ಇತ್ತೀಚೆಗಷ್ಟೇ ದೇಶದಲ್ಲಿ ಮೊಂಥಾ ಚಂಡಮಾರುತ (Cyclone Montha) ಮತ್ತು ನೈಋತ್ಯ ಮಾನ್ಸೂನ್ ಹಿಂದಿರುಗುವಿಕೆಯಿಂದ ಮಳೆಯಬ್ಬರ ಜೋರಾಗಿತ್ತು. ಅದರಲ್ಲೂ ಮೊಂಥಾ ಚಂಡಮಾರುತದ ಅಬ್ಬರಕ್ಕೆ ಕೆಲ ರಾಜ್ಯಗಳು ತತ್ತರಿಸಿ ಹೋಗಿತ್ತು. ಹವಾಮಾನ ಇಲಾಖೆ ನವೆಂಬರ್ನಲ್ಲಿ ಮಳೆ ಪ್ರಮಾಣ ಇಳಿಕೆಯಾಗಲಿದೆ ಎಂದು ಸೂಚನೆ ನೀಡಿತ್ತು. ಆದ್ರೆ ಇದೀಗ ಮತ್ತೆ ನವೆಂಬರ್ 4 ರಿಂದ ಮಳೆ ಬರುವ ಸಾಧ್ಯತೆ ಇದೆ ಎಂದು ದಿಢೀರ್ ಮುನ್ಸೂಚನೆ ನೀಡಿದೆ. ಒಂದು ವಾರ ಬಿಡುವು ಕೊಟ್ಟಿದ್ದ ಮಳೆ, ಇದೀಗ ಮತ್ತೆ ಬರುವ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ವಾರಾಂತ್ಯದಲ್ಲಿ ಬೆಂಗಳೂರು (Bengaluru) ಸೇರಿ ರಾಜ್ಯದ ಹಲವೆಡೆ ಮಧ್ಯಮದಿಂದ ಸಾಧಾರಣ ಮಳೆಯಾಗುವ (Rain Alert) ನಿರೀಕ್ಷೆಯಿದೆ.

ಮುಂದಿನ 4 ದಿನ ರಾಜ್ಯದಲ್ಲಿ ಮಳೆ:
ನವೆಂಬರ್ 4 ರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣಾರ್ಭಟ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಲ್ಲದೇ ನವೆಂಬರ್ 5 ರಿಂದ 7 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ನವೆಂಬರ್ 4 ರಂದು ಈ ಜಿಲ್ಲೆಯಲ್ಲಿ ಮಳೆ:
ನವೆಂಬರ್ 4, ಮಂಗಳವಾರ ಉತ್ತರ ಕರ್ನಾಟಕದ ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಮಧ್ಯಮದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜನರು ಹವಾಮಾನ ಮುನ್ಸೂಚನೆಯನ್ನು ನೋಡಿಕೊಂಡು ಮುಂದುವರೆದರೆ ಉತ್ತಮ.
ನವೆಂಬರ್ 5 ರಿಂದ ಇಲ್ಲೆಲ್ಲಾ ಭಾರೀ ಮಳೆ!
ಇನ್ನು ನವೆಂಬರ್ 5 ರ ನಂತರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಇದು ನವೆಂಬರ್ 7 ರವರೆಗೂ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನವೆಂಬರ್ 4 ರಿಂದ ಉತ್ತರ ಭಾರತದಾದ್ಯಂತ ಹವಾಮಾನದಲ್ಲಿ ವೈಪರೀತ್ಯ ಕಾಣಲಿದೆ. ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ, ದೇಶದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಪರಿಣಾಮ ನವೆಂಬರ್ 4 ರಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ, ಲಡಾಖ್, ಉತ್ತರಾಖಂಡಗಳಲ್ಲಿ ಗುಡುಗು ಸಹಿತ, ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಾರ್ವಜನಿಕರಿಗೆ ಸಲಹೆ: ಸಾಮಾನ್ಯವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಸ್ವಲ್ಪ ಮಳೆಯಾದರೆ ಸಾಕುಮ ರಸ್ತೆಗಳೆಲ್ಲಾ ಜಲಾವೃತವಾಗುತ್ತದೆ. ಈ ಸಂದರ್ಭಗಳಲ್ಲಿ ಹಲವು ಕಡೆಗಳಲ್ಲಿ ಟ್ರಾಫಿಕ್ ಸಮಸ್ಯೆಗಳು ಉದ್ಭವಗೊಳ್ಳುತ್ತದೆ. ಆದ್ದರಿಂದ ಪ್ರಯಾಣಿಕರು ಎಚ್ಚರವಹಿಸುವುದು ಅಗತ್ಯ.
More From GoodReturns

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Karnataka Weather: ಕರ್ನಾಟಕದಲ್ಲಿ ಮಾರ್ಚ್ನಲ್ಲಿ ಹೆಚ್ಚಾಗಲಿದೆ ಬಿಸಿಲು! ಎಲ್ಲೆಲ್ಲಿ ಗೊತ್ತಾ?

Bengaluru Metro: ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗುಡ್ನ್ಯೂಸ್! BMRCL ಮಹತ್ವದ ನಿರ್ಧಾರ

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ



Click it and Unblock the Notifications