ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಚಳಿಗಾಲ (Winter Season) ಆರಂಭವಾಗಿದೆ. ಆ ನಡುವೆಯೂ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದೆ. ಗುರುವಾರ (ನ.13) ಸಂಜೆ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮೊದಲೇ ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಮುನ್ಸೂಚನೆ (Rain Alert) ನೀಡಿತ್ತು. ಆದ್ರೆ ಇದೀಗ ಮತ್ತೆ ವರುಣನ ಅಬ್ಬರ ಶುರುವಾಗಿದೆ. ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ಮತ್ತೆ ಆಗಮನವಾಗಿದೆ.

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ. ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 40 ರಿಂದ 60 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ವಿವರಿಸಿದೆ.
ಈ ಜಿಲ್ಲೆಗಳಲ್ಲೂ ಭಾರೀ ಮಳೆ:
ಕಲಬುರಗಿ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ.
ಬೆಂಗಳೂರಿನಲ್ಲೂ ಮಳೆ ಎಚ್ಚರಿಕೆ
ಇನ್ನು ಕರಾವಳಿ ಜಿಲ್ಲೆಗಳು ಮಾತ್ರವಲ್ಲ ರಾಜಧಾನಿ ಬೆಂಗಳೂರಿಗೂ ಭಾರತೀಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆಯನ್ನು ನೀಡಿದೆ. ಆದ್ದರಿಂದ ಮುಂದಿನ ಕೆಲವು ದಿನಗಳವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮಳೆ ಬರುವ ಕಾರಣ ಬೆಂಗಳೂರಿನಲ್ಲಿ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಎರಡದಿಂದ ಮೂರು ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆ ಕಾಣಲಿದೆ.
ನವೆಂಬರ್ 17 ರಿಂದ ಮಳೆಯಾರ್ಭಟ ಶುರು!
ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 17 ರಿಂದ ಮಳೆ ಆರಂಭವಾಗಲಿದೆ ಎಂದು ಮೊದಲೇ ಮುನ್ಸೂಚನೆ ನೀಡಿತ್ತು. ಆದ್ರೆ ಅದಕ್ಕೂ ಮುನ್ನವೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಸೂಚನೆ ಪ್ರಕಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ನವೆಂಬರ್ 17 ರಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕೆಲವು ದಿನಗಳ ನಂತರ ಮಳೆ ಬೀಳುವ ಸಾಧ್ಯತೆ ಇರುವುದರಿಂದ, ಯಾವ ರೀತಿ ಮಳೆ ಬೀಳಬಹುದು ಎಂದು ಅಂದಾಜಿಸಲು ಸಾಧ್ಯವಿಲ್ಲ. ಆದ್ರೆ ಎಲ್ಲಾದರೂ ಟ್ರಾವೆಲ್ ಮಾಡಬೇಕೆಂದು ಪ್ಲಾನ್ ಮಾಡಿದ್ದವರು ಮೊದಲೇ ಹವಾಮಾನ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಭಾರತೀಯ ಹವಾಮಾನ ಇಲಾಖೆಯ ವೆಬ್ಸೈಟ್ ಅಥವಾ ಯಾವುದೇ ಮಾಧ್ಯಮ ವರದಿಯನ್ನು ನೋಡಿಕೊಂಡು ಟ್ರಿಪ್, ಟ್ರಾವೆಲ್ ಪ್ಲಾನ್ ಮಾಡಿ. ಇನ್ನು ಬೆಂಗಳೂರಿನಂತಹ ರಸ್ತೆಗಳು ನೀರಿನಿಂದ ಜಲಾವೃತವಾಗುವ ಸಾಧ್ಯತೆ ಇರುವುದರಿಂದ ಚಾಲಕರು ಎಚ್ಚರಿಕೆ ವಹಿಸುವುದು ಮುಖ್ಯ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ಕರ್ನಾಟಕದಲ್ಲಿ ಮಾರ್ಚ್ನಲ್ಲಿ ಹೆಚ್ಚಾಗಲಿದೆ ಬಿಸಿಲು! ಎಲ್ಲೆಲ್ಲಿ ಗೊತ್ತಾ?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!



Click it and Unblock the Notifications