ಇತ್ತೀಚೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(kempegowda international airport)ನಟಿ ಅರೆಸ್ಟ್ ಆಗಿದ್ದರು. ಚಿನ್ನ(Gold Smuggling) ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ( Ranya Rao)ಬಂಧನವಾದ ಸುದ್ದಿ ರಾಜ್ಯ, ದೇಶದೆಲ್ಲೆಡೆ ದೊಡ್ಡ ಸಂಚಲನ ಸೃಷ್ಟಿಸಿದೆ. ಇದೀಗ, ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಇವರು ಕಳ್ಳಸಾಗಣೆ ಸಿಂಡಿಕೇಟ್ನ ಭಾಗವಾಗಿದ್ದರು ಮತ್ತು ಹಲವು ಬಾರಿ ದೇಶಕ್ಕೆ ಅಕ್ರಮವಾಗಿ ಚಿನ್ನವನ್ನು ತಂದಿದ್ದರು ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನ್ಯಾಯಾಲಯಕ್ಕೆ ಮಾಹಿತಿಯನ್ನು ನೀಡಿದೆ.
ಇನ್ನು ಈ ಪ್ರಕರಣದಲ್ಲಿ ಪ್ರಮುಖ ನಾಯಕಿಯಾದ ನಟಿ ರನ್ಯಾ ರಾವ್(Actress Ranya Rao) ಪೊಲೀಸ್ ಮಹಾನಿರ್ದೇಶಕ ರಾಮಚಂದ್ರ ರಾವ್ ಅವರ ಪುತ್ರಿ ಎಂಬುದು ಜಗಜ್ಜಾಹೀರಾಗಿದೆ. ಈಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರಿಂದ 12.56 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ಮನೆಯಲ್ಲಿ ನಡೆಸಿದ ಶೋಧದಲ್ಲಿ 2.06 ಕೋಟಿ ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ಮೌಲ್ಯದ ಭಾರತೀಯ ಕರೆನ್ಸಿ ಪತ್ತೆಯಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಕಳ್ಳಸಾಗಣೆ ಸಿಂಡಿಕೇಟ್ನ ಭಾಗವಾಗಿದ್ದರು ಮತ್ತು ಹಲವು ಬಾರಿ ದೇಶಕ್ಕೆ ಅಕ್ರಮವಾಗಿ ಚಿನ್ನವನ್ನು ತಂದಿದ್ದರು ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಕರ್ನಾಟಕ ನ್ಯಾಯಾಲಯಕ್ಕೆ ಮಾಹಿತಿಯನ್ನು ತಿಳಿಸಿದ್ದಾರೆ.
ಮಾರ್ಚ್ 12 ರಂದು, ಕೇಂದ್ರ ತನಿಖಾ ದಳ (ಸಿಬಿಐ) ಜೊತೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್ಐ , ಹವಾಲಾ ಮೂಲಕ ಹಣವನ್ನು ವ್ಯವಸ್ಥೆ ಮಾಡಿ ವರ್ಗಾಯಿಸಲಾಗಿದೆ ಎಂದು ಹೇಳಿತು ಮತ್ತು ಅವರು ಆ ಮಾರ್ಗದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇನ್ನೂ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಹೆಚ್ಚಿನ ಸಂಪನ್ಮೂಲಗಳು ಮತ್ತು ಅತ್ಯಾಧುನಿಕ ಜಾಲವನ್ನು ಹೊಂದಿರುವ ದೊಡ್ಡ ಸಿಂಡಿಕೇಟ್ನ ಭಾಗವಾಗಿ ಕಂಡುಬರುತ್ತಿರುವುದರಿಂದ, ಅವರು ಯಾವುದೇ ಅಪರಾಧವನ್ನು ಮಾಡದಂತೆ ತಡೆಯಲು ಅವರನ್ನು ಬಂಧಿಸುವುದು ಅವಶ್ಯಕ ಎಂದು ಮಾಹಿತಿ ತಿಳಿದು ಬಂದಿದೆ.
ಕಳ್ಳಸಾಗಣೆ ದಂಧೆ
ಇಂಡಿಯನ್ ಎಕ್ಸ್ಪ್ರೆಸ್ನ ವರದಿ ಮಾಡಿರುವ ಪ್ರಕಾರ ದುಬೈನಿಂದ ಕಾರ್ಯನಿರ್ವಹಿಸುತ್ತಿರುವ "ಸಂಘಟಿತ ಕಳ್ಳಸಾಗಣೆ ಸಿಂಡಿಕೇಟ್ ನ ದೊಡ್ಡ ಪಿತೂರಿ ಮತ್ತು ಅದರಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಡಿಆರ್ಐ ಸಿಬಿಐ ಅನ್ನು ಕೇಳಿದೆ ಎಂದು ಅವರು ವರದಿ ಮಾಡಿದ್ದಾರೆ.
ಇನ್ನೂ ಇವರು ಈ ತಿಂಗಳ ಆರಂಭದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಒಮಾನ್ ಮತ್ತು ಯುಎಇಯ ಇಬ್ಬರು ವಿದೇಶಿ ಪ್ರಜೆಗಳನ್ನು18.92 ಕೋಟಿ ಮೌಲ್ಯದ 21.28 ಕೆಜಿ ಚಿನ್ನದೊಂದಿಗೆ ಬಂಧಿಸಿದ ನಂತರ ಡಿಆರ್ಐ ಸಿಬಿಐಗೆ ದೂರು ನೀಡಿತು .
ಕನ್ನಡ ನಟಿ ರನ್ಯಾ ರಾವ್ ಅವರ ಸ್ನೇಹಿತ ತರುಣ್ ಕೊಂಡರಾಜು ಅವರನ್ನು ಡಿಆರ್ಐ ವಶಕ್ಕೆ ತೆಗೆದುಕೊಂಡು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಎಂದು ಸುದ್ದಿ ಸಂಸ್ಥೆಗಳು ಮಾಹಿತಿಯನ್ನು ತಿಳಿಸಿದೆ,
ಸಿಐಡಿ ತನಿಖೆ ಹಿಂತೆಗೆದುಕೊಂಡ ರಾಜ್ಯ ಸರ್ಕಾರ
ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿಗಳ ಸಂಭಾವ್ಯ ಲೋಪಗಳು ಮತ್ತು ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸುವಂತೆ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಗೆ ನಿರ್ದೇಶನ ನೀಡಿದ್ದ ಆದೇಶವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂತೆಗೆದುಕೊಂಡಿದೆ .
ಆರಂಭದಲ್ಲಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಉಲ್ಲಂಘನೆಯ ತನಿಖೆ ನಡೆಸುವ ಕಾರ್ಯವನ್ನು ರಾಜ್ಯ ಪೊಲೀಸರ ಸಿಐಡಿಗೆ ವಹಿಸಲಾಗಿತ್ತು.
ಸದ್ಯ ಈ ಪ್ರಕರಣ ಸಂಬಂಧ ತನಿಖೆ ಚುರುಕುಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಯಾವೆಲ್ಲಾ ಮಾಹಿತಿಗಳು ಹೊರ ಬೀಳುತ್ತವೆ, ಈ ಪ್ರಕರಣದಲ್ಲಿ ಯಾರದ್ದೆಲ್ಲಾ ಕೈವಾಡವಿದೆ, ಇದರ ಹಿಂದಿನ ಉದ್ದೇಶವೇನು, ಇದು ಎಂಬುದೆಲ್ಲಾ ತಿಳಿದುಬರಲಿದೆ.
More From GoodReturns

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications