ಭಾರತದಿಂದ ಹತ್ತಿಯ ಆಮದು ಮಾಡಿಕೊಳ್ಳುವ ಪ್ರಸ್ತಾಪವನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರ ತಿರಸ್ಕರಿಸಿದ್ದು, ಈ ಕುರಿತು ಅಲ್ಲಿನ ಜವಳಿ ಉದ್ಯಮವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಸಮಿತಿಯೊಂದು ಮಾಡಿದ್ದ ಪ್ರಸ್ತಾಪವನ್ನು ಪಾಕಿಸ್ತಾನದ ಸಚಿವ ಸಂಪುಟವು ತಿರಸ್ಕರಿಸಿದೆ. ಪರಿಣಾಮ ಹತ್ತಿಯ ಆಮದು ಪ್ರಸ್ತಾಪ ಅರ್ಧಕ್ಕೆ ನಿಂತಿದೆ ಹಾಗೂ ಈ ಕುರಿತು ಜವಳಿ ಉದ್ಯಮವು ನಿರಾಸೆಗೊಂಡಿದೆ ಎಂದು 'ಡಾನ್' ಪತ್ರಿಕೆ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಪಡಿಸಿದ ನಂತರ ಪಾಕಿಸ್ತಾನವು, ಭಾರತದಿಂದ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸುವವರೆಗೂ ಹತ್ತಿಯನ್ನು ಖರೀದಿಸುವವರಲ್ಲಿ ಪಾಕಿಸ್ತಾನ ಪ್ರಮುಖ ರಾಷ್ಟ್ರವಾಗಿತ್ತು.
ಪಾಕಿಸ್ತಾನ ಸರ್ಕಾರದ ಈ ನಿರ್ಧಾರವನ್ನು ಸ್ಥಳೀಯ ನಾಯಕರುಗಳೇ ಟೀಕಿಸಿದ್ದಾರೆ. ಭಾರತದಿಂದ ಹತ್ತಿ ಮತ್ತು ನೂಲು ಆಮದು ಮಾಡಿಕೊಳ್ಳಬೇಕು ಎಂಬ ಪ್ರಸ್ತಾಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪಾಕಿಸ್ತಾನ ಸಿದ್ಧ ಉಡುಪುಗಳ ವೇದಿಕೆ ಅಧ್ಯಕ್ಷ ಜಾವೆದ್ ಬಿಲ್ವಾನಿ ಒತ್ತಾಯಿಸಿದ್ದಾರೆ.
ಭಾರತವು ವಿಶ್ವದಲ್ಲೇ ಅತಿದೊಡ್ಡ ಹತ್ತಿ ಉತ್ಪಾದಕ ರಾಷ್ಟ್ರವಾಗಿದ್ದು, ಜೊತೆಗೆ ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕವಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications