BSNL ಬಳಿಕ ಮಹಾನಗರ ದೂರವಾಣಿ ನಿಗಮ ಲಿಮಿಟೆಡ್ (MTNL)ನ ಉದ್ಯೋಗಿಗಳು ಸ್ವಯಂ ನಿವೃತ್ತಿ ಯೋಜನೆ (VRS) ಪ್ಯಾಕೇಜ್ ಉತ್ತಮವಾಗಿ ಸ್ಪಂದಿಸಿದ್ದು, ಈಗಾಗಲೇ 13,500 ಉದ್ಯೋಗಿಗಳು VRS ಆಯ್ಕೆ ಮಾಡಿಕೊಂಡಿದ್ದಾರೆ.
ಸರ್ಕಾರಿ ಸ್ವಾಮ್ಯದ ಮಹಾನಗರ ದೂರವಾಣಿ ಸೇವಾ ನಿಗಮವು ನಿರೀಕ್ಷಿಸಿದಕ್ಕಿಂತ ಹೆಚ್ಚಾಗಿ ಉದ್ಯೋಗಿಗಳು VRS ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ತಿಳಿಸಿದೆ. ಈ ಹಿಂದೆ BSNLನ 77 ಸಾವಿರ ಉದ್ಯೋಗಿಗಳು VRS ಪ್ಯಾಕೇಜ್ ಒಪ್ಪಿಕೊಂಡಿದ್ದರು.

MTNL ಆರಂಭದಲ್ಲಿ ಸ್ವಯಂ ಪ್ರೇರಿತ ನಿವೃತ್ತಿ ಯೋಜನೆಗೆ 13,500 ಉದ್ಯೋಗಿಗಳು ಒಪ್ಪಿಕೊಳ್ಳುವರು ಎಂದು ಅಂದಾಜಿಸಿತ್ತು. ಆದರೆ ಈಗಾಗಲೇ ಅಂತಿಮ ದಿನಕ್ಕೆ ಇನ್ನೆರಡು ವಾರಗಳು ಇರುವಂತೆಯೇ 13,532 ಉದ್ಯೋಗಿಗಳು VRS ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ. MTNLನ 16,300 ಉದ್ಯೋಗಿಗಳು VRS ಯೋಜನೆಗೆ ಅರ್ಹರಾಗಿದ್ದಾರೆ.

'ನಮಗೆ ಬಲವಾದ ಪ್ರತಿಕ್ರಿಯೆ ಬಂದಿದೆ. ಮತ್ತು ಇಲ್ಲಿಯವರೆಗೂ 13,532 ಉದ್ಯೋಗಿಗಳು VRS ಯೋಜನೆ ಆಯ್ದುಕೊಂಡಿದ್ದಾರೆ. ನಮ್ಮ ಆಂತರಿಕ ಗುರಿ 13,500 ಆಗಿತ್ತು. ಆದರೆ ಈಗ ನಿಗದಿತ ದಿನಾಂಕದ ಕೊನೆಯ ವೇಳೆಗೆ ಈ ಸಂಖ್ಯೆಯು 14,500 ರಿಂದ 15,000 ತಲುಪಬಹುದು' ಎಂದು MTNL ಅಧ್ಯಕ್ಷ ಮತ್ತು ವ್ಯವಸ್ತಾಪಕ ನಿರ್ದೇಶಕ ಸುನಿಲ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ದೆಹಲಿ ಮತ್ತು ಮುಂಬೈನಲ್ಲಿ ಹೆಚ್ಚಾಗಿ ಕಾರ್ಯನಿರ್ವಹಣೆ ಹೊಂದಿರುವ MTNL ಗುಜರಾತ್ ಮಾದರಿಯಲ್ಲಿ VRS ಯೋಜನೆಯನ್ನು ಆರಂಭಿಸಿದೆ. ಉದ್ಯೋಗಿಗಳು ಸ್ವಯಂ ನಿವೃತ್ತಿ ಯೋಜನೆಗೆ ಒಳಪಡಲು ಡಿಸೆಂಬರ್ 3 ಕೊನೆಯ ದಿನಾಂಕವಾಗಿದೆ.
MTNL ಕಳೆದ ಹತ್ತು ವರ್ಷಗಳಲ್ಲಿ 9 ವರ್ಷ ನಷ್ಟ ಅನುಭವಿಸಿದ್ದಾಗಿ ಘೋಷಿಸಿದೆ. 2010ರಿಂದ BSNL ಹಾಗೂ MTNL ಒಟ್ಟಾರೆ 40 ಸಾವಿರ ಕೋಟಿ ನಷ್ಟ ಅನುಭವಿಸಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications