ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ಹಾನಿಗೊಳಗಾದ ಕ್ಷೇತ್ರ ಹಣಕಾಸು ಕ್ಷೇತ್ರ. ದೇಶದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತಿರುವುದರಿಂದ ಪ್ರಧಾನಿ ಮೋದಿ ಸೇರಿದಂತೆ ಹಣಕಾಸು ಸಚಿವರು ಚಿಂತಾಕ್ರಾಂತರಾಗಿದ್ದಾರೆ.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಇಲಾಖೆಯ ದೀರ್ಘವಾದ ಸಭೆಯನ್ನು ಸೋಮವಾರ ನಡೆಸಿದರು.
ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಎಂಎಸ್ಎಂಇ ಹಾಗೂ ಸಮಾಜದ ಬಡ ವರ್ಗಗಳಿಗೆ ಸಹಾಯ ಮಾಡಲು 20 ಲಕ್ಷ ಕೋಟಿ ರೂ.ಗಳ ಆತ್ಮ ನಿರ್ಭರ ಭಾರತ್ ಅಭಿಯಾನ್ ಪ್ಯಾಕೇಜ್ ಅಡಿಯಲ್ಲಿ ಘೋಷಿಸಲಾದ ಹಲವಾರು ಕ್ರಮಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು. ಆತ್ಮ ನಿರ್ಭರ ಭಾರತ್ ಅಭಿಯಾನ್ ಪ್ಯಾಕೇಜ್ನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಬೇಕು ಮತ್ತು ಇದರಲ್ಲಿ ರಾಜ್ಯಗಳನ್ನು ಸಮಾನದಾರ ಪಾಲುದಾರರಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ ಮೋದಿ.
ಹೆಚ್ಚಿನ ಸಭೆಗಳು ನಡೆಯಲಿವೆ
ಹಣಕಾಸು ಕಾರ್ಯದರ್ಶಿ ಸೇರಿದಂತೆ ಇಲಾಖೆಯ ಎಲ್ಲ ಕಾರ್ಯದರ್ಶಿಗಳು ಸಭೆಯ ಭಾಗವಾಗಿದ್ದರು ಮತ್ತು ಬರುವ ವಾರದಲ್ಲಿ ಇಂತಹ ಹೆಚ್ಚಿನ ಸಭೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ವಿಶ್ವದ ಅತಿದೊಡ್ಡ ಬೂಸ್ಟಿಂಗ್ ಪ್ಯಾಕೇಜ್
20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಅಡಿಯಲ್ಲಿ ಘೋಷಿಸಲಾದ ಹೆಚ್ಚಿನ ಕ್ರಮಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ಜಾರಿಗೊಳಿಸುತ್ತಿವೆ. ಕೋವಿಡ್ -19 ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಆರ್ಥಿಕತೆಯ ಪುನರುಜ್ಜೀವನಕ್ಕೆ ಮಾರ್ಗಸೂಚಿಯನ್ನು ರೂಪಿಸುವ ಮೂಲಕ ವಿಶ್ವದ ಅತಿದೊಡ್ಡ ಬೂಸ್ಟಿಂಗ್ ಪ್ಯಾಕೇಜ್ ಒಂದನ್ನು ಸರ್ಕಾರ ಘೋಷಿಸಿತು.
ಹಸಿರು ಚಿಗುರು
ಕಳೆದ ತಿಂಗಳು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವು ಕರೋನವೈರಸ್ ಲಾಕ್ಡೌನ್ನಿಂದ ಮುಕ್ತವಾಗುತ್ತಿದ್ದಂತೆಯೇ ಆರ್ಥಿಕತೆಯು "ಹಸಿರು ಚಿಗುರುಗಳನ್ನು" ತೋರಿಸುತ್ತಿದೆ ಮತ್ತು ಜೀವನ ಮತ್ತು ಜೀವನೋಪಾಯ ಎರಡರಲ್ಲೂ ಕೇಂದ್ರೀಕರಿಸುವ ಮಹತ್ವವನ್ನು ಒತ್ತಿಹೇಳಿದೆ ಎಂದು ಹೇಳಿದ್ದರು.
ವೈರಸ್ನ ಅಪಾಯ ಇನ್ನೂ ಮುಗಿದಿಲ್ಲ
21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ವೈರಸ್ನ ಅಪಾಯ ಇನ್ನೂ ಮುಗಿದಿಲ್ಲ, ಮತ್ತು ಆರ್ಥಿಕತೆಯನ್ನು ಆರಂಭಿಸುವಾಗ ಜಾಗರೂಕರಾಗಿ ಉಳಿಯುವ ಅವಶ್ಯಕತೆಯಿದೆ ಎಂದು ಹೇಳಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications