ನವದೆಹಲಿ: ದೇಶದ ಕೋಲ್ (ಕಲ್ಲಿದ್ದಲು) ಬ್ಲಾಕ್ಗಳನ್ನು ಖಾಸಗಿಯವರಿಗೆ ಹರಾಜು ಹಾಕಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ಖಾಸಗೀಕರಣದ ಕುರಿತಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಇನ್ಮುಂದೆ ಪ್ರಯಾಣಿಕರ ರೈಲು ಸೇವೆಯಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿ ಕೊಡುವ ಮಹತ್ವದ ನಿರ್ಧಾರವನ್ನು ರೈಲ್ವೆ ಸಚಿವಾಲಯ ಘೋಷಣೆ ಮಾಡಿದೆ. ಸಚಿವಾಲಯದ ಪ್ರಸ್ತಾಪಕ್ಕೆ ಅನುಗುಣವಾಗಿ ಖಾಸಗಿ ಸಂಸ್ಥೆಗಳು 35 ವರ್ಷಗಳ ಕಾಲ ಪ್ರಯಾಣಿಕರ ರೈಲುಗಳನ್ನು ಓಡಿಸಬಹುದು. 109 ಮಾರ್ಗಗಳಲ್ಲಿ 151 ರೈಲುಗಳನ್ನು ಓಡಿಸುವುದನ್ನು ಇದು ಒಳಗೊಂಡಿದೆ.
ಈ ಯೋಜನೆಯು ಖಾಸಗಿ ವಲಯದ ಹೂಡಿಕೆಗೆ ಸುಮಾರು ₹ 30,000 ಕೋಟಿ ಹರಿಸಲಿದೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.
2023 ರ ವೇಳೆಗೆ ಕಾರ್ಯಾಚರಣೆ ಪ್ರಾರಂಭ
ಏಪ್ರಿಲ್ 2023 ರ ವೇಳೆಗೆ ಖಾಸಗಿ ರೈಲು ಕಾರ್ಯಾಚರಣೆ ಪ್ರಾರಂಭವಾಗುವ ಸಾಧ್ಯತೆಯಿದೆ. ಮೇಕ್ ಇನ್ ಇಂಡಿಯಾ ನೀತಿಯಡಿಯಲ್ಲಿ ಎಲ್ಲಾ ಬೋಗಿಗಳನ್ನು ಖರೀದಿಸಲಾಗುತ್ತದೆ. ಪ್ರಯಾಣಿಕರ ರೈಲು ಕಾರ್ಯಾಚರಣೆಯಲ್ಲಿ ಖಾಸಗಿ ಭಾಗವಹಿಸುವಿಕೆ ರೈಲ್ವೆಯ ಒಟ್ಟು ಕಾರ್ಯಾಚರಣೆಯ ಶೇ 5 ರಷ್ಟು ಮಾತ್ರ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷರು ಗುರುವಾರ ತಿಳಿಸಿದ್ದಾರೆ.
ಭಾರೀ ಪ್ರಮಾಣದ ದಂಡ ಕೂಡ ಇದೆ
ಪ್ರಯಾಣಿಕರ ರೈಲುಗಳನ್ನು ಓಡಿಸುವಲ್ಲಿ ಖಾಸಗಿ ಭಾಗವಹಿಸುವಿಕೆಯ ವಿಷಯದ ಕುರಿತು ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್, ಪ್ರಯಾಣಿಕರ ರೈಲು ಕಾರ್ಯಾಚರಣೆಯಲ್ಲಿ ಖಾಸಗಿಯವರು ಯಾವುದೇ ಕಾರ್ಯಕ್ಷಮತೆ ಸೂಚಕಗಳನ್ನು ಪೂರೈಸದಿದ್ದರೆ ಅವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.
ತೇಜಸ್ ಎಕ್ಸ್ಪ್ರೆಸ್ ಪರಿಚಯಿಸಲಾಗಿತ್ತು
ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಗೆ ಅವಕಾಶ ಮಾಡಿಕೊಟ್ಟಿರುವುದು ಇದು ಮೊದಲ ಉಪಕ್ರಮ. ಕಳೆದ ವರ್ಷ ಐಆರ್ಸಿಟಿಸಿ ವತಿಯಿಂದ ಲಕ್ನೋ-ದೆಹಲಿ ತೇಜಸ್ ಎಕ್ಸ್ಪ್ರೆಸ್ ಪರಿಚಯಿಸಲಾಗಿತ್ತು. ಸುಮಾರು 13,000 ರೈಲುಗಳನ್ನು ಓಡಿಸುವ ವಿಶ್ವದ ಅತಿದೊಡ್ಡ ರೈಲ್ವೆ ಜಾಲವಾದ ಭಾರತೀಯ ರೈಲ್ವೆಯಲ್ಲಿ ಸುಮಾರು 12 ಲಕ್ಷ ಜನರು ಕೆಲಸ ಮಾಡುತ್ತಾರೆ.
ರಾಹುಲ್ ಗಾಂಧಿ ತೀವ್ರ ವಿರೋಧ
ರೈಲ್ವೆ ಖಾಸಗೀಕರಣಗೊಳಿಸುವ ಮೊದಲ ಹೆಜ್ಜೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ಜನತೆ ಈ ಕ್ರಮವನ್ನು ಕ್ಷಮಿಸುವುದಿಲ್ಲ. ಆದರೆ ನೆನಪಿಡಿ, ಜನರು ಇದಕ್ಕೆ ಸೂಕ್ತ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ನೀಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications