ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (RRVL) ಪಬ್ಲಿಕ್ ಇನ್ವೆಸ್ಟ್ ಮೆಂಟ್ ಫಂಡ್ (PIF)ನಿಂದ ₹ 9,555 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ. ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಗುರುವಾರ ಘೋಷಣೆ ಮಾಡಿದೆ.
ಈ ಹೊಸ ಹೂಡಿಕೆಯು ರಿಲಯನ್ಸ್ ರೀಟೇಲ್ ಪ್ರೀ ಮನಿ ಈಕ್ವಿಟಿ ಮೌಲ್ಯವನ್ನು 4.587 ಲಕ್ಷ ಕೋಟಿ ರುಪಾಯಿ ಮಾಡಿದೆ. ಇಷ್ಟು ಮೊತ್ತಕ್ಕೆ ರಿಲಯನ್ಸ್ ರೀಟೇಲ್ ವೆಂಚರ್ಸ್ ನ 2.04% ಈಕ್ವಿಟಿ ಪಾಲು ಖರೀದಿಯನ್ನು PIF ಮಾಡಿದಂತಾಗುತ್ತದೆ. ಇದಕ್ಕೂ ಮುನ್ನ PIFನಿಂದ ರಿಲಯನ್ಸ್ ಇಂಡಸ್ಟ್ರೀಸ್ ಅಂಗಸಂಸ್ಥೆಯಲ್ಲಿ ಜಿಯೋ ಪ್ಲಾಟ್ ಫಾರ್ಮ್ಸ್ ನಲ್ಲಿ 2.32% ಷೇರಿನ ಪಾಲು ಖರೀದಿ ಮಾಡಿತ್ತು.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಮಾತನಾಡಿ, "ಸೌದಿ ಅರೇಬಿಯಾ ಜತೆಗೆ ರಿಲಯನ್ಸ್ ದೀರ್ಘಾವಧಿ ಸಂಬಂಧ ಇದೆ. ಸೌದಿ ಅರೇಬಿಯಾದ ಆರ್ಥಿಕ ಬದಲಾವಣೆ ಮುಂಚೂಣಿಯಲ್ಲಿ PIF ಇದೆ. ರಿಲಯನ್ಸ್ ರೀಟೇಲ್ ನಲ್ಲಿ ಗೌರವಾನ್ವಿತ ಸಹಭಾಗಿಗಳಾಗಿ PIF ಸ್ವಾಗತಿಸುತ್ತೇನೆ. ಮತ್ತು ಸುಸ್ಥಿರ ಅಭಿವೃದ್ಧಿ ಹಾಗೂ ಮಾರ್ಗದರ್ಶನವನ್ನು ಎದುರು ನೋಡುತ್ತೇವೆ.

"ಭಾರತದ ರೀಟೇಲ್ ವಲಯದಲ್ಲಿ ನೂರಾ ಮೂವತ್ತು ಕೋಟಿ ಭಾರತೀಯರು ಹಾಗೂ ಲಕ್ಷಾಂತರ ಸಣ್ಣ ವರ್ತಕರಿಗೆ ಬದಲಾವಣೆಗಾಗಿ ನಮ್ಮ ಮಹತ್ವಾಕಾಂಕ್ಷಿ ಪಯಣದಲ್ಲಿ ಮುಂದುವರಿದಿದ್ದೇವೆ" ಎಂದಿದ್ದಾರೆ.
PIF ಗವರ್ನರ್ ಯಾಸೀರ್ ಅಲ್- ರುಮಾಯ್ಯನ್ ಮಾತನಾಡಿ, " ಭಾರತದ ಅತ್ಯಂತ ಮುಖ್ಯವಾದ ವಲಯದ ಅತಿ ಮುಖ್ಯ ಕಂಪೆನಿ ರಿಲಯನ್ಸ್ ಇಂಡಸ್ಟ್ರೀಸ್ ಜತೆಗೆ ನಮ್ಮ ವಿಶ್ವಾಸಾರ್ಹ ಸಹಭಾಗಿತ್ವ ವಿಸ್ತರಣೆ ಆಗಿರುವುದಕ್ಕೆ ಸಂತೋಷ ಆಗುತ್ತಿದೆ," ಎಂದಿದ್ದಾರೆ.
ರಿಲಯನ್ಸ್ ರೀಟೇಲ್ ಲಿಮಿಟೆಡ್ ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಅಂಗಸಂಸ್ಥೆ. ಭಾರತದ ಅತಿ ದೊಡ್ಡ ಹಾಗೂ ವೇಗವಾಗಿ ಬೆಳೆಯುತ್ತಿರುವ ಮತ್ತು ಲಾಭದಾಯಕವಾದ ಉದ್ಯಮ. ದೇಶದಾದ್ಯಂತ 12 ಸಾವಿರ ಮಳಿಗೆಗಳನ್ನು ಹೊಂದಿದೆ. ಭಾರತದ ರೈತರು, ಎಂಎಸ್ ಎಂಇ ವಲಯ ಬಲಪಡಿಸುವ ಮೂಲಕ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುವ ಉದ್ದೇಶ ರಿಲಯನ್ಸ್ ರೀಟೇಲ್ ವೆಂಚರ್ಸ್ ಗೆ ಇದೆ ಎಂದು ಕಂಪೆನಿ ತಿಳಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications