ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (ಆರ್ ಬಿಐ) ಎರಡು ಕೋ ಆಪರೇಟಿವ್ ಬ್ಯಾಂಕ್ ಗಳಿಗೆ 15 ಲಕ್ಷ ರುಪಾಯಿ ದಂಡ ವಿಧಿಸಿದೆ. ಕರ್ನಾಟಕದ ದಾವಣಗೆರೆಯಲ್ಲಿ ಇರುವ ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಹಾಗೂ ತಮಿಳುನಾಡಿನ ತೂತ್ತುಕುಡಿಯಲ್ಲಿ ಇರುವ ತಿರುವೈಕುಂಠಂ ಕೋ ಆಪರೇಟಿವ್ ಬ್ಯಾಂಕ್ ಗೆ ಬುಧವಾರ ದಂಡ ವಿಧಿಸಿದೆ.
ಈ ಸಂಬಂಧ ಹೇಳಿಕೆ ನೀಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಗಳಿಗೆ ಇರುವ ನಿಯಮಾವಳಿ ಅನುಸರಿಸದ ಕಾರಣಕ್ಕೆ ದಾವಣಗೆರೆಯ ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಗೆ ಹತ್ತು ಲಕ್ಷ ರುಪಾಯಿ ದಂಡ ಹಾಕಲಾಗಿದೆ ಎಂದು ತಿಳಿಸಿದೆ. ಇನ್ನು ಮತ್ತೊಂದು ಹೇಳಿಕೆ ಹೊರಡಿಸಿ, ಬ್ಯಾಂಕ್ ನಿರ್ದೇಶಕರಿಗೆ ಸಾಲ ಮತ್ತು ಮುಂಗಡ ನೀಡುವ ವಿಚಾರದಲ್ಲಿ ಆರ್ ಬಿಐ ನಿಯಮಾವಳಿ ಮೀರಿರುವುದಕ್ಕೆ ತಮಿಳುನಾಡಿನ ಕೋ ಆಪರೇಟಿವ್ ಬ್ಯಾಂಕ್ ಗೆ ಐದು ಲಕ್ಷ ದಂಡ ಹಾಕಿದೆ.

ಈ ದಂಡವನ್ನು ಹಾಕಿರುವುದು ನಿಯಮಾವಳಿಗೆ ಬದ್ಧವಿಲ್ಲದೆ ಮೀರಿರುವ ಕಾರಣಕ್ಕೆ ಹೊರತು ಬ್ಯಾಂಕ್ ಗ್ರಾಹಕರ ಜತೆಗಿನ ಯಾವುದೇ ವ್ಯವಹಾರ ಅಥವಾ ಒಪ್ಪಂದದಲ್ಲಿನ ಸಮಸ್ಯೆ ಕಾರಣಕ್ಕ್ ಅಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಎರಡೂ ಬ್ಯಾಂಕ್ ಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿಕ್ರಿಯೆ ಹಾಗೂ ವೈಯಕ್ತಿಕ ಹಾಜರಾಗುವ ವೇಳೆ ಮೌಖಿಕ ಸ್ಪಂದನೆಯನ್ನು ಪರಾಂಬರಿಸಲಾಗುವುದು. ಆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ ಬಿಐ ತಿಳಿಸಿದೆ.
More From GoodReturns

Hosur Airport: ಹೊಸೂರು ಏರ್ಪೋರ್ಟ್ಗೆ ಮತ್ತೊಂದು ಅಡೆತಡೆ...ಭೂಸ್ವಾಧೀನಕ್ಕೆ ಕೃಷ್ಣಗಿರಿ ರೈತರು ವಿರೋಧ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications