ಭಾರತದಲ್ಲಿ ಮುಕ್ತವಾಗಿ ಹೂಡಿಕೆ ಮಾಡಲು ಅಮೆರಿಕದ ಸಂಸ್ಥೆಗಳನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ. ಅವರು ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಆಯೋಜಿಸಿದ್ದ ಭಾರತ-ಐಡಿಯಾಸ್ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡುವಾಗ ಈ ಭರವಸೆಯನ್ನು ಹೂಡಿಕೆದಾರರಿಗೆ ಹೇಳಿದ್ದಾರೆ.
ಭಾರತವನ್ನು ದೊಡ್ಡ ಹೂಡಿಕೆ ತಾಣವಾಗಿ ಚಿತ್ರಿಸಿದ ಅವರು, ಕೋವಿಡ್ ಲಾಕ್ ಡೌನ್ ಸಮಯದಲ್ಲಿ, ಭಾರತವು 20 ಬಿಲಿಯನ್ ಡಾಲರ್ ಹೂಡಿಕೆಯನ್ನು ಪಡೆದುಕೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಸರ್ಕಾರವು ಹೂಡಿಕೆದಾರರಿಗೆ ಅನುಕೂಲವಾಗುತ್ತಿರುವ ವಿಧಾನಗಳು ಮತ್ತು ಮೂಲಸೌಕರ್ಯ, ವಾಯುಯಾನ, ರಕ್ಷಣಾ ಮತ್ತು ಬಾಹ್ಯಾಕಾಶ ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಭರವಸೆಯ ಬೆಳವಣಿಗೆಯನ್ನು ಅವರು ಸೂಚಿಸಿದ್ದಾರೆ.
ಜಗತ್ತಿಗೆ ಆಶಾವಾದವಿದೆ
ಇಂದು, ಭಾರತದ ಬಗ್ಗೆ ಜಗತ್ತಿಗೆ ಆಶಾವಾದವಿದೆ. ಇದಕ್ಕೆ ಕಾರಣ ಭಾರತವು ಮುಕ್ತತೆ, ಅವಕಾಶಗಳ ಮತ್ತು ಆಯ್ಕೆಗಳ ಪರಿಪೂರ್ಣ ಸಂಯೋಜನೆಯನ್ನು ನೀಡುತ್ತದೆ ಎಂದು ಅವರು ಭಾರತ-ಐಡಿಯಾಸ್ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡುವಾಗ ಹೇಳಿದರು.
ಗರಿಷ್ಠ ಮಟ್ಟವನ್ನು ತಲುಪುತ್ತಿದ್ದೇವೆ
ಪ್ರತಿ ವರ್ಷ, ನಾವು ವಿದೇಶಿ ನೇರ ಹೂಡಿಕೆಯಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದೇವೆ. ಪ್ರತಿ ವರ್ಷ ಹಿಂದಿನದಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಅವರು ಹೇಳಿದರು. ಉದಾಹರಣೆಗಳನ್ನು ನೀಡಿ, 2019-20ರಲ್ಲಿ ಭಾರತದಲ್ಲಿ ಎಫ್ಡಿಐ ಒಳಹರಿವು 74 ಬಿಲಿಯನ್ ಡಾಲರ್ ಆಗಿತ್ತು. ಇದು ಹಿಂದಿನ ವರ್ಷಕ್ಕಿಂತ ಶೇಕಡಾ 20 ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.
ಜಾಗತಿಕ ಆರ್ಥಿಕತೆಯು ದಕ್ಷತೆ ಮತ್ತು ಆಪ್ಟಿಮೈಸೇಶನ್
ಕೊರೊನಾವೈರಸ್ ನಂತರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ಜಾಗತಿಕ ಆರ್ಥಿಕತೆಯು ದಕ್ಷತೆ ಮತ್ತು ಆಪ್ಟಿಮೈಸೇಶನ್ ಬಗ್ಗೆ ಹೆಚ್ಚು ಗಮನಹರಿಸಿದೆ ಎಂದು ಜನರಿಗೆ ಕಲಿಸಿದೆ ಎಂದು ಹೇಳಿದರು.
ಮೈಕ್ ಪೊಂಪಿಯೊ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಮತ್ತು ಯುಎಸ್ ಮತ್ತು ಭಾರತದ ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications