ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಗೆ (PSB's) ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕದಲ್ಲಿ 2,867 ಪ್ರಕರಣಗಳಲ್ಲಿ 19,964 ಕೋಟಿ ರುಪಾಯಿ ವಂಚನೆ ಆಗಿದೆ ಎಂದು ಆರ್ ಟಿಐ ಅಡಿ ಹಾಕಿಕೊಂಡಿದ್ದ ಅರ್ಜಿಯಲ್ಲಿ ಪ್ರತಿಕ್ರಿಯೆ ಬಂದಿದೆ. ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ (ಎಸ್ ಬಿಐ) ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಯಾಗಿವೆ. ಆದರೆ ಮೌಲ್ಯದ ದೃಷ್ಟಿಯಿಂದ ಬ್ಯಾಂಕ್ ಆಫ್ ಇಂಡಿಯಾಗೆ ಅತಿ ಹೆಚ್ಚು ವಂಚನೆಯಾಗಿದೆ.
ಆರ್ ಟಿಐ ಕಾರ್ಯಕರ್ತ ಚಂದ್ರ ಶೇಖರ್ ಗೌರ್ ಹಾಕಿಕೊಂಡಿದ್ದ ಅರ್ಜಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ. 2020ರ ಏಪ್ರಿಲ್ ನಿಂದ ಜೂನ್ ಮಧ್ಯೆ ಒಟ್ಟು 12 ಸಾರ್ವಜನಿಕ ಬ್ಯಾಂಕ್ ನಲ್ಲಿ ಎಸ್ ಬಿಐನಲ್ಲಿ ಅತಿ ಹೆಚ್ಚು, ಅಂದರೆ 2050 ವಂಚನೆ ಪ್ರಕರಣಗಳು ದಾಖಲಾಗಿದ್ದು, 2,325.88 ಕೋಟಿ ರುಪಾಯಿ ವಂಚನೆಯಾಗಿದೆ.

ಯಾವ ಬ್ಯಾಂಕ್ ಗೆ ಎಷ್ಟು ವಂಚನೆ?
ಬ್ಯಾಂಕ್ ಆಫ್ ಇಂಡಿಯಾ 47 ಪ್ರಕರಣ, 5,124.87 ಕೋಟಿ
ಕೆನರಾ ಬ್ಯಾಂಕ್ 33 ಪ್ರಕರಣ, 3,885.26 ಕೋಟಿ
ಬ್ಯಾಂಕ್ ಆಫ್ ಬರೋಡಾ 60 ಪ್ರಕರಣ, 2842.94 ಕೋಟಿ
ಇಂಡಿಯನ್ ಬ್ಯಾಂಕ್ 45 ಪ್ರಕರಣ, 1469.79 ಕೋಟಿ
ಇಂಡಿಯನ್ ಓವರ್ ಸೀಸ್ ಬ್ಯಾಂಕ್ 37 ಪ್ರಕರಣ, 1207.65 ಕೋಟಿ
ಬ್ಯಾಂಕ್ ಆಫ್ ಮಹಾರಾಷ್ಟ್ರ 9 ಪ್ರಕರಣ, 1,140.37 ಕೋಟಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ 240 ಪ್ರಕರಣ, 270.65 ಕೋಟಿ
ಯುಕೋ ಬ್ಯಾಂಕ್ 130 ಪ್ರಕರಣ, 831.35 ಕೋಟಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 149 ಪ್ರಕರಣ, 655.84 ಕೋಟಿ
ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್ 18 ಪ್ರಕರಣ, 163.3 ಕೋಟಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 49 ಪ್ರಕರಣ, 46.52 ಕೋಟಿ
ಈ ದತ್ತಾಂಶಗಳ ಪೈಕಿ ಕೆಲವು ಬದಲಾವಣೆ ಕೂಡ ಆಗಬಹುದು ಎಂದು ಆರ್ ಬಿಐ ಪ್ರತಿಕ್ರಿಯೆ ನೀಡಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications