ಯುವ ಪ್ರತಿಭಾವಂತ ಜನತೆಯೇ ದೇಶದ ಮುಂದಿನ ಅತೀ ದೊಡ್ಡ ಆಸ್ತಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿಯೊಂದು ದೇಶಗಳು ಯುವಜನತೆಯ ಮೇಲೆ ಹೆಚ್ಚಿನ ಹೂಡಿಕೆ ಮಾಡಿ ಅವರನ್ನು ದೇಶದ ದೊಡ್ಡ ಆಸ್ತಿಯನ್ನಾಗಿ ಪರಿವರ್ತಿಸುವಲ್ಲಿ ತೊಡಗಿದೆ. ಈ ಮೂಲಕ ದೇಶದ ಭವಿಷ್ಯವನ್ನು ಸದೃಢ ಮಾಡುವಲ್ಲಿ ನಿರತವಾಗಿದೆ. ವಿಶ್ವದ ಹಲವಾರು ರಾಷ್ಟ್ರಗಳು ಕೂಡ ತಮ್ಮ ತಮ್ಮ ದೇಶದಲ್ಲಿರುವ ಯುವಜನತೆಗೆ ಒಂದಿಲ್ಲೊಂದು ಅತ್ಯುತ್ತಮ ಸೌಲಭ್ಯಗಳನ್ನು ನೀಡುವ ಮೂಲಕ ಅವರನ್ನು ದೇಶದಲ್ಲೇ ಉಳಿಸಿ, ದೊಡ್ಡ ಆಸ್ತಿಯನ್ನಾಗಿ ಮಾಡುವಲ್ಲಿ ನಿರತವಾಗಿವೆ. ಈ ಹಿನ್ನೆಲೆಯಲ್ಲಿ ಸದ್ಯ ಭಾರತ ಸರ್ಕಾರ ಕೂಡ ಯುವಜನತೆಯ ಮೇಲೆ ಹೆಚ್ಚಿನ ಗಮನ ಹರಿಸಿದ್ದು, ಸದ್ಯ ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆಯನ್ನು ಪ್ರಕಟಿಸಿದ್ದು, ಒಂದೇ ದಿನ ಬರೊಬ್ಬರಿ 155,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಸುಮಾರು 91,000 ವಿವಿಧ ಅವಕಾಶಗಳಿಗಾಗಿ ನೋಂದಾಯಿಸಿಕೊಂಡಿದ್ದಾರೆ.
ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಮತ್ತು ಸೂಕ್ತವಾದ ಇಂಟರ್ನ್ಶಿಪ್ ಅವಕಾಶಕ್ಕೆ ಅಭ್ಯರ್ಥಿಗಳನ್ನು ಹೊಂದಿಸಲು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಯನ್ನು ಬಳಸಿಕೊಂಡು ಕಿರುಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇನ್ನು ಅಂತಿಮ ಪಟ್ಟಿಯನ್ನು ಅನ್ನು ಅಕ್ಟೋಬರ್ 15 ರಂದು ಕಂಪನಿಗಳೊಂದಿಗೆ ಹಂಚಿಕೊಳ್ಳಲಾಗುವುದು.

ಏನಿದು ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆ?
ಜುಲೈ 23 ರಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಥಿಸುವ ಭಾಗವಾಗಿ ಈ ಯೋಜನೆಯನ್ನು ಘೋಷಿಸಿದ್ದರು. ಸದ್ಯ ಅಕ್ಟೋಬರ್ 3 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆಯ ಪ್ರಾಯೋಗಿಕ ಭಾಗ ಆರಂಭಗೊಂಡಿದ್ದು, ಡಿಸೆಂಬರ್ 2 ರಿಂದ ನೈಜ ಇಂಟರ್ನ್ಶಿಪ್ ಆರಂಭವಾಗಲಿದೆ. ಯುವಜನತೆಗೆ ಉದ್ಯೋಗವನ್ನು ಕಲ್ಪಿಸುವುದು ಇದರ ಮುಖ್ಯ ಭಾಗವಾಗಿದೆ.
ಇದರ ಆರಂಭಿಕ ಗುರಿ ಏನು?
ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆಯು 21 ರಿಂದ 24 ವರ್ಷ ವಯಸ್ಸಿನ ಯುವಕರಿಗೆ 2024-25ರ ಹಣಕಾಸು ವರ್ಷದಲ್ಲಿ 1,25,000 ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅದರಲ್ಲೂ 800 ಕೋಟಿ ರೂ. ಬಜೆಟ್ ನಲ್ಲಿ ಇಂಟರ್ನ್ಶಿಪ್ ಯೋಜನೆಯ ಮೂಲಕ ಐದು ವರ್ಷಗಳಲ್ಲಿ ಭಾರತದ ಉನ್ನತ ಕಂಪೆನಿಗಳಲ್ಲಿ ಸುಮಾರು ಒಂದು ಕೋಟಿ ಯುವಜನತೆಯನ್ನು ಕೌಶಲ್ಯಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದರನ್ವಯ ಯುವಕರು ಮುಂದಿನ 12 ತಿಂಗಳುಗಳ ಕಾಲ ನಿಜ ಜೀವನದ ವ್ಯಾಪಾರ ಪರಿಸರ, ವಿವಿಧ ವೃತ್ತಿಗಳು ಮತ್ತು ಉದ್ಯೋಗಾವಕಾಶಗಳಿಗೆ ಒಗ್ಗಿಕೊಳ್ಳಲಿದ್ದು, ಇದು ಭವಿಷ್ಯದಲ್ಲಿ ಹೆಚ್ಚಿನ ಫಲವನ್ನು ತಂದುಕೊಡುವ ವಿಶ್ವಾಸವನ್ನು ಕೇಂದ್ರ ಹೊಂದಿದೆ.
ಜುಬಿಲಂಟ್ ಫುಡ್ವರ್ಕ್ಸ್, ಮಾರುತಿ ಸುಜುಕಿ ಇಂಡಿಯಾ, ಐಷರ್ ಮೋಟಾರ್ ಲಿಮಿಟೆಡ್, ಲಾರ್ಸೆನ್ ಮತ್ತು ಟೂಬ್ರೊ ಲಿಮಿಟೆಡ್, ಮುತ್ತೂಟ್ ಫೈನಾನ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಮುಂತಾದ ಪ್ರಮುಖ ಖಾಸಗಿ ವಲಯದ ಕಂಪೆನಿಗಳು ಸೇರಿದಂತೆ 193 ಸಂಸ್ಥೆಗಳು ಇಂಟರ್ನ್ಶಿಪ್ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ.
ಕಾರ್ಯಾಚರಣೆ ನಿರ್ವಹಣೆ, ಉತ್ಪಾದನೆ, ನಿರ್ವಹಣೆ ಮತ್ತು ಮಾರಾಟ ಸೇರಿದಂತೆ 24 ವಲಯಗಳು ಮತ್ತು 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಟರ್ನ್ಶಿಪ್ ಲಭ್ಯವಿದೆ. ನಂತರ ಪ್ರಯಾಣ ಮತ್ತು ಆತಿಥ್ಯ, ವಾಹನಗಳು, ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳು ಕೂಡ ಇವುಗಳಲ್ಲಿ ಸೇರಿಕೊಂಡಿವೆ. ಈ ಕಾರ್ಯಕ್ರಮವು 37 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 737 ಜಿಲ್ಲೆಗಳಲ್ಲಿ ಅವಕಾಶಗಳನ್ನು ಹೊಂದಿದೆ.
ಯೋಜನೆಯ ಮಾನದಂಡವೇನು?
ಇಂಟರ್ನ್ಶಿಪ್ ಯೋಜನೆಯ ಭಾಗವಾಗಲು ಹಲವು ಮಾನದಂಡಗಳನ್ನು ವಿಧಿಸಲಾಗಿದೆ. ಅಭ್ಯರ್ಥಿಗಳು ಹೈಸ್ಕೂಲ್, ಹೈಯರ್ ಸೆಕೆಂಡರಿ ಸ್ಕೂಲ್ನಲ್ಲಿ ಉತ್ತೀರ್ಣರಾಗಿರಬೇಕು. ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಪ್ರಮಾಣಪತ್ರವನ್ನು ಹೊಂದಿರಬೇಕು, ಪಾಲಿಟೆಕ್ನಿಕ್ ಇನ್ಸ್ಟಿಟ್ಯೂಟ್ನಿಂದ ಡಿಪ್ಲೊಮಾ ಹೊಂದಿರಬೇಕು ಅಥವಾ ಪದವಿ ಪದವಿ ಹೊಂದಿರಬೇಕು. ವ್ಯಕ್ತಿಗಳು ಭಾರತೀಯ ಪ್ರಜೆಗಳಾಗಿರಬೇಕು. ಅವರು ಪೂರ್ಣ ಪ್ರಮಾಣದ ಉದ್ಯೋಗವನ್ನು ಹೊಂದಿರದ ಮತ್ತು ಪೂರ್ಣ ಸಮಯವನ್ನು ಶಿಕ್ಷಣದಲ್ಲಿ ತೊಡಗಿಸಿಕೊಂಡಿರುವವರಾಗಿರಬೇಕು. ಆನ್ಲೈನ್ ಅಥವಾ ದೂರಶಿಕ್ಷಣ ಕಾರ್ಯಕ್ರಮಗಳಲ್ಲಿ ದಾಖಲಾದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇಂಟರ್ನ್ಗಳಿಗೆ ಹಣಕಾಸಿನ ನೆರವು:
ಎಂಸಿಎ ಸೇರ್ಪಡೆಗೊಳ್ಳುವಾಗ ಇಂಟರ್ನ್ಗೆ ಒಂದು ಬಾರಿಯ ರೂ. 6,000 ನೇರ ಹಣಕಾಸಿನ ಕೊಡುಗೆ ಲಭಿಸುತ್ತದೆ. ಅಲ್ಲದೆ ಪ್ರಧಾನಮಂತ್ರಿ ಜೀವನ್ ಜ್ಯೋತಿ ಮತ್ತು ಪಿಎಂ ಸುರಕ್ಷಾ ಯೋಜನೆ ಅಡಿಯಲ್ಲಿ ಸುರಕ್ಷತೆಗೂ ಪಾತ್ರವಾಗುತ್ತಾರೆ. ಇನ್ನು ಇಂಟರ್ನ್ಗೆ ಮಾಸಿಕವಾಗಿ 5,000 ರೂಪಾಯಿಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು. ಈ ಮೊತ್ತದಲ್ಲಿ 4,500 ರೂಪಾಯಿಗಳನ್ನು ಸರ್ಕಾರವು ವಿತರಿಸಿದರೆ ಉಳಿದ 500 ರೂ. ಮೊತ್ತವನ್ನು ಕಂಪನಿ ಪಾವತಿಸುತ್ತದೆ.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಚಾರ್ಟರ್ಡ್ ಅಕೌಂಟೆಂಟ್ಗಳು (ಸಿಎ), ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ಗಳು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಅಥವಾ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ನಿಂದ ಪದವಿಗಳನ್ನು ಹೊಂದಿರುವವರು ಕೂಡ ಅರ್ಜಿ ಸಲ್ಲಿಸಲು ಅನರ್ಹರಾಗಿದ್ದಾರೆ. 2023-24ನೇ ಹಣಕಾಸು ವರ್ಷದಲ್ಲಿ ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು 8 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದರೆ ಅಥವಾ ಸರ್ಕಾರಿ ಉದ್ಯೋಗಿಯಾಗಿದ್ದರೆ ಅನರ್ಹರಾಗಿರುತ್ತಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications