ಕೇಂದ್ರ ಸರ್ಕಾರವು ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಡಿಸೆಂಬರ್ 18 ರಂದು ಕೇಂದ್ರ ಸರ್ಕಾರವು ದೇಶದಲ್ಲಿ ಬಾಸ್ಮತಿಯೇತರ ಅಕ್ಕಿಯ ಬೆಲೆಯನ್ನು ಕಡಿಮೆ ಮಾಡುವಂತೆ ಅಕ್ಕಿ ಉದ್ಯಮ ಸಂಘಗಳಿಗೆ ನಿರ್ದೇಶನ ನೀಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ನವದೆಹಲಿಯಲ್ಲಿ ಬಾಸ್ಮತಿಯೇತರ ಅಕ್ಕಿ ಸಂಸ್ಕರಣಾ ಉದ್ಯಮದ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ರಿಟೇಲ್ ಅಕ್ಕಿ ಬೆಲೆಗಳನ್ನು ಪರಿಶೀಲಿಸಿ ಸೂಕ್ತ ಮಟ್ಟಕ್ಕೆ ಇಳಿಸಲು ಕ್ರಮಕೈಗೊಳ್ಳುವಂತೆ ಪ್ರತಿನಿಧಿಗಳಿಗೆ ಸೂಚಿಸಿದರು. ಈ ವಿಚಾರವನ್ನು ತಮ್ಮ ಸಂಘದ ಸದಸ್ಯರೊಂದಿಗೆ ಚರ್ಚಿಸುವಂತೆ ಉದ್ಯಮ ಸಂಘಗಳಿಗೂ ಸೂಚನೆ ನೀಡಲಾಗಿದೆ. ಅಕ್ಕಿಯ ರಿಟೇಲ್ ಬೆಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡಿಮೆ ಮಾಡಲು ಸೂಚಿಸಲಾದ ಸಂಘಗಳ ಹೆಸರನ್ನು ಪತ್ರಿಕಾ ಮಾಹಿತಿ ಬ್ಯೂರೋ ಹೇಳಿದೆ.

ಸಭೆಯಲ್ಲಿ ಇತರ ಸಂಬಂಧಿತ ವಿಷಯಗಳು ಪ್ರಸ್ತಾಪವಾದವು. ಖಾರಿಫ್ ಬೆಳೆ ಉತ್ತಮವಾಗಿದ್ದರೂ ಸಹ ದೇಶೀಯ ಮಾರುಕಟ್ಟೆಯಲ್ಲಿ ಬಾಸ್ಮತಿಯೇತರ ಅಕ್ಕಿಯ ಬೆಲೆ ಏಕೆ ಹೆಚ್ಚುತ್ತಿದೆ ಎಂಬ ಪ್ರಶ್ನೆ ಎತ್ತಲಾಯಿತು. ಭಾರತೀಯ ಆಹಾರ ನಿಗಮದಲ್ಲಿ (ಎಫ್ಸಿಐ) ಸಾಕಷ್ಟು ದಾಸ್ತಾನುಗಳಿವೆಯೇ ಎಂದು ಸಹ ಪ್ರಶ್ನಿಸಲಾಗಿದೆ.
ಅಕ್ಕಿ ರಫ್ತು ಕೂಡ ನಿಷೇಧಿಸಲಾಗಿದೆ. ಅಕ್ಕಿಯ ವಾರ್ಷಿಕ ಹಣದುಬ್ಬರ ದರವು ಕಳೆದ ಎರಡು ವರ್ಷಗಳಿಂದ ಸುಮಾರು ಶೇಕಡ 12 ರಷ್ಟು ಏರಿಕೆಯಾಗಿದೆ. ಇದು ತೀವ್ರ ಆತಂಕಕ್ಕೂ ಕಾರಣವಾಗಿದೆ. ಸಭೆಯಲ್ಲಿ ಚರ್ಚಿಸಲಾದ ಮತ್ತೊಂದು ಆತಂಕದ ಕಾರಣವೆಂದರೆ ಲಾಭದ ಪ್ರಮಾಣದಲ್ಲಿ ಅಗಾಧ ಹೆಚ್ಚಳವಾಗಿದೆ.
ಸಗಟು ಮತ್ತು ರಿಟೇಲ್ ವ್ಯಾಪಾರಿಗಳ ನಡುವೆ ಈ ಲಾಭದ ಪ್ರಮಾಣ ಹೆಚ್ಚಿದ್ದು, ಇದನ್ನು ನಿಯಂತ್ರಿಸುವ ತುರ್ತು ಅಗತ್ಯವಿದೆ. ಲಾಭಕೋರತನವನ್ನು ಕಟ್ಟುನಿಟ್ಟಾಗಿ ನಿರ್ವಹಣೆ ಮಾಡುವ ಅಗತ್ಯವನ್ನು ಸಭೆಯು ಒತ್ತಿಹೇಳಿತು. ಎಂಆರ್ಪಿ ಮತ್ತು ನಿಜವಾದ ರಿಟೇಲ್ ಬೆಲೆಗಳ ನಡುವೆ ವ್ಯಾಪಕ ಅಂತರವಿದೆ ಎಂದು ಸಭೆಯಲ್ಲಿ ಚರ್ಚೆ ನಡೆದಿದೆ. ಗ್ರಾಹಕರ ಹಿತಾಸಕ್ತಿ ಕಾಪಾಡಲು ದರ ಇಳಿಸಲು ಸೂಚಿಸಲಾಗಿದೆ.
ಉತ್ತಮ ಗುಣಮಟ್ಟದ ಅಕ್ಕಿಯ ಸಮೃದ್ಧ ದಾಸ್ತಾನು ಲಭ್ಯವಿದೆ ಎಂದು ಎಫ್ಸಿಐ ಅಕ್ಕಿ ಸಂಸ್ಕರಣಾ ಉದ್ಯಮಕ್ಕೆ ತಿಳಿಸಿದೆ. ಇದನ್ನು ಓಪನ್ ಮಾರ್ಕೆಟ್ ಸೇಲ್ ಸ್ಕೀಮ್ (ಒಎಂಎಸ್ ಎಸ್) ಅಡಿಯಲ್ಲಿ ಪ್ರತಿ ಕೆಜಿಗೆ 29 ರೂಪಾಯಿಗಳ ಮೀಸಲು ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ, ಭಾರತೀಯ ಆಹಾರ ನಿಗಮವು ಗೋಧಿ ಮತ್ತು ಅಕ್ಕಿಯ ಹೆಚ್ಚುವರಿ ದಾಸ್ತಾನುಗಳನ್ನು ಮಾರಾಟ ಮಾಡುತ್ತದೆ. ವ್ಯಾಪಾರಿಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಎಫ್ಸಿಐನಿಂದ ಅಕ್ಕಿಯನ್ನು ಸಂಗ್ರಹಿಸಬಹುದು.
More From GoodReturns

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ



Click it and Unblock the Notifications