ನವದೆಹಲಿ: ಮಾರಕ ಕೊರೊನಾವೈರಸ್ಗೆ ಔಷಧಿ ಕೊರೊನಿಲ್ ಕಂಡು ಹಿಡಿದಿದ್ದೇವೆ ಎಂದಿದ್ದ ಆಯುರ್ವೇದ ಉತ್ಪನ್ನಗಳ ತಯಾರಿಕಾ ಸಂಸ್ಥೆ ಪತಂಜಲಿ ಇದೀಗ ಉಲ್ಟಾ ಹೊಡೆದಿದೆ.
ಕೊರೊನಿಲ್ ಕೊರೊನಾವೈರಸ್ ಅನ್ನು 'ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು' ಎಂದು ತಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಪತಂಜಲಿಯ ಆಚಾರ್ಯ ಬಾಲಕೃಷ್ಣ ಮಂಗಳವಾರ ತಿಳಿಸಿದ್ದಾರೆ.
ಕಳೆದ ವಾರ ಯೋಗ ಗುರು ರಾಮದೇವ್ ಅವರ ಪತಂಜಲಿ ಕೊರೊನಿಲ್ ಔಷಧಿ ಕೊರೊನಾವೈರಸ್ ಪೀಡಿತ ರೋಗಿಗಳನ್ನು ನೂರಕ್ಕೆ ನೂರರಷ್ಟು ಗುಣಪಡಿಸುತ್ತದೆ ಎಂದು ಹೇಳಿದ್ದು ಸಾಕಷ್ಟು ವಿವಾದ ಸೃಷ್ಟಿಸಿತ್ತು. ಔಷಧಿಯ ಪರಿಣಾಮದ ಬಗ್ಗೆ ಸರ್ಕಾರ ಮತ್ತು ನಾಗರಿಕರು ಪುರಾವೆ ಕೇಳಿದ್ದರು.
ಕೊರೊನಿರಲ್ ಕೊರೊನಾವೈರಸ್ ರೋಗಿಗಳನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಲಿಲ್ಲ, ನಾವು ಔಷಧಿ ತಯಾರಿಸಿದ್ದೇವೆ. ಅವುಗಳನ್ನು ಕೊರೊನಾವೈರಸ್ ರೋಗಿಗಳನ್ನು ಗುಣಪಡಿಸುವ ಕ್ಲಿನಿಕಲ್ ಪ್ರಯೋಗಗಳಲ್ಲಿ ಮಾತ್ರ ಬಳಸಿದ್ದೇವೆ. ಅದೇ ಕೊರೊನಾವೈರಸ್ಗೆ ಔಷಧಿ ಎಂದು ನಾವು ಎಲ್ಲೂ ಹೇಳಿಲ್ಲ. ಕ್ಲಿನಿಕಲ್ ಪ್ರಯೋಗ ನಡೆಸಲು ಸರ್ಕಾರದಿಂದ ಅಗತ್ಯ ಅನುಮತಿಯನ್ನು ಪಡೆದಿದ್ದೇವೆ ಎಂದು ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಆಚಾರ್ಯ ಬಾಲ್ಕೃಷ್ಣ ಅವರು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರತದ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 5,66,840 ಕ್ಕೆ ಏರಿಕೆಯಾಗಿದೆ. 3,34,822 ಜನ ಚೇತರಿಸಿಕೊಂಡಿದ್ದಾರೆ. ಭಾರತದ ಚೇತರಿಕೆ ದರವು ಪ್ರಸ್ತುತ ಸುಮಾರು 60% ರಷ್ಟಿದೆ. 16,893 ಜನರು ಮಾರಕ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications