ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ 2023 ಅನ್ನು ಫೆಬ್ರವರಿ 1ರಂದು ಮಂಡನೆ ಮಾಡಿದ್ದಾರೆ. ಈ ಸಂದರ್ಭದಲ್ಲೆ ಟಿಡಿಎಸ್ ಅನ್ನು ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ಯಾನ್ ಇಲ್ಲದ ಇಪಿಎಫ್ ಖಾತೆಗಳಿಗೆ ತೆರಿಗೆಯನ್ನು ಶೇಕಡ 30ರಿಂದ ಶೇಕಡ 20ಕ್ಕೆ ಇಳಿಕೆ ಮಾಡುವ ಪ್ರಸ್ತಾಪವನ್ನು ವಿತ್ತ ಸಚಿವೆ ಈ ಸಂದರ್ಭದಲ್ಲೇ ಮಾಡಿದ್ದಾರೆ.
ಹೊಸ ಆದಾಯ ತೆರಿಗೆ ನಿಯಮದ ಪ್ರಕಾರ ಪಿಎಫ್ ಪಾವತಿದಾರರು ಇಪಿಎಫ್ ವಿತ್ಡ್ರಾ ಮಾಡುವಾಗ ಕೊಂಚ ಎಡವಿದರೂ ತೆರಿಗೆಯನ್ನು ಪಾವತಿ ಮಾಡಬೇಕಾಗುತ್ತದೆ. ಹೌದು ಹೊಸ ನಿಯಮದ ಪ್ರಕಾರ ನೀವು ಪಿಎಫ್ ಖಾತೆಯನ್ನು ತೆರೆದು 5 ವರ್ಷಗಳಾಗಿಲ್ಲದಿದ್ದರೆ, ಪಿಎಫ್ ಮೊತ್ತದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಹಾಗೆಯೇ ವಾರ್ಷಿಕವಾಗಿ 2.5 ಲಕ್ಷ ರೂಪಾಯಿಗಿಂತ ಅಧಿಕ ಆದಾಯವನ್ನು ಹೊಂದಿದ್ದರೂ ನಿಮಗೆ ಪಿಎಫ್ ಮೊತ್ತದ ಮೇಲೆ ತೆರಿಗೆ ವಿಧಿಸಲಾಗುತ್ತದೆ.
ದೀಪಾವಳಿ ಬಳಿಕ ಪಿಎಫ್ ಬಡ್ಡಿದರ ಜಮೆ ಸಾಧ್ಯತೆ, ಹೀಗೆ ಚೆಕ್ ಮಾಡಿ
"ಪ್ಯಾನ್ ಲಿಂಕ್ ಆಗಿರದ ಪ್ರಾವಿಡೆಂಟ್ ಫಂಡ್ ಖಾತೆಗೆ ಪ್ರಸ್ತುತ ಶೇಕಡ 30ರಷ್ಟು ಬಡ್ಡಿದರವನ್ನು ವಿಧಿಸಲಾಗುತ್ತದೆ. ಆದರೆ ಇದನ್ನು ಶೇಕಡ 20ಕ್ಕೆ ಇಳಿಸುವ ನಿರ್ಧಾರವನ್ನು ನಾವು ಮಾಡಿದ್ದೇವೆ. ಇದು ಪ್ಯಾನ್ ಲಿಂಕ್ ಆಗದ ಪ್ರಕರಣಗಳಿಗೆ ಅನ್ವಯವಾಗಲಿದೆ," ಎಂದು ಕೇಂದ್ರ ಹಣಕಾಸು ಸಚಿವೆ ಬಜೆಟ್ ಮಂಡನೆ ಮಾಡುವಾಗ ತಿಳಿಸಿದ್ದಾರೆ.

ತೆರಿಗೆಗೆ ಒಳಪಡುವ ಆದಾಯ
ಈ ಬಗ್ಗೆ ಮಾಹಿತಿ ನೀಡಿದ ತೆರಿಗೆ ತಜ್ಞ ಬಲ್ವಂತ್ ಜೈನ್, "ನೀವು ಐದು ವರ್ಷಕ್ಕೂ ಮುನ್ನ ತೆರಿಗೆಯನ್ನು ಪಾವತಿ ಮಾಡಿದರೆ ನಿಮಗೆ ನಿಮ್ಮ ಪಿಎಫ್ ಮೊತ್ತದ ಮೇಲೆ ತೆರಿಗೆಯನ್ನು ವಿಧಿಸಲಾಗುತ್ತದೆ. ಪಿಎಫ್ ಖಾತೆಯಲ್ಲಿ ಪ್ಯಾನ್ ಕಾರ್ಡ್ ಲಿಂಕ್ ಆಗಿದ್ದರೆ ಹಣ ವಿತ್ಡ್ರಾ ಮಾಡಿದರೆ ಯಾವುದೇ ಟಿಡಿಎಸ್ ವಿಧಿಸಲಾಗುವುದಿಲ್ಲ. ಪ್ಯಾನ್ ಲಿಂಕ್ ಆಗಿಲ್ಲದಿದ್ದರೆ ಪಿಎಫ್ ಖಾತೆಯ ಮೊತ್ತವನ್ನು ತೆರಿಗೆಗೆ ಅನ್ವಯವಾಗುವ ಆದಾಯಕ್ಕೆ ಸೇರ್ಪಡೆ ಮಾಡಲಾಗುತ್ತದೆ," ಎಂದು ತಿಳಿಸಿದ್ದಾರೆ.
ಪ್ರಾವಿಡೆಂಟ್ ಫಂಡ್ ಖಾತೆಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ, ಪಿಎಫ್ ಖಾತೆಯ ಒಟ್ಟು ಮೊತ್ತದಿಂದ ನಿವ್ವಳ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಟಿಡಿಎಸ್ ದರ ಪ್ರಸ್ತುತ ಶೇಕಡ 30ರಷ್ಟು ಆಗಿದೆ. ಇದನ್ನು ಏಪ್ರಿಲ್ 2023ರಿಂದ ಅಥವಾ ಹಣಕಾಸು ವರ್ಷ 2023-2024ರಿಂದ ಜಾರಿಗೆ ಬರುವಂತೆ ಶೇಕಡ 20ಕ್ಕೆ ಇಳಿಸಲಾಗುತ್ತದೆ ಎಂದು ಕೂಡಾ ಮಾಹಿತಿ ನೀಡಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications