ಭಾರತದ ಕೆಲವು ಕಡೆಗಳಲ್ಲಿ ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂಬ ಮಾತಿದೆ. ಅಂದರೆ ಒಂದು ಬಾರಿ ಯುವತಿಗೆ ಮದುವೆ ಮಾಡಿ ಕೊಟ್ಟ ಬಳಿಕ ಆಕೆ ತಂದೆ-ತಾಯಿಯ ಜೊತೆ ಹಿಂದಿನ ಅವಿನಾಭಾವ ನಂಟನ್ನು ಇರಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಇದರ ಅರ್ಥವಾಗಿದೆ. ಇನ್ನು ಉತ್ತರ ಭಾರತದಲ್ಲಿ ಈ ಮಾತನ್ನು ʻಪರಾಯಾ ಧನʼ ಎಂದು ಕರೆಯಲಾಗುತ್ತದೆ. ಅಂದರೆ ಹೆಣ್ಣುಮಕ್ಕಳು ತಮ್ಮ ಮನೆಗಳನ್ನು ತೊರೆದು ತಮ್ಮ ಮದುವೆಯ ನಂತರ ಗಂಡನ ಮನೆಗೆ ಹೋಗುವುದನ್ನು ಇದು ಸೂಚಿಸುತ್ತದೆ. ಹಾಗಾಗಿ ತಂದೆಯ ಆಸ್ತಿ, ಭೂಮಿ ಅಥವಾ ಸ್ವತ್ತುಗಳು ಅಂತಿಮವಾಗಿ ಪರರಿಗೆ ಅಥವಾ ಆಕೆಯ ಪತಿಗೆ ಸೇರುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಇದೇ ಕಾರಣಕ್ಕಾಗಿ ದೇಶದ ಕೆಲವು ಕಡೆಗಳಲ್ಲಿ ಈಗಲೂ ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ನೀಡಲಾಗುತ್ತಿಲ್ಲ. ಹೆಣ್ಣು ಮಕ್ಕಳನ್ನು ಈ ಆಸ್ತಿಗಳ ಹಕ್ಕಿನ ವಿಚಾರದಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತದೆ. ಆದರೆ ಹೆಣ್ಣು ಮಕ್ಕಳು ನಿಜವಾಗಿಯೂ ಕಾನೂನು ಪ್ರಕಾರ ತಂದೆಯ ಆಸ್ತಿಯಲ್ಲಿ ಹಕ್ಕು ಹೊಂದಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜವೇ ಆಗಿದೆ. ಆಕೆ ಮದುವೆಯಾದ ಬಳಿಕ ಯಾವ ರೀತಿಯ ಬದಲಾವಣೆಗಳು ಆಗುತ್ತದೆ? ಭಾರತ ಸರ್ಕಾರವು 1965 ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಅಂಗೀಕರಿಸಿದ್ದು, ಈ ಕಾನೂನು ಏನನ್ನು ಹೇಳುತ್ತದೆ?
ಏನಿದು ಹಿಂದೂ ಉತ್ತರಾಧಿಕಾರ ಕಾಯ್ದೆ?
ಈ ಕಾಯಿದೆಯು ಭಾರತದಲ್ಲಿನ ಆಸ್ತಿಯ ವಿಭಜನೆಗೆ ಸಂಬಂಧಿಸಿದೆ. ಈ ಕಾನೂನಿನ ಅಡಿಯಲ್ಲಿ ಹಿಂದೂಗಳು, ಬೌದ್ಧರು, ಜೈನರು ಮತ್ತು ಸಿಖ್ಖರಲ್ಲಿ ಆಸ್ತಿ ವಿಭಜನೆ, ಉತ್ತರಾಧಿಕಾರ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ಕಾನೂನುಗಳನ್ನು ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ ಅಂದರೆ 1956 ರ ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ, ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಯಾವುದೇ ಹಕ್ಕು ಇರಲಿಲ್ಲ. ಹಾಗಾಗಿ ಈ ಸಮಯದಲ್ಲಿ ಹೆಣ್ಣು ಮಕ್ಕಳು ತಮ್ಮ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಹಕ್ಕು ಹೊಂದಿರಲಿಲ್ಲ. ಆದರೆ ಈ ಕಾನೂನಿಗೆ 1965ರಲ್ಲಿ ತಿದ್ದುಪಡಿ ಮಾಡಿದ ಬಳಿಕ ಇದೀಗ ಎಲ್ಲವೂ ಬದಲಾಗಿದೆ.

ಮಗಳ ಆಸ್ತಿ ಹಕ್ಕುಗಳು
ಆದರೆ ಕೇಂದ್ರ ಸರ್ಕಾರವು 2005 ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆ 2005 ಎಂದು ಕರೆಯಲ್ಪಡುವ ಕಾಯ್ದೆಗೆ ಹಲವು ತಿದ್ದುಪಡಿಗಳನ್ನು ಮಾಡಿತ್ತು. ಇದರ ಪ್ರಕಾರ, ಪುತ್ರರಿಗೆ ತಮ್ಮ ತಂದೆಯ ಆಸ್ತಿಯಲ್ಲಿ ಹೊಂದುವ ಹಕ್ಕಿಗೆ ಸಮಾನವಾಗಿ ಹೆಣ್ಣುಮಕ್ಕಳು ಕೂಡ ಅದೇ ರೀತಿಯ ಸಮಾನ ಹಕ್ಕುಗಳನ್ನು ಪಡೆಯುತ್ತಾರೆ. ಆದರೆ ವಿವಾಹಿತ ಹೆಣ್ಣು ಮಕ್ಕಳ ವಿಷಯದಲ್ಲಿ ಕಾಯ್ದೆ ಏನು ಹೇಳುತ್ತದೆ? ಮದುವೆಯಾದ ಹೆಣ್ಣುಮಕ್ಕಳಿಗೂ ತಮ್ಮ ತಂದೆಯ ಆಸ್ತಿಯಲ್ಲಿ ಹಕ್ಕು ಇದೆಯೇ? ಇದಕ್ಕೆ ಉತ್ತರ ಸರಳವಾಗಿದೆ. 2005 ರಲ್ಲಿ ಹಿಂದೂ ಉತ್ತರಾಧಿಕಾರ ಕಾಯಿದೆಯ ತಿದ್ದುಪಡಿಯ ನಂತರ ಇದೀಗ ಮದುವೆಯಾದ ಬಳಿಕವೂ ಮಹಿಳೆಯ ತನ್ನ ಸಹೋದರನಿಗೆ ಸಮಾನವಾಗಿ ಆಸ್ತಿಗೆ ಸಮಾನ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ.
ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯಿದೆಯ ಪ್ರಕಾರ, 2005 ರ ಪ್ರಾರಂಭದ ಬಳಿಕ ಮತ್ತು ಮಿತಾಕ್ಷರ ಕಾನೂನಿನಿಂದ ನಿಯಂತ್ರಿಸಲ್ಪಡುವ ಒಂದು ಅವಿಭಕ್ತ ಹಿಂದೂ ಕುಟುಂಬದಲ್ಲಿ ಮಗಳು ಹುಟ್ಟಿನಿಂದಲೇ ಮಗನಂತೆಯೇ ಆಸ್ತಿಯಲ್ಲಿ ಪಾಲು ಹೊಂದಿರುತ್ತಾಳೆ. ಅದೇ ರೀತಿ 2025 ರ ಹಿಂದೂ ಉತ್ತರಾಧಿಕಾರ ಕಾಯಿದೆಯು ಹೇಳಲಾದ ಕಾಪರ್ಸೆನರಿ ಆಸ್ತಿಗೆ ಸಂಬಂಧಿಸಿದಂತೆ ಅದೇ ಹೊಣೆಗಾರಿಕೆಗಳಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.
ಏತನ್ಮಧ್ಯೆ, 1956 ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಜಾರಿಗೊಳ್ಳುವ ಮುನ್ನ ಒಂದು ವೇಳೆ ತಂದೆ ಮೃತಪಟ್ಟರೆ ಹೆಣ್ಣುಮಕ್ಕಳಿಗೆ ಉತ್ತರಾಧಿಕಾರದ ಹಕ್ಕುಗಳಿಲ್ಲ ಎಂದು ಬಾಂಬೆ ಹೈಕೋರ್ಟ್ ಕಳೆದ ತಿಂಗಳು ತೀರ್ಪು ನೀಡಿತ್ತು. ಬಾಂಬೆ ನ್ಯಾಯಾಲಯದ ಪ್ರಕಾರ, 1956 ರ ಕಾಯಿದೆ ಜಾರಿಗೆ ಬರುವ ಮೊದಲು ವ್ಯಕ್ತಿ ನಿಧನರಾದರೆ ಅವನ ಮರಣದ ಸಮಯದಲ್ಲಿ ಅಸ್ತಿತ್ವದಲ್ಲಿದ್ದ ಕಾನೂನುಗಳ ಪ್ರಕಾರ ಅವನ ಆಸ್ತಿಯನ್ನು ನೀಡಲಾಗುತ್ತದೆ. ಅಂದರೆ ಈ ಕಾನೂನಿನ ಪ್ರಕಾರ ಅದು ಹೆಣ್ಣು ಮಕ್ಕಳು ತಂದೆಯ ಆಸ್ತಿಯಲ್ಲಿ ಹಕ್ಕನ್ನು ಹೊಂದಿಲ್ಲ ಎಂದು ತಿಳಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications