ಬೆಂಗಳೂರು, ಮಾರ್ಚ್ 25: ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಭಾರತದೊಂದಿಗಿನ ವ್ಯಾಪಾರ ಪರಿಸ್ಥಿತಿಯನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದ್ದು, ತಮ್ಮ ದೇಶದಲ್ಲಿನ ವ್ಯಾಪಾರ ಸಮುದಾಯದ ಆಜ್ಞೆಯ ಮೇರೆಗೆ ವ್ಯಾಪಾರ ಸಂಬಂಧಗಳನ್ನು ಪುನರಾರಂಭಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.
"ಭಾರತವು ನಮ್ಮ ನೆರೆಯ ರಾಷ್ಟ್ರವಾಗಿದೆ. ಭಾರತ ಆಗಸ್ಟ್ 2019 ರಲ್ಲಿ ಆರ್ಟಿಕಲ್ 370 ಅನ್ನು ಹಿಂತೆಗೆದುಕೊಂಡಿದ್ದು ನೋವಿ ಸಂಗತಿಯಾಗಿದೆ ಮತ್ತು ಆ ವಿವಾದ ಮುಂದುವರಿಯುತ್ತದೆ. ಆದಾಗ್ಯೂ, ಪಾಕಿಸ್ತಾನದ ವ್ಯಾಪಾರ ಸಮುದಾಯವು ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸಬೇಕು ಎಂದು ಮನವಿ ಮಾಡುತ್ತಿದೆ. ಏಕೆಂದರೆ ಅವರು ದುಬೈ ಮೂಲಕ ಭಾರತಕ್ಕೆ ಉತ್ಪನ್ನಗಳನ್ನು ಕಳುಹಿಸಬೇಕಾಗಿರುವುದರಿಂದ ವೆಚ್ಚ ಹೆಚ್ಚಾಗುತ್ತದೆ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಶೀಲಿಸುತ್ತೇವೆ ಎಂದು ಲಂಡನ್ನಲ್ಲಿ ದಾರ್ ಹೇಳಿದರು.

ಪ್ರತಿ ವರ್ಷ ಬಜೆಟ್ಗೂ ಮುನ್ನ ವ್ಯಾಪಾರಸ್ಥರು ಈ ವಿಷಯ ಪ್ರಸ್ತಾಪಿಸುತ್ತಾರೆ. ಕಳೆದ ವರ್ಷ, ನಾನು ಹಣಕಾಸು ಸಚಿವನಾಗಿ ಅಂತಹ ವಿನಂತಿಗಳನ್ನು ಬಜೆಟ್ಗೆ ಮೊದಲು ವ್ಯವಹರಿಸಿದ್ದೇನೆ ಎಂದು ತಿಳಿಸಿದ್ದಾರೆ. ಮಾರ್ಚ್ 2021 ರಲ್ಲಿ ಪಾಕಿಸ್ತಾನದ ಆರ್ಥಿಕ ಸಮನ್ವಯ ಸಮಿತಿಯು ವಾಘಾ ಗಡಿಯ ಮೂಲಕ ಭಾರತದಿಂದ 0.5 ಮಿಲಿಯನ್ ಟನ್ ಸಕ್ಕರೆ ಮತ್ತು ಹತ್ತಿಯನ್ನು ಆಮದು ಮಾಡಿಕೊಳ್ಳಲು ಖಾಸಗಿ ವಲಯಕ್ಕೆ ಅನುಮತಿ ನೀಡುವುದಾಗಿ ಹೇಳಿತ್ತು. ಆದರೆ ಈ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾದ ನಂತರ ಹಿಂತೆಗೆದುಕೊಳ್ಳಬೇಕಾಯಿತು.
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಕೂಡ ಭಾರತದೊಂದಿಗೆ ಬಾಂಧವ್ಯವನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಆಗಸ್ಟ್ 2019 ರಲ್ಲಿ ಕಾಶ್ಮೀರದಲ್ಲಿ ಆರ್ಟಿಕಲ್ 370 ಅನ್ನು ಹಿಂತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಅವರನ್ನು ಹೊರಹಾಕುವ ಮೂಲಕ ಪಾಕಿಸ್ತಾನವು ಭಾರತದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಹಾಳು ಮಾಡಿರುವುದನ್ನು ಸ್ಮರಿಸಬಹುದು.
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಭಾಗವಾಗಿ ಭಾರತ ಸರ್ಕಾರವು ಕೈಗೊಂಡ ಸಾಂವಿಧಾನಿಕ ಕ್ರಮಗಳು ಭಾರತದ ಆಂತರಿಕ ವಿಷಯಗಳು ಎಂದು ಸರ್ಕಾರ ಪ್ರತಿಪಾದಿಸಿದೆ. ಎರಡೂ ರಾಷ್ಟ್ರಗಳು ಪರಸ್ಪರರ ದೇಶಗಳಲ್ಲಿ ಆಯಾ ಉಸ್ತುವಾರಿಗಳನ್ನು ಹೊಂದಿವೆ.
ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಪೋಸ್ಟ್ನಲ್ಲಿ, ಪಾಕಿಸ್ತಾನದ ಸರ್ಕಾರದ ಮುಖ್ಯಸ್ಥರಾಗಲು ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ್ದರು. ಷರೀಫ್ ಕೆಲವು ದಿನಗಳ ನಂತರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದರು.
More From GoodReturns

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

ಏಪ್ರಿಲ್ 1ರಿಂದ ಈ ರಾಜ್ಯದ ಸರ್ಕಾರಿ ಜನರಿಗೆ ಹೊಸ ಪಿಂಚಣಿ...ಕೊನೆಯ ಸಂಬಳದ 50%ನಷ್ಟು ಖಚಿತ! ಈ ಗುಡ್ನ್ಯೂಸ್ ಯಾರಿಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

SBI Credit Card: ಎಸ್ಬಿಐ ಗ್ರಾಹಕರೇ ಇಲ್ಲಿ ಗಮನಿಸಿ! ಏಪ್ರಿಲ್ 1 ರಿಂದ ಈ ನಿಯಮ ಚೇಂಜ್

Investment: ಹೂಡಿಕೆ ತಡವಾಗಿ ಮಾಡ್ತಿದ್ದೀರ? 35ರ ನಂತರ ಹೇಗೆ ಸಂಪತ್ತು ನಿರ್ಮಿಸಬೇಕು ಎಂದು ಇಲ್ಲಿ ತಿಳಿಯಿರಿ



Click it and Unblock the Notifications