ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿದೆ. ಈ ಹಿಂದೆ ಆರ್ಬಿಐ ದಿಡೀರ್ ಆಗಿ ರೆಪೋ ದರ ಏರಿಕೆ ಮಾಡುವ ಮೂಲಕ ಜನರಿಗೆ ಶಾಕ್ ನೀಡಿತ್ತು.
ಮೇ 4ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಆರ್ಬಿಐ ರೆಪೋ ದರವನ್ನು ಶೇಕಡ 4.40ಕ್ಕೆ ಹೆಚ್ಚಿಸುವ ಬಗ್ಗೆ ಘೋಷಿಸಿದ್ದರು. ಈ ಹಿನ್ನೆಲೆಯಿಂದಾಗಿ ಜನರಿಗೆ ಸಾಲದ ಇಎಂಐ ಹೊರೆ ಅಧಿಕವಾಗಿತ್ತು. ಈಗ ಮತ್ತೆ ಆರ್ಬಿಐ ರೆಪೋ ದರ ಹೆಚ್ಚಿಸಿರುವ ಕಾರಣ ಇಎಂಐ ಹೊರೆ ಮತ್ತೆ ಅಧಿಕವಾಗಲಿದೆ.
Statement by Shri Shaktikanta Das, RBI Governor https://t.co/U3sHH9bKAw
— ReserveBankOfIndia (@RBI) June 8, 2022
ಏಪ್ರಿಲ್ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಆರ್ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.

ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೇರಿದಂತೆ ಎಲ್ಲಾ ಎಂಪಿಸಿಯ ಎಲ್ಲಾ ಆರು ಮಂದಿ ಸದಸ್ಯರ ಸರ್ವಾನುಮತದಲ್ಲಿ ರೆಪೋ ದರ ಏರಿಕೆ ಮಾಡಲಾಗಿದೆ. ಈ ನಡುವೆ ಈಗಾಗಲೇ ಷೇರು ಮಾರುಕಟ್ಟೆ ಕುಸಿತ ಕಂಡಿದೆ.
ಏಪ್ರಿಲ್ನಲ್ಲಿ ಹಣದುಬ್ಬರವು ಏರಿಕೆಯಾಗಿದೆ. ಶೇಕಡ 7.79ರಷ್ಟಿದೆ. ಈ ಹಣದುಬ್ಬರ ನಿಯಂತ್ರಣದ ಕ್ರಮವಾಗಿ ಆರ್ಬಿಐ ಈಗ ರೆಪೋ ದರವನ್ನು ಮತ್ತೆ ಹೆಚ್ಚಳ ಮಾಡಿದೆ. "ಈ ಹಣಕಾಸು ವರ್ಷದಲ್ಲಿ ಆರು ಶೇಕಡಕ್ಕಿಂತ ಅಧಿಕವಾಗಿ ಹಣದುಬ್ಬರ ದರ ಇರಲಿದೆ. ಹಣದುಬ್ಬರವನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ನಾವು ರೆಪೋ ದರವನ್ನು ಹೆಚ್ಚಳ ಮಾಡಿದ್ದೇವೆ," ಎಂದು ಆರ್ಬಿಐ ಗವರ್ನರ್ ತಿಳಿಸಿದ್ದಾರೆ.
ಎಂಎಸ್ಎಫ್ ದರ ಮತ್ತು ಬ್ಯಾಂಕ್ ದರವನ್ನು 4.65% ರಿಂದ 5.15% ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಕೂಡಾ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ರೆಪೋ ದರ ಎಂದರೇನು?
ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications