31 ಮಾರ್ಚ್ 2021 ಆಧಾರ್ ಮತ್ತು ಪ್ಯಾನ್ ಲಿಂಕ್ಗೆ ಕೊನೆಯ ದಿನಾಂಕವಾಗಿದೆ. ಈ ಗಡುವಿನ ಮೊದಲು ನಿಮ್ಮ ಪ್ಯಾನ್-ಆಧಾರ್ ಅನ್ನು ನೀವು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅನ್ನು ಸಹ ನಿಷ್ಕ್ರಿಯಗೊಳಿಸಬಹುದು. ಹೀಗಾಗಿ ಕೊನೆಯ ದಿನವಾದ್ದರಿಂದ ಭಾರತದಾದ್ಯಂತ ಅನೇಕ ಬಳಕೆದಾರರು ಆತುರ ಪ್ರಯತ್ನದಲ್ಲಿ ಲಿಂಕ್ ಮಾಡಲು ವಿಫಲರಾಗಿದ್ದಾರೆ.
ಆದಾಯ ತೆರಿಗೆ ವೆಬ್ಸೈಟ್ಗೆ ಬಳಕೆದಾರರು ಲಾಗ್ ಇನ್ ಆಗಿದ್ದು, ಐಟಿ ಪೋರ್ಟಲ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಆದಾಯ ತೆರಿಗೆ ವೆಬ್ಸೈಟ್ ಡೌನ್ ಆಗಿರುವುದರಿಂದ ಹೆಚ್ಚಿನ ಬಳಕೆದಾರರಿಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಾಗಿನ್ ಮಾಡಲು ಮತ್ತು ಲಿಂಕ್ ಮಾಡಲು ಸಾಧ್ಯವಾಗಿಲ್ಲ.

ನಿಯಮಗಳ ಪ್ರಕಾರ, ಮಾರ್ಚ್ 31, 2021 ರೊಳಗೆ (ಬುಧವಾರ) ನಿಮ್ಮ ಪ್ಯಾನ್ ಅನ್ನು ನಿಮ್ಮ ಆಧಾರ್ನೊಂದಿಗೆ ಲಿಂಕ್ ಮಾಡಲು ನೀವು ವಿಫಲವಾದರೆ ನಿಮ್ಮ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ ಮತ್ತು ನೀವು 1,000 ರೂ ದಂಡವನ್ನು ಪಾವತಿಸಬೇಕಾಗಬಹುದು.
ಇತ್ತೀಚೆಗೆ ಲೋಕಸಭೆಯಲ್ಲಿ ಮಂಡಿಸಲಾದ ಹಣಕಾಸು ಮಸೂದೆಯಲ್ಲಿ ಸೇರಿಸಲಾದ ಹೊಸ ವಿಭಾಗದ ಪ್ರಕಾರ, ನಿರ್ದಿಷ್ಟ ಗಡುವಿನ ಪ್ರಕಾರ ಪ್ಯಾನ್ ಆಧಾರ್ ಆದೇಶವನ್ನು ಕೈಗೊಳ್ಳಲು ವಿಫಲವಾದರೆ 1,000 ರೂ.ವರೆಗೆ ತಡವಾಗಿ ಶುಲ್ಕ ವಿಧಿಸಲಾಗುತ್ತದೆ. ಆದ್ದರಿಂದ, ಭಾರತದಾದ್ಯಂತದ ಬಳಕೆದಾರರು ಆತುರದಲ್ಲಿ ಮುಂದಾಗಿದ್ದು, ಈಗಾಗಲೇ ಇರುವ ಡೆಡ್ಲೈನ್ ಅನ್ನು ವಿಸ್ತರಿಸಲು ಅಥವಾ ಸಮಸ್ಯೆಯನ್ನು ಸರಿಪಡಿಸಲು ಆದಾಯ ತೆರಿಗೆ ಇಲಾಖೆಗೆ ಆಗ್ರಹಿಸಿದ್ದಾರೆ.
ಈ ಮೊದಲು ಪ್ಯಾನ್ಗೆ ಆಧಾರ್ ಅನ್ನು ಜೋಡಿಸುವ ಕೊನೆಯ ದಿನಾಂಕವನ್ನು 30 ಜೂನ್ 2020ಕ್ಕೆ ನಿಗದಿಪಡಿಸಿತ್ತು. ನಂತರ ಇದನ್ನು ಸರ್ಕಾರವು 31 ಮಾರ್ಚ್ 2021ಕ್ಕೆ ವಿಸ್ತರಿಸಿತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications