ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ (PMDKY) ಇದು ಕೇಂದ್ರ ಸರ್ಕಾರದ ಪ್ರಮುಖವಾದ ಯೋಜನೆಯಾಗಿದೆ. ಮೂಲಗಳ ಪ್ರಕಾರ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯ ಪಡೆಯುವ ಸಾದ್ಯತೆ ಇದೆ. ಈ ಯೋಜನೆಯು ವಿಶೇಷವಾಗಿ ಕೃಷಿ ಉತ್ಪಾದನೆ ಕಡಿಮೆ ಇರುವ ಜಿಲ್ಲೆಗಳಿಗೆ ಸಹಾಕಾರಿಯಾಗುತ್ತದೆ.

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆಯನ್ನು ಸೂಚಿಸಿದ್ದರೆ ದೇಶದ 1.7 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ. ಈ ಯೋಜನೆ ಕೃಷಿಯನ್ನು ಆಧುನೀಕಕರವನ್ನು ಮಾಡುವದರ ಜೊತೆಗೆ ರೈತರ ಆದಾಯವನ್ನು ಹೆಚ್ಚಿಸುವಂತಹ ಕಾರ್ಯವನ್ನು ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು 2025 ರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಯನ್ನು ಮಾಡಿದ್ದರು. ಈ ಯೋಜನೆಯ ಮೂಲಕ ಕೃಷಿಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸುವುದು. ಒಂದು ಬೆಳೆಯ ಬದಲು ಮಿಶ್ರ ಬೇಸಾಯ ಮಾಡುವುದು.ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳನ್ನು ಬೆಳೆಯುವುದು. ಗ್ರಾಮ ಮಟ್ಟದಲ್ಲಿ ನೀರಾವರಿ ಮತ್ತು ಸಾಲ ಸೌಲಭ್ಯಗಳನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ.
ಈ ಯೋಜನೆಗಾಗಿ ಕೇಂದ್ರ ಸರ್ಕಾರ 1.37 ಲಕ್ಷ ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಪಂಚಾಯತ್ ಮತ್ತು ಬ್ಲಾಕ್ ಮಟ್ಟದಲ್ಲಿ ಕೃಷಿ ರಚನೆಯನ್ನು ಬಲಪಡಿಸಲು ಈ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಖರ್ಚು ಮಾಡಬೇಕಾಗುತ್ತದೆ.
ಎಷ್ಟು ಜಿಲ್ಲೆಗಳಲ್ಲಿ ಜಾರಿ?
ಕೇಂದ್ರ ಸರ್ಕಾರ ದೇಶದ 100 ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಯೋಜನೆಯನ್ನು ಜಾರಿಗೆ ತರಲಿದೆ. ಇವು ಕೃಷಿ ಉತ್ಪಾದನೆ ಸರಾಸರಿ ಕಡಿಮೆ ಇರುವ ಜಿಲ್ಲೆಗಳಾಗಿರುತ್ತವೆ. ಈ ಪ್ರದೇಶಗಳಲ್ಲಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳೊಂದಿಗೆ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನೀತಿಗಳನ್ನು ರೂಪಿಸುತ್ತದೆ, ಇದರಿಂದ ರೈತರು ನೇರ ಪ್ರಯೋಜನಗಳನ್ನು ಪಡೆಯಬಹುದು.
ಈ ಯೋಜನೆಗ ಒಂದು ಹೆಕ್ಟೇರ್ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ರೈತರ ಮೇಲೆ. ಅಂದರೆ, ಸಣ್ಣ ಮತ್ತು ಅತಿ ಸಣ್ಣ ರೈತರು ಇದರ ಪ್ರಾಥಮಿಕ ಫಲಾನುಭವಿಗಳಾಗಿರುತ್ತಾರೆ. ಹೆಚ್ಚಿನ ಮಹಿಳೆಯರು ಕೃಷಿಯತ್ತ ಆಕರ್ಷಿತರಾಗುವಂತೆ ಮಾಡಲು ಈ ಯೋಜನೆಯಲ್ಲಿ ಮಹಿಳಾ ರೈತರಿಗೆ ವಿಶೇಷ ಪ್ರೋತ್ಸಾಹಧನ ಸಹ ನೀಡಲಾಗುತ್ತದೆ.
ಪ್ರಯೋಜನಗಳೇನು..?
- ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯಿಂದ ರೈತರ ಬೆಲೆಯ ಇಳುವರಿ ಮತ್ತು ಆದಾಯ ಎರಡೂ ಹೆಚ್ಚಾಗಬಹುದು.
- ರೈತರು ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಪಡೆಯಲು ಸಹಾಯಕ.
- ಕೃಷಿಗೆ ಬೆಲೆಗೆ ಅಗತ್ಯವಾದ ರಸಗೊಬ್ಬರವನ್ನು ಸಹ ಉಚಿತವಾಗಿ ನೀಡಲಾಗುತ್ತದೆ.
- ಪಂಪ್ ಅಥವಾ ಟ್ರ್ಯಾಕ್ಟರ್ ನಂತಹ ನೀರಾವರಿ ಉಪಕರಣಗಳ ಖರೀದಿಗೆ ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು.
- ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳ ಬಳಕೆಯ ಬಗ್ಗೆ ರೈತರಿಗೆ ತರಬೇತಿ ನೀಡಲಾಗುವುದು.
- ಕೊಯ್ಲು ಮಾಡಿದ ನಂತರ ಬೆಳೆಯನ್ನು ಸುರಕ್ಷಿತವಾಗಿಡಲು ಪಂಚಾಯತ್ ಮತ್ತು ಬ್ಲಾಕ್ ಮಟ್ಟದಲ್ಲಿ ಶೇಖರಣಾ ಸೌಲಭ್ಯಗಳನ್ನು ಸಿದ್ಧಪಡಿಸಲಾಗುತ್ತದೆ.
- ರೈತರು ಕೃಷಿಗಾಗಿ ಸುಲಭವಾಗಿ ಸಾಲಗಳನ್ನು ಪಡೆದುಕೊಳ್ಳಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications