ಯೆಸ್ ಬ್ಯಾಂಕ್ ಮೇಲೆ ಹೇರಲಾಗಿದ್ದ ನಿರ್ಬಂಧದ ಆದೇಶವನ್ನು ಮಾರ್ಚ್ 18ರಂದು ಬುಧವಾರ ಸಂಜೆ 6 ಗಂಟೆಗೆ ಹಿಂತೆಗೆದುಕೊಳ್ಳಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್ ಯೆಸ್ ಬ್ಯಾಂಕ್ ಠೇವಣಿದಾರರ ಹಣ ಭದ್ರವಾಗಿದೆ. ಯಾರು ಭಯ ಪಡಬೇಕಾದ ಅಗತ್ಯವಿಲ್ಲ. ಹೊಸ ಆಡಳಿತ ಮಂಡಳಿ ಮಾರ್ಚ್ 26ರಿಂದ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಬ್ಯಾಂಕ್ ಓಪನ್ ಆದ ಕೂಡಲೇ ಗಾಬರಿಗೊಂಡು ಹಣ ವಿತ್ಡ್ರಾ ಮಾಡದಿರಿ
ಆರ್ಬಿಐ ಮಾರ್ಚ್ 18ರಂದು ಬುಧವಾರ ಸಂಜೆ 6 ಗಂಟೆಗೆ ಯೆಸ್ ಬ್ಯಾಂಕ್ ಮೇಲೆ ಹೇರಿರುವ ನಿರ್ಬಂಧ ಹಿಂಪಡೆಯುತ್ತದೆ. ಆ ಬಳಿಕ ಠೇವಣಿದಾರರು ಗಾಬರಿಗೊಂಡು ಹಣ ವಿತ್ಡ್ರಾ ಮಾಡಲು ಹೋಗದಿರಿ ಎಂದಿದ್ದಾರೆ.
ಬುಧವಾರದಿಂದ ಎಲ್ಲಾ ಆನ್ಲೈನ್ ಸೇವೆಗಳು ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗಲಿದೆ ಎಂದು ಸ್ವತಃ ಯೆಸ್ ಬ್ಯಾಂಕ್ ಟ್ವೀಟ್ ಮಾಡಿದೆ.
ಕೊರೊನಾ ವೈರಸ್ನಿಂದ ಭಾರತ ಆರ್ಥಿಕತೆ ಮೇಲೆ ನೇರ ಪರಿಣಾಮ
ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಭಾರತ ಹೊರತಾಗಿಲ್ಲ. ವಿಶ್ವದ ಹಲವು ರಾಷ್ಟ್ರಗಳು ಇದಕ್ಕೆ ತುತ್ತಾಗಿವೆ. ಭಾರತದಲ್ಲಿ 100ಕ್ಕೂ ಹೆಚ್ಚು ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ. ಕೊರೊನಾವೈರಸ್ ವಾಣಿಜ್ಯ ಚಟುವಟಿಕೆಗೆ ಅಡ್ಡಿಯಾಗಿ ಭಾರತದ ಆರ್ಥಿಕತೆ ಮೇಲೆ ನೇರ ಪರಿಣಾಮ ಬೀರಬಹುದು. ಸೋಂಕು ತಡೆಗೆ ಸರ್ಕಾರ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.
ಸೋಂಕು ಹರಡುವುದನ್ನು ತಡೆಯಲು ಡಿಜಿಟಲ್ ಪಾವತಿ ಮಾಡಿ
ಕೊರೊನಾವೈರಸ್ ಸೋಂಕು ಹರಡುವುದನ್ನು ತಡೆಯಲು ಡಿಜಿಟಲ್ ಪಾವತಿ ವ್ಯವಸ್ಥೆ ಮಾಡಿ ಎಂದು ಆರ್ಬಿಐ ಸಲಹೆ ನೀಡಿದೆ. ನೋಟುಗಳಿಂದ ವೈರಸ್ ಹರಡುವ ಪ್ರಮಾಣವು ಹೆಚ್ಚಿರುತ್ತದೆ. ಹೀಗಾಗಿ ಡಿಜಿಟಲ್ ಪಾವತಿ ಉತ್ತಮ ಎಂದಿದ್ದಾರೆ.
ವೈರಸ್ ಸೋಂಕಿನಿಂದಾಗಿ ಭಾರತದ ಆರ್ಥಿಕತೆ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಕ್ರಮಗಳ ಕುರಿತು ಏಪ್ರಿಲ್ 3ರಂದು ಹಣಕಾಸು ನೀತಿ ಪರಿಶೀಲನೆಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಬಡ್ಡಿ ದರ ಇಳಿಸಲು ಮತ್ತಷ್ಟು ಮೀನಾಮೇಷ
ಜಾಗತಿಕವಾಗಿ ಕೊರೊನಾ ವೈರಸ್ ಹರಡುವಿಕೆಯಿಂದ ಯುಎಸ್ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿ ದರಗಳನ್ನು ಶೂನ್ಯಕ್ಕೆ ಇಳಿಸಿತ್ತು. ಅದೇ ರೀತಿಯಲ್ಲಿ ಆರ್ಬಿಐ ಕೂಡ ಭರವಸೆಯನ್ನು ಹುಟ್ಟುಹಾಕಿತ್ತು. ಆದರೆ ಯಾವುದೇ ರೆಪೋ ದರಗಳು ಅಥವಾ ಬಡ್ಡಿ ದರವನ್ನು ಇಳಿಸದೇ ಜನಸಾಮಾನ್ಯರಲ್ಲಿ ನಿರಾಸೆ ಮೂಡಿಸಿದೆ.
10 ವರ್ಷಗಳ ಬಾಂಡ್ ಇಳುವರಿ 19 ಬೇಸಿಸ್ ಪಾಯಿಂಟ್ಗಳ ಕುಸಿತ ಕಂಡಿದೆ. ಇದು 9 ಅಕ್ಟೋಬರ್ 2019 ರಿಂದ ಗರಿಷ್ಠ ಕುಸಿತವಾಗಿದ್ದು, ಅದರ ಹಿಂದಿನ 6.32 ಪರ್ಸೆಂಟ್ರಿಂದ 6.12 ಪರ್ಸೆಂಟ್ಗೆ ಇಳಿದಿದೆ. ಬಾಂಡ್ ಇಳುವರಿ ಮತ್ತು ಬೆಲೆಗಳು ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತವೆ.
ಮುಂದಿನ ಆರ್ಬಿಐ ನೀತಿ ಫಲಿತಾಂಶ ಏಪ್ರಿಲ್ 3 ರಂದು ಪ್ರಕಟಗೊಳ್ಳಲಿದ್ದು ಆಗಲಾದರೂ ಕನಿಷ್ಟ 50 ಬೇಸಿಸ್ ಪಾಯಿಂಟ್ಗಳನ್ನು ಕಡಿತಗೊಳಿಸಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications