ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಜುಲೈ ತಿಂಗಳಿನ ಹಣ ಬಿಡುಗಡೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರಿಗೆ ಸಾಲವಾಗಿ ಕೇಂದ್ರಸರ್ಕಾರ ಪ್ರತಿ ವರ್ಷ 6000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ. ಸರ್ಕಾರವು DBT (ನೇರ ಪ್ರಯೋಜನ ವರ್ಗಾವಣೆ) ಮೂಲಕ ಕಳುಹಿಸುವ ಪ್ರತಿ ಕಂತಿನಲ್ಲಿ ರೈತರು 2000 ರೂ.ಗನ್ನು ಪಡೆಯಬಹುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ ನೋಂದಾಯಿಸಿಕೊಂಡ ರೈತರು ಜೂನ್ನಲ್ಲಿ ಯೋಜನೆಯ ಇಪ್ಪತ್ತನೇ ಕಂತು ಪಡೆಯುವ ನಿರೀಕ್ಷೆಯಲ್ಲಿ ಇದ್ದಾರೆ. ಭೂಮಿ ಹೊಂದಿರುವ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಈ ಯೋಜನೆಯನ್ನು ಫೆಬ್ರವರಿ 24, 2019 ರಂದು ಕೇಂದ್ರ ಸರ್ಕಾರ ಆರಂಭವನ್ನು ಮಾಡಿದೆ.

ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಹಣವನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣ ಆಗಿದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2 ಪ್ರತಿ ವರ್ಷ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
20ನೇ ಕಂತಿನ ಹಣ ಬಿಡುಗಡೆಯ ದಿನಾಂಕ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಜುಲೈ ತಿಂಗಳ ಕಂತು ವಿಳಂಬವಾಗುತ್ತಿದೆ ಎಂಬ ವರದಿಗಳ ನಡುವೆ, ಫಲಾನುಭವಿಗಳು ಜುಲೈ ಮೊದಲಾರ್ಧದಲ್ಲಿ 20 ನೇ ಕಂತು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ವರದಿಗಳ ಪ್ರಕಾರ ರೈತರಿಗೆ ಜುಲೈ 18 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಹಣ ಖಾತೆಗೆ ವರ್ಗಾವಣೆಯಾಗಬಹುದು.
ಈ ಯೋಜನೆಯ ವಿಶೇಷತೆ ಏನು?
ರೈತರು ಕೃಷಿ ಸಾಮಗ್ರಿಗಳು ಮತ್ತು ಮನೆಯ ಅಗತ್ಯಗಳನ್ನು ಪೂರೈಸಲು ಅವರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) ಅನ್ನು ಪ್ರಾರಂಭಿಸಿತು. ಪ್ರಧಾನಿ ಮೋದಿ ಅವರು ಫೆಬ್ರವರಿ 24, 2025 ರಂದು ಯೋಜನೆಯ ಹತ್ತೊಂಬತ್ತನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ.
ಲಾಭ ಯಾರಿಗೆ ಸಿಗುತ್ತದೆ..?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪ್ರಯೋಜನವನ್ನು ನೀಡಲಾಗುತ್ತದೆ. ರೈತ ಮತ್ತು ಅವನ ಮಗ ಇಬ್ಬರೂ ಕೃಷಿ ಮಾಡುತ್ತಿದ್ದರೂ ಸಹ, ಇಬ್ಬರೂ ಒಟ್ಟಿಗೆ ಈ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಯ ಪ್ರಯೋಜನವನ್ನು ಕೃಷಿ ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಆ ಸದಸ್ಯರಿಗೆ ಮಾತ್ರ ನೀಡಲಾಗುತ್ತದೆ, ಅಂದರೆ, ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಅವರನ್ನು ಅರ್ಹರೆಂದು ಪರಿಗಣಿಸಲಾಗುತ್ತದೆ.
ಪಿಎಂ ಕಿಸಾನ್ 20ನೇ ಕಂತಿನ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
- ಅಧಿಕೃತ ಪಿಎಂ ಕಿಸಾನ್ ಪೋರ್ಟಲ್ https://pmkisan.gov.in. ಭೇಟಿ ನೀಡಿ .
- 'ರೈತರ ಕಾರ್ನರ್' ವಿಭಾಗದ ಅಡಿಯಲ್ಲಿ ''Beneficiary Status'' ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಆಧಾರ್ ಸಂಖ್ಯೆ, ನೋಂದಣಿ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ಒದಗಿಸಿ.
- ಈ ವ್ಯವಸ್ಥೆಯು ಹಿಂದಿನ ಕಂತುಗಳು ಮತ್ತು ಮುಂಬರುವ ಪಾವತಿಗಳ ವಿವರಗಳನ್ನು ಪ್ರದರ್ಶಿಸುತ್ತದೆ.
ಹೀಗೆ ಹಣ ಬಿಡುಗಡೆಯ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications