ನವದೆಹಲಿ, ಜೂನ್ 26: ಇತ್ತೀಚೆಗೆ ಪ್ರಧಾನಮಂತ್ರಿ ಪರಿಹಾರ ನಿಧಿ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದೆ. ಕೊರೊನಾ ಪಿಎಂ ಕೇರ್ಸ್ ಫಂಡ್ ವಿಚಾರವಾಗಿ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯ ಮೇಲೆ ಆರೋಪ ಹೊರಿಸಿದ್ದವು.
ಇದೀಗ ಇದೇ ಅಸ್ತ್ರವನ್ನು ಬಿಜೆಪಿ ಕಾಂಗ್ರೆಸ್ ಮೇಲೆ ಪ್ರಯೋಗಿಸಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ಗಾಂಧಿ ಕುಟುಂಬ ನಡೆಸುವ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯ ಹಣವನ್ನು ದೇಣಿಗೆ ನೀಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
ಇದು ಲಜ್ಜೆಗೆಟ್ಟ ವಂಚನೆ ಮತ್ತು ಜನರಿಗೆ ದೊಡ್ಡ ದ್ರೋಹ ಎಂದ ಜೆ.ಪಿ.ನಡ್ಡಾ ಹೇಳಿದ್ದಾರೆ. ಈ ಆರೋಪ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನುಂಟು ಮಾಡಿದೆ.
ಪರೋಕ್ಷವಾಗಿ ಮನಮೋಹನ ಸಿಂಗ್ ಮೇಲೆ ಆರೋಪ
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಲ್ಲಿನ ಹಣವನ್ನು, ಯುಪಿಎ ಸರ್ಕಾರ, ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ದಾನ ಮಾಡುತ್ತಿತ್ತು. ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡವರು ಯಾರು ಎಂಬುದು ಹಾಗೂ ಅಂದಿನ ಪ್ರಧಾನಿ ಯಾರ ಕೈಗೊಂಬೆಯಾಗಿದ್ದರು ಎಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಪರೋಕ್ಷವಾಗಿ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರ ಮೇಲೆ ನಡ್ಡಾ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಕ್ಷಮೆಯಾಚಿಸಬೇಕಾಗಿದೆ
ಭಾರತದ ಜನ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುಟುಂಬವೊಂದು ನಡೆಸುವ ಪ್ರತಿಷ್ಠಾನಕ್ಕೆ ಕೊಡುವುದು ಲಜ್ಜೆಗೆಟ್ಟ ವಂಚನೆ ಮಾತ್ರವಲ್ಲದೆ ಜನರಿಗೆ ಮಾಡಿದ ದೊಡ್ಡ ದ್ರೋಹ ಕೂಡ ಆಗಿದೆ. ಸ್ವಯಂ ಲಾಭಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿಯನ್ನು ಲೂಟಿ ಮಾಡಿರುವುದಕ್ಕೆ ಕಾಂಗ್ರೆಸ್ ಕ್ಷಮೆಯಾಚಿಸಬೇಕಾಗಿದೆ ಎಂದು ನಡ್ಡಾ ಹೇಳಿದ್ದಾರೆ.
ಮೂರು ಬಾರಿ ಹಣ ವರ್ಗಾವಣೆ
ಯುಪಿಎ ಅಧಿಕಾರದಲ್ಲಿದ್ದಾಗ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೂರು ಬಾರಿ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಹಣವನ್ನು ನೀಡಲಾಗಿದೆ ಎಂದು ನಡ್ಡಾ ಆರೋಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಮಂಡಳಿಯಲ್ಲಿದ್ದರು ಹಾಗೂ ಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಮುಖ್ಯಸ್ಥರಾಗಿದ್ದರು ಎಂದು ನಡ್ಡಾ ಆರೋಪಿಸಿದ್ದಾರೆ.
ಚೀನಾ ಗಡಿ ಪರಿಸ್ಥಿತಿ ಗಮನ ಬೇರೆಡೆ ಸೆಳೆಯಲು
ಆರೋಪದ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಮಾಡುತ್ತಿರುವ ದೊಡ್ಡ ಅಪಚಾರ ಇದು. ಚೀನಾ ವಿರುದ್ಧ ಹೋರಾಡಿ ನಮ್ಮ ದೇಶವನ್ನು ರಕ್ಷಿಸುವ ಬದಲು ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications