ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ಕಿಡಿ ಕಾರಿದ್ದಾರೆ. ಜಿಡಿಪಿ ಇಳಿಕೆ, ಉದ್ಯೋಗ ನಷ್ಟ, ನಿತ್ಯವೂ ಕೊರೊನಾ ಪ್ರಕರಣಗಳಲ್ಲಿನ ಹೆಚ್ಚಳ ಹಾಗೂ ಗಡಿಯಲ್ಲಿ ಉದ್ಭವವಾಗಿರುವ ಶತ್ರು ದೇಶಗಳ ಆತಂಕ "ಮೋದಿ ಸೃಷ್ಟಿಸಿದ ವಿಪತ್ತು" ಎಂದು ಟ್ವಿಟ್ಟರ್ ನಲ್ಲಿ ಪಟ್ಟಿಯೊಂದನ್ನು ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ದೇಶ ಎದುರಿಸುತ್ತಿರುವ ಆರು ವಿಪತ್ತುಗಳು ಎಂದು ಪಟ್ಟಿ ಮಾಡಿದ್ದು, ಅದನ್ನು "ಮೋದಿ ಸೃಷ್ಟಿಸಿದ ವಿಪತ್ತು" ಎಂದಿದ್ದಾರೆ. ಅಂದಹಾಗೆ ರಾಹುಲ್ ಪ್ರಸ್ತಾವ ಮಾಡಿರುವ ಸಮಸ್ಯೆಗಳೇನು ಎಂಬ ಮಾಹಿತಿ ಹೀಗಿದೆ:
1 ಜಿಡಿಪಿಯಲ್ಲಿ ಐತಿಹಾಸಿಕ ಇಳಿಕೆ -23.9%
2 ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
3 12 ಕೋಟಿ ಉದ್ಯೋಗ ನಷ್ಟ
4 ರಾಜ್ಯಗಳಿಗೆ ಪಾವತಿ ಮಾಡಬೇಕಾದ ಜಿಎಸ್ ಟಿ ಬಾಕಿ ನೀಡುತ್ತಿಲ್ಲ
5 ಜಾಗತಿಕ ಮಟ್ಟದಲ್ಲೇ ಭಾರತವು ಪ್ರತಿ ದಿನ ಅತಿ ಹೆಚ್ಚು ಕೊರೊನಾ ಸೋಂಕಿತ ಮತ್ತು ಸಾವಿನ ಪ್ರಕರಣ ದಾಖಲಿಸುತ್ತಿದೆ
6 ಗಡಿ ಪ್ರದೇಶದಲ್ಲಿ ಬಾಹ್ಯ ಆತಂಕ ಎದುರಾಗಿದೆ.

ಆಗಸ್ಟ್ 31ನೇ ತಾರೀಕಿನಂದು ಕೂಡ ಎನ್ ಡಿಎ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಕಳೆದ ಆರು ವರ್ಷಗಳಿಂದ ಅಸಂಘಟಿತ ವಲಯಗಳ ಮೇಲೆ ಎನ್ ಡಿಎ ಸರ್ಕಾರ ದಾಳಿ ನಡೆಸುತ್ತಿದೆ. ಅಪನಗದೀಕರಣ, ಜಿಎಸ್ ಟಿ ತಪ್ಪಾದ ಜಾರಿ ಹಾಗೂ ಲಾಕ್ ಡೌನ್ ನಿಂದ ಈ ವಲಯಗಳು ನಾಶವಾಗಿವೆ ಎಂದಿದ್ದರು.
More From GoodReturns

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?



Click it and Unblock the Notifications