ಒಂದು ಕಡೆ ಚಳಿ, ಮತ್ತೊಂದು ಕಡೆ ಮಳೆ, ಜನರಂತೂ ಹವಾಮಾನ ಬದಲಾವಣೆಯಿಂದ ತತ್ತರಿಸಿ ಹೋಗಿದ್ದಾರೆ. ಕೆಲವರು ಬೆಳೆ ಹಾನಿಯ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಇನ್ನೂ ಕೆಲವರು ಆರೋಗ್ಯದ ಚಿಂತೆಯಲ್ಲಿದ್ದಾರೆ. ಅದರಲ್ಲೂ ದಿತ್ವಾ ಚಂಡಮಾರುತಕ್ಕೆ (Ditwah Cyclone) ಶ್ರೀಲಂಕಾವಂತೂ ಅಕ್ಷರಶಃ ನಲುಗಿ ಹೋಗಿದೆ. ನೂರಾರು ಮಂದಿ ನಾಪತ್ತೆ, ನೂರಾರು ಮನೆಗಳು ನೆಲಸಮವಾಗಿಬಿಟ್ಟಿದೆ. ಇದೀಗ ಚಂಡಮಾರುತದ ಪರಿಣಾಮ ತಮಿಳುನಾಡು, ಚೆನ್ನೈ, ಕರ್ನಾಟಕ, ಕೇರಳಕ್ಕೂ ತಟ್ಟಿದೆ. ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೂ ರಜೆ (School-College Holiday) ಘೋಷಣೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲೂ ಈ ವಾರವಿಡೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ ಪ್ರಕಾರ ವಿಜಯನಗರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಸಣ್ಣ ಮಳೆಯಾಗಬಹುದು. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಹವಾಮಾನ:
ಬೆಂಗಳೂರಿನಲ್ಲೂ ವರುಣನ ಅಬ್ಬರ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ದಿನವಿಡೀ ಮೋಡಕವಿದ ವಾತಾವರಣ ಕಂಡುಬರಲಿದೆ. ಇನ್ನು ತಾಪಮಾನ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವರದಿಯಾಗಿದೆ.
ತಮಿಳುನಾಡಿಗೂ ತಟ್ಟಿದ ಚಂಡಮಾರುತ!
ದಿತ್ವಾ ಚಂಡಮಾರುತದ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚೆನ್ನೈನಲ್ಲಿ ಮಳೆಯಬ್ಬರ ಜೋರಾಗಿಯೇ ಇದೆ. ಈ ಹಿನ್ನೆಲೆ ಗುರುವಾರ (ಡಿ.04) ಚೆನ್ನೈ ಮತ್ತು ತಿರುವಲ್ಲೂರು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಗುರುವಾರ ಮಧ್ಯಾಹ್ನದವರೆಗೂ ಚೆನ್ನೈ, ತಿರುವಲ್ಲೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತದಿಂದ ಉಂಟಾದ ವಾಯುಭಾರ ಕುಸಿತವು ದುರ್ಬಲಗೊಂಡು ಈ ಮಳೆಗೆ ಕಾರಣವಾಗಿದೆ. ಇನ್ನು ವಿಲ್ಲುಪುರಂ, ಕಡಲೂರು ಮತ್ತು ತಿರುವಣ್ಣಾಮಲೈ ಸೇರಿ ಹಲವು ಕಡೆಗಳಲ್ಲಿ ಹಲವು ದಿನಗಳ ನಂತರ ಮತ್ತೆ ಭಾರಿ ಮಳೆ ಸುರಿಯುತ್ತಿದೆ. ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಅಪಾಯಗಳನ್ನು ತಡೆಗಟ್ಟಲು ಅಧಿಕಾರಿಗಳು ನದಿಗಳು ಮತ್ತು ತಗ್ಗು ಪ್ರದೇಶಗಳಲ್ಲಿನ ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನು ಮದ್ರಾಸ್ ವಿಶ್ವವಿದ್ಯಾಲಯವು ಭಾರಿ ಮಳೆಯಿಂದಾಗಿ ಬುಧವಾರದಂದು ನಿಗದಿಪಡಿಸಲಾಗಿದ್ದ ಎಲ್ಲಾ ಯುಜಿ, ಪಿಜಿ ಮತ್ತು ವೃತ್ತಿಪರ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ರಿಜಿಸ್ಟ್ರಾರ್ ಪ್ರೊ. ರೀಟಾ ಜಾನ್ ತಿಳಿಸಿದ್ದಾರೆ.
More From GoodReturns

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಕರ್ನಾಟಕದಲ್ಲಿ ಮಾರ್ಚ್ನಲ್ಲಿ ಹೆಚ್ಚಾಗಲಿದೆ ಬಿಸಿಲು! ಎಲ್ಲೆಲ್ಲಿ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications