ಮೈಸೂರು, ಏಪ್ರಿಲ್ 2: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮೈಸೂರು ಅರಮನೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧೆ ಮಾಡುತ್ತಿದ್ದಾರೆ. ಚುನಾವಣೆಗೆ ನಿಂತಿರುವ ಅವರು ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ಅವರು ಚುನಾವನಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಅವರು, ತಮ್ಮ ಬಳಿ ಸ್ವಂತ ಮನೆ ಹಾಗೂ ಕಾರು ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹಿಂದಿನ ಮೈಸೂರು ರಾಜಮನೆತನದ ವಂಶಸ್ಥರು ತಮ್ಮ ಚುನಾವಣಾ ಅಫಿಡವಿಟ್ ಪ್ರಕಾರ ಸ್ವಂತ ಮನೆ, ಜಮೀನು ಅಥವಾ ವಾಹನವನ್ನು ಹೊಂದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಸೋಮವಾರ ನಾಮಪತ್ರ ಸಲ್ಲಿಸುವಾಗ ಒಡೆಯರ್ ಅವರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಘೋಷಿಸಿ ಅಫಿಡವಿಟ್ ಸಲ್ಲಿಸಿದ್ದಾರೆ. ನಾಮಪತ್ರದ ಪ್ರಕಾರ ಅವರ ಒಟ್ಟು ಆಸ್ತಿ ಸುಮಾರು ಐದು ಕೋಟಿ ರೂ.ಯಷ್ಟಿದ್ದು, ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಮತ್ತು ಅವಲಂಬಿತ ವ್ಯಕ್ತಿ ಕ್ರಮವಾಗಿ 1.04 ಕೋಟಿ ಮತ್ತು 3.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಯುದುವೀರ್ ಒಡೆಯರ್ ಅವರು 3.39 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಹೊಂದಿದ್ದಾರೆ ಮತ್ತು ಅವರ ಪತ್ನಿ 1.02 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ಹೊಂದಿದ್ದಾರೆ. ಹಿಂದಿನ ಮೈಸೂರು ರಾಜಮನೆತನದ 32 ವರ್ಷದ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ ಅವರೊಂದಿಗೆ ನೇರ ಹಣಾಹಣಿಗೆ ಮುಂದಾಗಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡೂ ಬಾರಿಯೂ ಬಿಜೆಪಿಯಿಂದ ಪ್ರತಾಪ್ ಸಿಂಹ ಅವರು ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರಿಗೆ ಹೈಕಮಾಂಡ್ನಿಂದ ಟಿಕೆಟ್ ನೀಡದೇ ಇದ್ದು, ಬೆಂಬಲಿಗರಿಂದ ವಿರೋಧ ವ್ಯಕ್ತವಾಗಿತ್ತು. ಕೊನೆಗೆ ಪಕ್ಷ ಯದುವೀರ್ ಅವರಿಗೆ ಮಣೆ ಹಾಕಿತ್ತು. ಈ ಬಾರಿ ಪ್ರತಾಪ್ ಸಿಂಹ ಯದುವೀರ್ ಪರ ಪ್ರಚಾರಕ್ಕೆ ಹೋದರೂ ಅವರ ಬೆಂಬಲಿಗರು ಕೊನೆ ಕ್ಷಣದಲ್ಲಿ ಒಳೇಟು ಕೊಡುವ ಸಾಧ್ಯತೆ ಇದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications