ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಕಳೆದ ಕೆಲವು ದಿನಗಳಲ್ಲಿ ನಗರದ ಹಲವು ಕಡೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಲೇ ಇದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆ ತನ್ನ ಲೈನ್ಗಳನ್ನು ಸರಿಪಡಿಸುವ ಕೆಲಸದಲ್ಲಿ ತೊಡಗಿಕೊಂಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ನಿರಂತರ ವಿದ್ಯುತ್ ವ್ಯತ್ಯಯಗಳಾಗುತ್ತಲೇ ಇದೆ. ಬೆಂಗಳೂರಿನ (Bengaluru) ಕೆಲವು ಪ್ರದೇಶದಲ್ಲಿ ಅಕ್ಟೋಬರ್ 12 ರಂದೂ ವಿದ್ಯುತ್ ವ್ಯತಯ (Power Cut) ಆಗಿದ್ದು, ಇಂದೂ (ಅ.13) ಕೂಡ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಸೂಚನೆ ನೀಡಿದೆ.

ಇಲ್ಲೆಲ್ಲಾ ನೋ ಕರೆಂಟ್!
ತಿಪಟೂರು ತಾಲೂಕಿನ ಕೆರೆಗೋಡಿ ಉಪಸ್ಥಾವರದ ನಾಗರಘಟ್ಟ ಮತ್ತು ನಾರಸಿಕಟ್ಟೆ ಪ್ರದೇಶಗಳಲ್ಲಿ ಲಿಂಕ್ ಲೈನ್ ಕಾಮಗಾರಿಯನ್ನು ಬೆಸ್ಕಾಂ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 13 ಮತ್ತು 14ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರಗೆ ಈ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಪೋಸ್ಟ್ ಮಾಡಿದೆ. ಅಲ್ಲದೇ ಸದರಿ ಪೂರಕಗಳ ವ್ಯಾಪ್ತಿಗೆ ಒಳಪಡುವ ಹೆಡಗರಹಳ್ಳಿ, ಬೆಳಗರಹಳ್ಳಿ, ಕನ್ನುಘಟ್ಟ, ನಾಗರಘಟ್ಟ, ಎನ್.ಮೇಲನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ಅಕ್ಟೋಬರ್ 31 ರವರೆಗೆ ಬೆಂಗಳೂರಿನಲ್ಲಿ ಪವರ್ ಕಟ್!
ಇನ್ನು ಬೆಸ್ಕಾಂ ತನ್ನ ಸಬ್ಡಿವಿಶನ್ ಪ್ರದೇಶದಲ್ಲಿ ಫೀಡರ್ ನಿರ್ವಹಣಾ ಕಾರ್ಯವನ್ನು ನಡೆಸುತ್ತಿದೆ. ಇದೇ ಕಾರಣದಿಂದ ನಗರದ ಹಲವು ಕಡೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.
ಅಕ್ಟೋಬರ್ ತಿಂಗಳಲ್ಲಿ ನಿರಂತರವಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 13, 15, 17, 19, 21, 23, 25, 27, 29 ಮತ್ತು 31 ರಂದು ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ:
ಹನುಮಂತಪುರ, ಜಗನ್ನಾಥಪುರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಬಿ.ಎ.ಗುಡಿಪಾಳ್ಯ, ಅಂಬೇಡ್ಕರ್ ನಗರ ಮುಂತಾದ ಪ್ರದೇಶಗಳಲ್ಲಿ ಪವರ್ ಕಟ್ ಆಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.
ಹಾಗೆಯೇ ಅಕ್ಟೋಬರ್ 12, 14, 16, 18, 24, 26, 28, ಮತ್ತು 30 ರಂದು ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳ ಪಟ್ಟಿಯನ್ನು ನೀಡಲಾಗಿದ್ದು, ಈ ದಿನಾಂಕಗಳಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮಂತೋಟ, ದಿಬ್ಬೂರು, ಬಿಎಚ್ ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್ಆರ್ ಪಾಳ್ಯ, ಕುಪ್ಪೂರು, ಹೊಸಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಜನರಿಗೆ ಸಲಹೆ:
ಇನ್ನು ಬೆಂಗಳೂರಿನಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯಗಳು ಆಗುತ್ತಲೇ ಇರುವುದರಿಂದ ಜನರಿಗೂ ಬೆಸ್ಕಾಂ ಇಲಾಖೆ ಸಲಹೆ ನೀಡಿದೆ. ಬೆಳಗ್ಗೆಯಿಂದ ದಿನವಿಡೀ ಕರೆಂಟ್ ಸಮಸ್ಯೆ ಇರುವುದರಿಂದ ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಹೀಗೆ ಅಗತ್ಯ ಸಾಧನಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವುದು ಸೂಕ್ತ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಗೆ ಇನ್ನು ಹೆಚ್ಚು ದಿನ ಕಾಯಬೇಕಿಲ್ಲ…ಆದಷ್ಟು ಬೇಗ 2 ಗಂಟೆಗಳ ಪ್ರಯಾಣ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Bengaluru Airport: ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಭೀತಿ! ಹಲವು ವಿಮಾನ ಹಾರಾಟ ರದ್ದು

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!

Suburban Railway: ಬೆಂಗಳೂರು ಉಪನಗರ ರೈಲು 40,000 ಬಸ್ಗಳಿಗೆ ಸಮ…ದಿನಕ್ಕೆ 19 ಲಕ್ಷ ಪ್ರಯಾಣಿಕರಿಗೆ ಸುಲಭ!



Click it and Unblock the Notifications