ಅನ್ನದಾತರಿಗೆ ಗುಡ್ನ್ಯೂಸ್ ಸಿಕ್ಕಿದೆ...ಪ್ರಧಾನಿ ಮೋದಿ ಅವರ ಮಹತ್ವದ ಯೋಜನೆಯಲ್ಲಿ ಒಂದಾದ, ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಇಂದು ಬಿಡುಗಡೆಯಾಗಲಿದೆ. ಇದರ ಅಡಿಯಲ್ಲಿ ರೈತರ ಖಾತೆಗೆ ಇಂದು 2000 ರೂ. ಹಣ ಜಮೆಯಾಗಲಿದೆ. ಅಂದರೆ ಸುಮಾರು 10 ಕೋಟಿ ಜನ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.
ವಿಶ್ವದಲ್ಲೇ ಅತಿದೊಡ್ಡ ಡಿಬಿಟಿ ಸ್ಕೀಮ್ ಆದ ಇದರಲ್ಲಿ ವರ್ಷಕ್ಕೆ 6,000 ರೂ ನೀಡಲಾಗುತ್ತದೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ 2,000 ರೂ ನೀಡಲಾಗುತ್ತದೆ. ಇಂದು ಅದರ ಒಂದು ಕಂತಿನ ಹಣ ಬಿಡುಗಡೆ ಆಗುತ್ತಿದೆ. 2018-19ರಿಂದ ಆರಂಭವಾಗಿ ಇಲ್ಲಿಯವರೆಗೆ 8-11 ಕೋಟಿ ರೈತರು 18 ಕಂತುಗಳ ಹಣ ಪಡೆದಿದ್ದಾರೆ. ಈ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನಲ್ಲಿ, ಒಟ್ಟು ₹22,000 ಕೋಟಿ ಹಣವನ್ನು 10 ಕೋಟಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಆದರೆ ಎಲ್ಲಾ ರೈತರಿಗೂ ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಅಂದರೆ ತಮ್ಮ ಭೂಮಿ ದಾಖಲೆಗಳು, ಬ್ಯಾಂಕ್ ಖಾತೆ ವಿವರ ಹಾಗೂ ಆಧಾರ್ ಸಂಖ್ಯೆ ಸರಿಯಾಗಿ ಸಲ್ಲಿಸಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇನ್ನು ಇದುವರೆಗೂ ಈ ಯೋಜನೆಯ ಅಡಿ 18 ಕಂತುಗಳ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಅಂದರೆ ಒಟ್ಟು 11 ಕೋಟಿಗೂ ಹೆಚ್ಚು ರೈತರಿಗೆ ಕೇಂದ್ರ ಸರ್ಕಾರ ಈ ಯೋಜನೆಯ ಪ್ರಯೋಜನವನ್ನು ನೀಡಿದೆ. ಹಿಂದಿನ ಕಂತಿನಲ್ಲಿ ಒಟ್ಟು 9.58 ಕೋಟಿ ರೈತರು ಪ್ರಯೋಜನಗಳನ್ನು ಪಡೆದಿದ್ದಾರೆ.
ಏನಿದು ಪಿಎಂ ಕಿಸಾನ್ ಸಮ್ಮಾನ್ ಯೋಜನೆ..?
ಇನ್ನು ಈ ಪಿಎಂ ಕಿಸಾನ್ ಯೋಜನೆಯಡಿ ರೈತರು ವರ್ಷಕ್ಕೆ 6,000 ರೂ. ಹಣವನ್ನು ಸಹಾಯಧನವನ್ನಾಗಿ ಪಡೆಯುತ್ತಾರೆ. ಅಂದರೆ ಈ 6,000 ರೂ. ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮೆಯಾಗುತ್ತದೆ. ಪ್ರತಿ 4 ತಿಂಗಳಿಗೊಮ್ಮೆ ಒಂದೊಂದು ಕಂತಿನಂತೆ, ಮೂರು ಕಂತುಗಳ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುತ್ತದೆ.
ಯಾರ್ಯಾರು ಈ ಯೋಜನೆಗೆ ಅರ್ಹರಲ್ಲ..?
ಇನ್ನು ಈ ಯೋಜನೆಯಡಿ ಹಣ ಪಡೆದುಕೊಳ್ಳುವ ಅರ್ಹತೆ ಹೊಂದಿರುವುದು, ಕೃಷಿ ಜಮೀನು ಹೊಂದಿರುವ ರೈತರು ಮಾತ್ರ. ತೆರಿಗೆ ಪಾವತಿ ಮಾಡುವ ವೈದ್ಯ, ವಕೀಲ, ಎಂಜಿನಿಯರ್, ಸರ್ಕಾರಿ ಉದ್ಯೋಗಿಗಳು, ಜನಪ್ರತಿನಿಧಿಗಳು ಯಾರೇ ಕೃಷಿ ಜಮೀನು ಹೊಂದಿದ್ದರು ಈ ಯೋಜನೆಯ ಫಲ ಅವರಿಗೆ ಸಿಗುವುದಿಲ್ಲ. ಹಾಗೆಯೇ 10,000 ರೂ. ಅಥವಾ ಅದಕ್ಕಿಂತ ಹೆಚ್ಚಿನ ಮಾಸಿಕ ಪಿಂಚಣಿ ಪಡೆಯುವವರು ಕೂಡ ಈ ಯೋಜನೆಯ ಫಲಾನುಭವಿಗಳಾಗಲು ಅನರ್ಹರು. ಕೃಷಿಯನ್ನೇ ನಂಬಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಮಾತ್ರ ಈ ಯೋಜನೆಯಾಗಿದ್ದು, ಅರ್ಹ ಕುಟುಂಬ ಸದಸ್ಯರಲ್ಲಿ ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು ಸೇರಿದ್ದಾರೆ.
ಅಲ್ಲದೇ ಸಾಂಸ್ಥಿಕ ಭೂಮಾಲೀಕರಲ್ಲಿ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ, ರೈತ ಕುಟುಂಬಗಳಿಗೂ ಈ ಯೋಜನೆ ಅನ್ವಯಿಸುವುದಿಲ್ಲ. ಹಾಗೆಯೇ ಯಾವುದೇ ಜನಪ್ರತಿನಿಧಿಗಳಿಗೂ ಈ ಯೋಜನೆ ಅನ್ವಯಿಸುವುದಿಲ್ಲ.
ಫಲಾನುಭವಿಗಳ ಸ್ಟೇಟಸ್ ಪರಿಶೀಲಿಸುವುದು ಹೇಗೆ..?
ಇನ್ನು ಅರ್ಹ ಫಲಾನುಭವಿಗಳು ತಮ್ಮ ಸ್ಟೇಟಸ್ ಪರಿಶೀಲಿಸಲು, ಅಧಿಕೃತ ವೆಬ್ಸೈಟ್..ಅಂದರೆ, ಪಿಎಂ ಕಿಸಾನ್ ವೆಬ್ಸೈಟ್ಗೆ ಹೋಗಬೇಕು. ಬಳಿಕ ಫಲಾನುಭವಿ ಸ್ಟೇಟಸ್ ಪುಟವನ್ನು ನಮೂದಿಸಬೇಕು. ಫಲಾನುಭವಿಗಳ ಸ್ಟೇಟಸ್ (beneficiary status) ಮೇಲೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ಅಥವಾ, ಖಾತೆ ಸಂಖ್ಯೆಯನ್ನು ನಮೂದಿಸಬೇಕು. ಬಳಿಕ ಫಲಾನುಭವಿಗಳ ಸ್ಥಿತಿಯನ್ನು ವೀಕ್ಷಿಸಲಯ ಡೇಟಾ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
eKYC ಮಾಡಿಕೊಳ್ಳುವುದು ಹೇಗೆ..?
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಎಲ್ಲಾ ನೋಂದಾಯಿತ ರೈತರು, ತಮ್ಮ ಇ-ಕೆವೈಸಿ ಪ್ರಕ್ರಿಯೆ ಮುಗಿಸಿಕೊಳ್ಳಬೇಕು. ಇ-ಕೆವೈಸಿ ಪೈರ್ಣಗೊಳಿಸಲು ರೈತರಿಗಾಗಿ ಮೂರು ವಿಧಾನಗಳಿವೆ. ಅವು ಯಾವುವೆಂದರೆ,
1. ಒಟಿಪಿ ಆಧಾರಿತ ಇ-ಕೆವೈಸಿ (ಪಿಎಂ-ಕಿಸಾನ್ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರವೇಶಿಸಬಹುದು)
2. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ (ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್ಸಿಗಳು)
3. ರಾಜ್ಯ ಸೇವಾ ಕೇಂದ್ರಗಳಲ್ಲಿ (ಎಸ್ಎಸ್ಕೆಗಳು) ಲಭ್ಯವಿದೆ), ಮತ್ತು ಮುಖ ದೃಢೀಕರಣ ಆಧಾರಿತ ಇ-ಕೆವೈಸಿ
ಹೀಗೆ ರೈತರು ತಮ್ಮ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಾಗಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications