ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (ಪಿಎಂ ಕಿಸಾನ್ ಯೋಜನೆ) 12ನೇ ಕಂತಿನ ಹಣವನ್ನು ಇತ್ತೀಚೆಗೆ ಸರ್ಕಾರ ಬಿಡುಗಡೆ ಮಾಡಿದೆ. 12ನೇ ಕಂತಿನ 2000 ರೂಪಾಯಿಯಂತೆ ಒಟ್ಟು 16,000 ಕೋಟಿ ರೂಪಾಯಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಆದರೆ ಈಗ ಪಿಎಂ ಕಿಸಾನ್ ಯೋಜನೆ ನಿಯಮದಲ್ಲಿ ಕೆಲವು ಬದಲಾವಣೆಯಾಗಿದೆ.
ಈಗಾಗಲೇ ಕೆಲವು ರೈತರಿಗೆ 2 ಸಾವಿರ ರೂಪಾಯಿ ಜಮೆಯಾಗಿದೆ. ಇನ್ನು ಕೆಲವು ರೈತರಿಗೆ ಹಣ ಜಮೆ ಆಗುತ್ತಿದೆ. ಆದರೆ ಈ ನಡುವೆಯೇ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2022ರ ನಿಯಮದಲ್ಲಿ ಕೆಲವು ಬದಲಾವಣೆಯನ್ನು ತಂದಿದೆ. ಈ ಹೊಸ ನಿಯಮವು ನೇರವಾಗಿ 12 ಕೋಟಿ ರಿಜಿಸ್ಟಾರ್ ರೈತರ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಅಷ್ಟಕ್ಕೂ ಈ ಬದಲಾವಣೆಯೇನು, ಈ ಯೋಜನೆ ಏನು, ಹೊಸ ಪ್ರಕ್ರಿಯೆ ಏನು,ಇನ್ನು ಕೂಡಾ ಹಣ ಜಮೆ ಆಗದಿದ್ದರೆ ನೀವು ಏನು ಮಾಡಬೇಕು, ಅದಕ್ಕೆ ಕಾರಣವೇನಾಗಿರಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ..

ಪಿಎಂ ಕಿಸಾನ್ನಲ್ಲಿ ಏನು ಬದಲಾವಣೆ?
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಪ್ರಮುಖ ಬದಲಾವಣೆಯನ್ನು ಮಾಡಿದೆ. ಈಗ ನೀವು ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ವೆಬ್ಸೈಟ್ ಮೂಲಕ ಹಣ ಜಮೆ ಆಗಿರುವ ಸ್ಟೇಟಸ್ ಚೆಕ್ ಮಾಡಲು ಸಾಧ್ಯವಾಗುವುದಿಲ್ಲ. ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಬಂದಿದೆಯೇ ಎಂದು ತಿಳಿಯಬೇಕಾದರೆ ನೀವು ನಿಮ್ಮ ರಿಜಿಸ್ಟರ್ ಆದ ಮೊಬೈಲ್ ಸಂಖ್ಯೆಯನ್ನು ಕೂಡಾ ನಮೂದಿಸುವುದು ಮುಖ್ಯವಾಗಿದೆ. ಈ ಹಿಂದೆ ಆಧಾರ್ ಅಥವಾ ಮೊಬೈಲ್ ಸಂಖ್ಯೆಯನ್ನು ಹಾಕಿ ಸ್ಟೇಟಸ್ ಪರಿಶೀಲನೆ ಮಾಡಬಹುದಾಗಿತ್ತು. ಆದರೆ ಬಳಿಕ ಮೊಬೈಲ್ ಸಂಖ್ಯೆಯಿಂದ ಅಲ್ಲ ಆಧಾರ್ ಸಂಖ್ಯೆಯಿಂದಲೇ ಸ್ಟೇಟಸ್ ಪರಿಶೀಲನೆ ಮಾಡಬೇಕು ಎಂದು ನಿಯಮ ಜಾರಿ ಮಾಡಲಾಯಿತು. ಅದಾದ ಬಳಿಕ ಪ್ರಸ್ತುತ ಆಧಾರ್ ಸಂಖ್ಯೆಯಿಂದಲ್ಲ ಮೊಬೈಲ್ ಸಂಖ್ಯೆಯಿಂದಲೇ ಸ್ಟೇಟಸ್ ಪರಿಶೀಲನೆ ಮಾಡಬೇಕು ಎಂಬ ನಿಯಮ ಬಂದಿದೆ.
ಸ್ಟೇಟಸ್ ಪರಿಶೀಲನೆ ಮಾಡುವ ಪ್ರಕ್ರಿಯೆ ಹೇಗಿದೆ ನೋಡಿ
ಹಂತ 1: pmkisan.gov.in ವೆಬ್ಸೈಟ್ಗೆ ಭೇಟಿ ನೀಡಿ
ಹಂತ 2: ಎಡಭಾಗದಲ್ಲಿರುವ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 3: ಹೊಸ ಪುಟವು ಸ್ಕ್ರೀನ್ನಲ್ಲಿ ಕಾಣಿಸಲಿದೆ
ಹಂತ 4: ರಿಜಿಸ್ಟರ್ ಆದ ನಂಬರ್ ಅನ್ನು ಹಾಕುವ ಮೂಲಕ ನಿಮ್ಮ ಸ್ಟೇಟಸ್ ಅನ್ನು ಪರಿಶೀಲನೆ ಮಾಡಿ
ಹಂತ 5: ರಿಜಿಸ್ಟರ್ ಆದ ಮೊಬೈಲ್ ಸಂಖ್ಯೆ ಇಲ್ಲವಾದರೆ, link to know your registration number ಮೇಲೆ ಕ್ಲಿಕ್ ಮಾಡಿ
ಹಂತ 6: ಈಗ ಪಿಎಂ ಕಿಸಾನ್ ಯೋಜನೆಗೆ ನೀವು ನೀಡಿದ ಮೊಬೈಲ್ ಸಂಖ್ಯೆಯನ್ನು ಹಾಕಿ
ಹಂತ 7: ಕ್ಯಾಪ್ಚಾ ಕೋಡ್ ಹಾಕಿ, ಮೊಬೈಲ್ಗೆ ಬಂದ ಒಟಿಪಿಯನ್ನು ನಮೂದಿಸಿ
ಹಂತ 8: Get Details ಮೇಲೆ ಕ್ಲಿಕ್ ಮಾಡಿ, ಈಗ ನಿಮ್ಮ ರಿಜಿಸ್ಟರ್ ಆದ ನಂಬರ್ ನಿಮಗೆ ಲಭ್ಯವಾಗಲಿದೆ.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!



Click it and Unblock the Notifications