ರೈಲ್ವೇಯ ಪ್ರಯಾಣಿಕರ ಸಾಮರ್ಥ್ಯವನ್ನು ಪ್ರಸ್ತುತ 800 ಕೋಟಿಯಿಂದ 1,000 ಕೋಟಿಗೆ ಹೆಚ್ಚಿಸಲು ಮುಂಬರುವ ನಾಲ್ಕು ಐದು ವರ್ಷಗಳಲ್ಲಿ 3,000 ಹೊಸ ರೈಲುಗಳನ್ನು ಪರಿಚಯಿಸುವ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದು ತಮ್ಮ ಸಚಿವಾಲಯದ ಮತ್ತೊಂದು ಗುರಿಯಾಗಿದೆ ಎಂದು ಸಚಿವರು ಹೇಳಿದರು. ಪ್ರಸ್ತುತ, ರೈಲ್ವೇಯು ವಾರ್ಷಿಕವಾಗಿ ಸುಮಾರು 800 ಕೋಟಿ ಪ್ರಯಾಣಿಕರನ್ನು ಸಾಗಿಸುತ್ತಿದೆ ಎಂದು ವೈಷ್ಣವ್ ಈ ಸಂದರ್ಭದಲ್ಲೇ ಉಲ್ಲೇಖಿಸಿದ್ದಾರೆ.

"ಜನಸಂಖ್ಯೆಯು ಹೆಚ್ಚುತ್ತಿರುವ ಕಾರಣ ನಾವು ನಾಲ್ಕರಿಂದ ಐದು ವರ್ಷಗಳಲ್ಲಿ ಸಾಮರ್ಥ್ಯವನ್ನು 1,000 ಕೋಟಿಗೆ ಹೆಚ್ಚಿಸಬೇಕಾಗಿದೆ. ಇದಕ್ಕಾಗಿ, ನಮಗೆ 3,000 ಹೆಚ್ಚುವರಿ ರೈಲುಗಳು ಬೇಕಾಗುತ್ತವೆ. ಹೆಚ್ಚುವರಿ ಪ್ರಯಾಣಿಕರ ಸಾಗಾಟಕ್ಕೆ ಇದು ಸಹಾಯವಾಗುತ್ತದೆ," ಎಂದು ಸಚಿವರು ಹೇಳಿದರು.
ರೈಲ್ವೆ ಮೂಲಗಳ ಪ್ರಕಾರ, 69,000 ಹೊಸ ಕೋಚ್ಗಳು ಲಭ್ಯವಿದ್ದು, ಪ್ರತಿ ವರ್ಷ ಸುಮಾರು 5,000 ಹೊಸ ಕೋಚ್ಗಳನ್ನು ತಯಾರಿಸುತ್ತಿದೆ. ಮೂಲಗಳ ಪ್ರಕಾರ, ರೈಲ್ವೆಯು ಪ್ರತಿ ವರ್ಷ 200 ರಿಂದ 250 ಹೊಸ ರೈಲುಗಳನ್ನು ಆರಂಭಿಸಲಿದೆ.
ಹೆಚ್ಚುವರಿಯಾಗಿ 400 ರಿಂದ 450 ವಂದೇ ಭಾರತ್ ರೈಲುಗಳನ್ನು ಆರಂಭ ಮಾಡಲಿದೆ. ಮುಂಬರುವ ವರ್ಷದಲ್ಲಿಯೇ ಈ ರೈಲುಗಳನ್ನು ಸೇರಿಸಲಾಗುತ್ತದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದು ಮತ್ತೊಂದು ಗುರಿಯಾಗಿದೆ ಎಂದು ವೈಷ್ಣವ್ ಹೇಳಿದರು.
ಇನ್ನು ಪ್ರಸ್ತುತ ನಾವು ರೈಲಿನಲ್ಲಿ ಟಿಕೆಟ್ ಬುಕ್ ಮಾಡಿದರೆ ಯಾವುದೇ ಸೀಟ್ ಇಲ್ಲ ಎಂದಾದರೆ ವೇಟಿಂಗ್ ಲಿಸ್ಟ್ನಲ್ಲಿ ಇರುತ್ತೇವೆ. ಆದರೆ ಇನ್ನು ಕೆಲವೇ ವರ್ಷಗಳಲ್ಲಿ ಈ ವೇಟಿಂಗ್ ಲಿಸ್ಟ್ ಅನ್ನು ಸಂಪೂರ್ಣವಾಗಿ ರದ್ದು ಮಾಡಲು ರೈಲ್ವೆ ಸಚಿವಾಲಯವು ಮುಂದಾಗಿದೆ ಎಂದು ವರದಿಯಾಗಿದೆ.
2023ರ ಏಪ್ರಿಲ್ನಿಂದ ಅಕ್ಟೋಬರ್ವರೆಗೆ, ಪ್ರಯಾಣಿಕರ ಹಂಚಿಕೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಡೇಟಾ ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಜನರಲ್ ಮತ್ತು ಸ್ಲೀಪರ್ ಕ್ಲಾಸ್ಗಳನ್ನು ಒಳಗೊಂಡಂತೆ ನಾನ್-ಎಸಿ ಕೋಚ್ಗಳು ಒಟ್ಟು ಪ್ರಯಾಣಿಕರಲ್ಲಿ ಶೇಕಡ 95.3 ರಷ್ಟು ಅಂದರೆ 372 ಕೋಟಿ ಪ್ರಯಾಣಿಕರನ್ನು ಹೊಂದಿದ್ದವು.
ಹಿಂದಿನ ವರ್ಷಕ್ಕೆ ಹೋಲಿಸಿದರೆ ರೈಲಿನಲ್ಲಿ 38 ಕೋಟಿ ಪ್ರಯಾಣಿಕರ ಗಣನೀಯ ಹೆಚ್ಚಳ ಕಂಡುಬಂದಿದೆ. ಇದು ಆರ್ಥಿಕವಾಗಿ ನೋಡಿದಾಗ ಪ್ರಯಾಣದ ಆಯ್ಕೆಗಳಿಗೆ ಜನರು ಕಡಿಮೆ ದರದ ಪ್ರಯಾಣದ ಆಯ್ಕೆಯಾದ ರೈಲುಗಳನ್ನು ಅಧಿಕವಾಗಿ ಆಯ್ಕೆ ಮಾಡುವುದು ಕಂಡು ಬರುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications