ನವದೆಹಲಿ, ಜೂನ್ 18: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರದಂದು ವಿಡಿಯೋ ಕಾನ್ಫರೆನ್ಸ್ ಮೂಲಕ 41 ಕಲ್ಲಿದ್ದಲು ಗಣಿಗಳ ಹರಾಜಿಗೆ ಚಾಲನೆ ನೀಡಿದರು. ಈ ಗಣಿಗಳನ್ನು ಖರೀದಿಸುವ ಸಂಸ್ಥೆಗಳು ವಾಣಿಜ್ಯ ಉದ್ದೇಶಕ್ಕೆ ಬಳಸಬಹುದಾಗಿದೆ.
ಭಾರತದ ಕಲ್ಲಿದ್ದಲು ಸಚಿವಾಲಯ ವತಿಯಿಂದ ಗಣಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 41 ವಾಣಿಜ್ಯ ಗಣಿ ಬ್ಲಾಕ್ ಗಳನ್ನು ಗುರುವಾರ ಹರಾಜಿಗಿಡಲಾಗಿದೆ. ಈ ಮೂಲಕ ದೇಶದ ವಿದ್ಯುತ್ ಪೂರೈಕೆ ಬೇಡಿಕೆಯನ್ನು ನೀಗಿಸುವುದು ಈ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವುದು ಸರ್ಕಾರದ ಉದ್ದೇಶ.

''ಕೊವಿಡ್ 19 ಸಂದರ್ಭವನ್ನು ಅವಕಾಶವನ್ನಾಗಿ ಬದಲಾಯಿಸೋಣ, ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಇದು ಮೊದಲ ಹೆಜ್ಜೆ, ಈ ಮೂಲಕ ಆಮದು ಪ್ರಮಾಣವನ್ನು ತಗ್ಗಿಸಬಹುದು'' ಎಂದು ಪ್ರಧಾನಿ ಮೋದಿ ಹೇಳಿದರು.
2030ರ ವೇಳೆಗೆ 100 ಮಿಲಿಯನ್ ಟನ್ ನಷ್ಟು ಕಲ್ಲಿದ್ದಲು ಹೊಂದುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ ನಾಲ್ಕು ಪ್ರತ್ಯೇಕ ಯೋಜನೆಗಳನ್ನು ಇಂಧನ ಸಚಿವಾಲಯ ರೂಪಿಸಿದೆ. 20 ಸಾವಿರ ಕೋಟಿ ರು ಹೂಡಿಕೆಯಾಗಲಿದೆ ಎಂದು ಹೇಳಿದರು.
ಕೊವಿಡ್ 19 ಲಾಕ್ಡೌನ್ ನಿಂದಾಗಿ ಉಂಟಾಗಿರುವ ಆರ್ಥಿಕ ಅಸಮತೋಲನ ಸರಿಪಡಿಸಲು ಬೇಡಿಕೆ ಹಾಗೂ ಪೂರೈಕೆ ಸರಿದೂಗಿಸಲು ಇಂಥ ಕ್ರಮ ಅಗತ್ಯವಾಗಿದೆ. ಇದು ಹೊಸ ಆರಂಭಕ್ಕೆ ನಾಂದಿ ಹಾಡಲಿದೆ ಎಂದು ಮೋದಿ ತಿಳಿಸಿದರು.
More From GoodReturns

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications