ಮುಂಬೈ, ಜೂನ್ 10: ದೇಶದ ಸಾಮಾನ್ಯರ ಮನೆ ಮನಗಳಲ್ಲಿ ಹೆಸರುವಾಸಿಯಾಗಿರುವ ಪಾರ್ಲೆ ಜಿ ಬಿಸ್ಕತ್ತು ಲಾಕ್ಡೌನ್ ಸಮಯದಲ್ಲಿ ವಿಶಿಷ್ಠ ಸಾಧನೆಗೆ ಮಾಡಿ ದೇಶದ ಗಮನ ಸೆಳೆದಿದೆ.
ಹೌದು, ಕೊರೊನಾವೈರಸ್ ಲಾಕ್ಡೌನ್ ಸಮಯದಲ್ಲಿ ಭಾರತದಲ್ಲಿ ಅತಿ ಹೆಚ್ಚು ಬಿಸ್ಕತ್ತುಗಳು ಮಾರಾಟವಾದ ಬ್ರಾಂಡ್ಗೆ ಪಾರ್ಲೆ ಜಿ ಪಾತ್ರವಾಗಿದೆ.
ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಎಂಟು ದಶಕಗಳಲ್ಲಿ ತಮ್ಮ ಪಾರ್ಲೆ ಜಿ ಬಿಸ್ಕತ್ತುಗಳು ಅತಿ ಹೆಚ್ಚು ಮಾರಾಟವಾಗಿವೆ ಎಂದು ಸಂಸ್ಥೆ ತಿಳಿಸಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬ ಅಂಕಿ ಅಂಶಗಳನ್ನು ಪಾರ್ಲೆ ಜಿ ನೀಡಿಲ್ಲ.
ಸುಲಭವಾಗಿ ಸಿಕ್ಕಿತು
1938 ರಿಂದ ಪಾರ್ಲೆ ಜಿ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ವಿಸ್ಕತ್ತುಗಳನ್ನು ಮಾರಾಟ ಮಾಡುತ್ತಿದೆ. ಲಾಕ್ಡೌನ್ ಸಮಯದಲ್ಲಿ ಜನರು ಸುಲಭ ಮತ್ತು ಸರಳವಾದ ಅಗತ್ಯ ಆಹಾರ ಪದಾರ್ಥಗಳನ್ನು ಸಂಗ್ರಹಿಸಿರುವುದರಿಂದ ಈ ಶ್ರೇಯಸ್ಸನ್ನು ಪಡೆಯಲು ಸಾಧ್ಯವಾಗಿದೆ ಎಂದು ಪಾರ್ಲೆ ಜಿ ಕಂಪೆನಿ ತಿಳಿಸಿದೆ.
ಎನ್ಜಿಓ ಗಳಿಂದ ಹೆಚ್ಚಿನ ಬೇಡಿಕೆ
ಲಾಕ್ ಡೌನ್ ಸಮಯದಲ್ಲಿ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಪಾರ್ಲೆ ಜಿ ಬಿಸ್ಕತ್ತುಗಳು ಕಡಿಮೆಯಾಗದಂತೆ ಕಂಪೆನಿ ನೋಡಿಕೊಂಡಿತ್ತು. ಹಲವಾರು ರಾಜ್ಯ ಸರ್ಕಾರಗಳು ಬಿಸ್ಕೆಟ್ಗಾಗಿ ವಿನಂತಿಸಿದ್ದವು. ಅಲ್ಲದೇ ಅನೇಕ ಎನ್ಜಿಒಗಳು ಪಾರ್ಲೆ-ಜಿ ಯನ್ನು ಹಂಚಲು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದ್ದವು. ಹೀಗಾಗಿ ಮಾರ್ಚ್ 25 ರಿಂದ ಕಂಪನಿಯು ತನ್ನ ಉತ್ಪಾದನೆಯನ್ನು ದ್ವಿಗುಣಗೊಳಿಸಿತ್ತು.
130 ಕಾರ್ಖಾನೆಗಳು
ಪ್ರಸ್ತುತ, ಪಾರ್ಲೆ ಜಿ ಕಂಪನಿಯು ಭಾರತದಾದ್ಯಂತ 130 ಕಾರ್ಖಾನೆಗಳನ್ನು ಹೊಂದಿದ್ದು, ಅವುಗಳಲ್ಲಿ ಸದ್ಯ 120 ಘಟಕಗಳನ್ನು ಬಿಸ್ಕತ್ತುಗಳನ್ನು ಉತ್ಪಾದಿಸುತ್ತಿವೆ. ಹತ್ತು ದಾಸ್ತಾನು ಮಳಿಗೆಗಳಾಗಿವೆ.
ಪ್ರತಿ ಕೆಜಿ ಗೆ 100 ರೂ
ಪಾರ್ಲೆ-ಜಿ ಬ್ರಾಂಡ್ ಪ್ರತಿ ಕೆ.ಜಿ.ಗೆ 100 ರೂ.ಗಿಂತ ಕಡಿಮೆ ದರಕ್ಕೆ ಸಾಮಾನ್ಯ ವರ್ಗಕ್ಕೆ ಲಭಿಸುತ್ತದೆ. ಇದು ಒಟ್ಟು ಉದ್ಯಮದ ಆದಾಯದ ಮೂರನೇ ಒಂದು ಭಾಗವನ್ನು ಹೊಂದಿದೆ ಮತ್ತು ಮಾರಾಟವಾದ ಪರಿಮಾಣದ 50% ಕ್ಕಿಂತ ಹೆಚ್ಚು ಎಂದು ಪಾರ್ಲೆ ಜಿ ಕಂಪೆನಿ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications