ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಟಾರ್ಟ್ ಅಪ್ ಗಳಿಗಾಗಿ ಸೀಡ್ ಫಂಡ್ ಘೋಷಣೆ ಮಾಡಿದ್ದಾರೆ. ಅದರ ಭಾಗವಾಗಿ ಹೊಸ ಉದ್ಯಮಿಗಳಿಗೆ 1000 ಕೋಟಿ ರುಪಾಯಿಯನ್ನು ನೀಡಲಿದ್ದಾರೆ. "ನಾವು 1000 ಕೋಟಿ ರುಪಾಯಿಯ ಸ್ಟಾರ್ಟ್ ಅಪ್ ಇಂಡಿಯಾ ಸೀಡ್ ಫಂಡ್ ಆರಂಭಿಸುತ್ತಿದ್ದೇವೆ. ಇದರಿಂದ ದೇಶದಲ್ಲಿ ಹೊಸ ಸ್ಟಾರ್ಟ್ ಅಪ್ ಗಳು ಬೆಳೆಯಲು ಸಹಾಯ ಆಗುತ್ತದೆ.
"ಸ್ಟಾರ್ಟ್ ಅಪ್ ವ್ಯವಸ್ಥೆಯನ್ನು ಯುವಜನರಿಂದ, ಯುವಜನರಿಗಾಗಿ ಎಂಬ ಮಂತ್ರದೊಂದಿಗೆ ರೂಪಿಸಲಿದ್ದೇವೆ," ಎಂದು ಮೋದಿ ಹೇಳಿದ್ದಾರೆ. ಸ್ಟಾರ್ಟ್ ಅಪ್ ಇಂಡಿಯಾ ಅಂತರರಾಷ್ಟ್ರೀಯ ಸಮಾವೇಶ, ಪ್ರಾರಂಭ್ 2021ರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸ್ಟಾರ್ಟ್ ಅಪ್ ಇಂಡಿಯಾವನ್ನು ಐದು ವರ್ಷಗಳ ಹಿಂದೆ ಆರಂಭಿಸಲಾಗಿದೆ.
ಮೋದಿ ಮಾತನಾಡಿ, ಇಂದು ದೇಶದಲ್ಲಿ 41,000ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳಿವೆ.ಈ ಪೈಕಿ 44%ರಷ್ಟನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ 5700ಕ್ಕೂ ಹೆಚ್ಚು, ಹೆಲ್ತ್ ಕೇರ್ ನಲ್ಲಿ 3600ರ ಸಮೀಪ ಸ್ಟಾರ್ಟ್ ಅಪ್ ಗಳು ಹಾಗೂ ಕೃಷಿ ಸಂಬಂಧಿ ಸ್ಟಾರ್ಟ್ ಅಪ್ ಗಳು 1700ಕ್ಕೂ ಹೆಚ್ಚಿವೆ ಎಂದು ತಿಳಿಸಿದ್ದಾರೆ.

ಕೊರೊನಾ ಅಡೆತಡೆಗಳ ಮಧ್ಯೆಯೂ 11 ಸ್ಟಾರ್ಟ್ ಅಪ್ ಗಳು 2020ರಲ್ಲಿ ಯೂನಿಕಾರ್ನ್ ಆಗಿ ಬದಲಾಗಿವೆ. 30 ಸ್ಟಾರ್ಟ್ ಅಪ್ ಗಳು ಭಾರತದಲ್ಲಿ 1 ಬಿಲಿಯನ್ ಯುಎಸ್ ಡಿ ದಾಟಿವೆ. 2014ರ ಏಪ್ರಿಲ್ ನಲ್ಲಿ ಕೇವಲ 4 ಸ್ಟಾರ್ಟ್ ಅಪ್ ಗಳಿದ್ದವು.
ದೊಡ್ಡ ಕಂಪೆನಿಗಳೇ ಜಾಗತಿಕ ಮಟ್ಟದಲ್ಲಿ ಅಸ್ತಿತ್ವಕ್ಕಾಗಿ ಹೆಣಗುತ್ತಿವೆ. ಭಾರತದಲ್ಲಿ ಸ್ಟಾರ್ಟ್ ಅಪ್ ಗಳು ಸ್ವಾವಲಂಬಿಗಳಾಗಲು ಹೆಜ್ಜೆಗಳನ್ನು ಇಡುತ್ತಿವೆ. ಕೊರೊನಾ ಸಮಯದಲ್ಲಿ ಇ- ಗ್ರೋಸರಿಯಿಂದ, ಇ- ಹೆಲ್ತ್, ಶಿಕ್ಷಣ, ವಾಣಿಜ್ಯ ಹೀಗೆ ನಾನಾ ಬಗೆಯಲ್ಲಿ ಅಗತ್ಯಗಳ ಪೂರೈಸಿದವು. ಈಗ ಸ್ಟಾರ್ಟ್ ಅಪ್ ಗಳು ಮೆಟ್ರೋಗೆ ಸೀಮಿತವಲ್ಲ ಎಂದು ಮೋದಿ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications