನು ದೇಶೀಯ ಮಾರುಕಟ್ಟೆಗೆ ವಿತರಿಸುತ್ತಿದೆ.
ಆದರೆ, ವಿಶ್ವದ ಅತಿ ದೊಡ್ಡ ಈರುಳ್ಳಿ ರಫ್ತುದಾರ ಭಾರತವು ಈರುಳ್ಳಿ ರಫ್ತು ನಿಷೇಧದಿಂದಾಗಿ, ಏಷ್ಯಾದಲ್ಲಿ ಈರುಳ್ಳಿ ಬೆಲೆಯು ಏರಿಕೆಗೊಳ್ಳುತ್ತಿದೆ. ಹೆಚ್ಚು ಈರುಳ್ಳಿಯನ್ನು ಆಮದು ಮಾಡಿಕೊಳ್ಳುವ ನೇಪಾಳ, ಬಾಂಗ್ಲಾದೇಶ ಹಾಗೂ ಶ್ರೀಲಂಕಾ ರಾಷ್ಟ್ರಗಳು ತಮ್ಮ ಬೇಡಿಕೆಗಳನ್ನು ಪೂರೈಸಿಕೊಳ್ಳಲು ಇತರ ಮೂಲಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications