ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ ಗಳ ಖಾಸಗೀಕರಣ ಪ್ರಸ್ತಾವವನ್ನು ವಿರೋಧಿಸಿ ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಮಾಡುವುದಾಗಿ ಒಂಬತ್ತು ಒಕ್ಕೂಟಗಳನ್ನು ಒಳಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (UFBU) ಮಂಗಳವಾರದಂದು ಕರೆ ನೀಡಿವೆ.
ಕಳೆದ ವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ವೇಳೆ, ಬಂಡವಾಳ ಹಿಂತೆಗೆತದ ಭಾಗವಾಗಿ ಎರಡು ಸಾರ್ವಜನಿಕ ಬ್ಯಾಂಕ್ (PSB's) ಖಾಸಗೀಕರಣದ ಬಗ್ಗೆ ಘೋಷಣೆ ಮಾಡಿದ್ದಾರೆ. ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್ ಅನ್ನು ಖಾಸಗೀಕರಣಗೊಳಿಸಿದೆ. ಆ ಬ್ಯಾಂಕ್ ನಲ್ಲಿನ ಪ್ರಮುಖ ಷೇರಿನ ಪಾಲನ್ನು 2019ರಲ್ಲಿ ಎಲ್ ಐಸಿಗೆ ಮಾರಿದೆ. ಕಳೆದ ನಾಲ್ಕು ವರ್ಷದಲ್ಲಿ ಹದಿನಾಲ್ಕು ಸಾರ್ವಜನಿಕ ಬ್ಯಾಂಕ್ ಅನ್ನು ವಿಲೀನಗೊಳಿಸಿದೆ.
ಮಂಗಳವಾರದಂದು ನಡೆದ UFBU ಸಭೆಯಲ್ಲಿ ಬ್ಯಾಂಕ್ ಖಾಸಗೀಕರಣ ಮಾಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ತೀರ್ಮಾನಿಸಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ (AIBEA) ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.

ಐಡಿಬಿಐ ಮತ್ತು ಎರಡು ಬ್ಯಾಂಕ್ ಗಳ ಖಾಸಗೀಕರಣ, ಬ್ಯಾಡ್ ಬ್ಯಾಂಕ್ ಸ್ಥಾಪನೆ, ಎಲ್ ಐಸಿ ಬಂಡವಾಳ ಹಿಂತೆಗೆತ, ಜನರಲ್ ಇನ್ಷೂರೆನ್ಸ್ ಕಂಪೆನಿಯ ಖಾಸಗೀಕರಣ, ಇನ್ಷೂರೆನ್ಸ್ ವಲಯದಲ್ಲಿ 74% ಎಫ್ ಡಿಐಗೆ ಅವಕಾಶ ಮತ್ತು ಸಾರ್ವಜನಿಕ ವಲಯ ಸಂಸ್ಥೆಗಳ ಪಾಲು ಮಾರಾಟ ಇತ್ಯಾದಿ ತೀರ್ಮಾನಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅವರು ಹೇಳಿದ್ದಾರೆ.
ಮಾರ್ಚ್ 15- 16, 2021ರಂದು ಎರಡು ದಿನಗಳ ಮುಷ್ಕರ ನಡೆಯಲಿದೆ. UFBU ಸದಸ್ಯ ಒಕ್ಕೂಟದ ಪಟ್ಟಿಯಲ್ಲಿ ಆಲ್ ಇಂಡಿಯಾ ಎಂಪ್ಲಾಯೀಸ್ ಅಸೋಸಿಯೇಷನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್ಫಡರೇಷನ್, ನ್ಯಾಷನಲ್ ಕಾನ್ಫಡರೇಷನ್ ಆಫ್ ಬ್ಯಾಂಕ್ ಎಂಪ್ಲಾಯೀಸ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮತ್ತು ಬ್ಯಾಂಕ್ ಎಂಪ್ಲಾಯೀಸ್ ಕಾನ್ಫಡರೇಷನ್ ಆಫ್ ಇಂಡಿಯಾ ಒಳಗೊಂಡಿವೆ.
ಜತೆಗೆ ಇಂಡಿಯನ್ ನ್ಯಾಷನಲ್ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್, ಇಂಡಿಯನ್ ನ್ಯಾಷನಲ್ ಬ್ಯಾಂಕ್ ಆಫೀಸರ್ಸ್ ಕಾಂಗ್ರೆಸ್, ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ವರ್ಕರ್ಸ್ ಮತ್ತು ನ್ಯಾಷನಲ್ ಆರ್ಗನೈಸೇಷನನ್ ಆಫ್ ಬ್ಯಾಂಕ್ ಆಫೀಸರ್ಸ್ ಸಹ ಒಕ್ಕೂಟದಲ್ಲಿ ಇವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications