ಸಾಮಾನ್ಯವಾಗಿ ಬ್ಯಾಂಕ್ನಲ್ಲಿ ನಿರ್ದಿಷ್ಟವಾದ ವಿತ್ಡ್ರಾ ಮಿತಿಯು ಇರುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಮಹಾರಾಷ್ಟ್ರದ ಅಕ್ಲೊಜ್ನಲ್ಲಿನ ಶಂಕರ್ರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಮೇಲೆ ವಿತ್ಡ್ರಾ ಮಿತಿಯನ್ನು ಹೇರಿದೆ. ಹೌದು ಇನ್ನು ಮುಂದೆ ನೀವು ಈ ಬ್ಯಾಂಕ್ನಲ್ಲಿ ವಿತ್ಡ್ರಾ ಮಾಡಬೇಕಾದರೆ ಯೋಚನೆ ಮಾಡಬೇಕಾಗುತ್ತದೆ. ಯಾಕೆಂದರೆ ವಿತ್ಡ್ರಾ ಮಿತಿ ಬರೀ 5 ಸಾವಿರ ರೂಪಾಯಿ ಆಗಿದೆ.
ಇದು ಮಾತ್ರವಲ್ಲದೆ ಬ್ಯಾಂಕ್ ಮೇಲೆ ಹಲವಾರು ನಿರ್ಬಂಧಗಳನ್ನು ಕೂಡಾ ವಿಧಿಸಿದೆ. ಪ್ರಸ್ತುತ ಬ್ಯಾಂಕ್ನ ಆರ್ಥಿಕ ಸ್ಥಿತಿಯನ್ನು ನೋಡಿಕೊಂಡು ಆರ್ಬಿಐ ಈ ನಿರ್ಧಾರವನ್ನು ಮಾಡಿದೆ. ಈ ವಿತ್ಡ್ರಾ ಮಿತಿ ಮತ್ತು ನಿರ್ಬಂಧಗಳು ಮುಂದಿನ ಆರು ತಿಂಗಳುಗಳ ಕಾಲ ಚಾಲ್ತಿಯಲ್ಲಿರಲಿದೆ. ಫೆಬ್ರವರಿ 24, 2023ರಿಂದ ಆರಂಭವಾಗಿ 6 ತಿಂಗಳುಗಳ ಕಾಲ ಇರಲಿದೆ. ಹಾಗಾದರೆ ಯಾವೆಲ್ಲ ನಿರ್ಬಂಧಗಳಿದೆ, ಇತರೆ ಮಾಹಿತಿ ಇಲ್ಲಿದೆ ಮುಂದೆ ಓದಿ..

ಬೇರೆ ಯಾವೆಲ್ಲ ನಿರ್ಬಂಧಗಳಿದೆ ನೋಡಿ
ಶಂಕರ್ರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಇನ್ನು ಮುಂದೆ ಆರ್ಬಿಐನ ಅನುಮೋದನೆ ಇಲ್ಲದೆ ಯಾವುದೇ ಸಾಲವನ್ನು ನೀಡುವಂತಿಲ್ಲ. ಹಾಗೆಯೇ ಯಾವುದೇ ಹೂಡಿಕೆಯನ್ನು ಕೂಡಾ ಮಾಡಬೇಕಾದರೂ ಸರ್ಕಾರದ ಅನುಮತಿ ಮುಖ್ಯವಾಗಿದೆ. ಹಾಗೆಯೇ ತನ್ನ ಯಾವುದೇ ಸಂಪತ್ತನ್ನು ವರ್ಗಾಯಿಸಲು, ವಿಲೇವಾರಿ ಮಾಡಲು ಕೂಡಾ ಆರ್ಬಿಐನ ಅನುಮತಿ ಬೇಕಾಗುತ್ತದೆ. ಬ್ಯಾಂಕಿಂಗ್ ರೆಗ್ಯೂಲೇಷನ್ ಕಾಯ್ದೆ 1949 ಸೆಕ್ಷನ್ 35 A ಅಡಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ.
"ಎಲ್ಲ ಉಳಿತಾಯ ಬ್ಯಾಂಕ್ ಅಥವಾ ಕರೆಂಟ್ ಖಾತೆ ಅಥವಾ ಬೇರೆ ಯಾವುದೇ ಖಾತೆಯ ಹೂಡಿಕೆದಾರರು ತಮ್ಮ ಖಾತೆಯಿಂದ ಇನ್ನು ಮುಂದೆ ಮುಖ್ಯವಾಗಿ 5 ಸಾವಿರ ರೂಪಾಯಿಗಿಂತ ಅಧಿಕ ಮೊತ್ತವನ್ನು ವಿತ್ಡ್ರಾ ಮಾಡುವ ಅವಕಾಶವನ್ನು ನೀಡಲಾಗುವುದಿಲ್ಲ. ಅಂದರೆ ಯಾರು ಈ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿರುತ್ತಾರೋ ಅವರು, ಖಾತೆಯಿಂದ 5000 ರೂಪಾಯಿ ಮಾತ್ರ ವಿತ್ಡ್ರಾ ಮಾಡಲು ಸಾಧ್ಯವಾಗುತ್ತದೆ," ಎಂದು ಆರ್ಬಿಐ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ಈ ಆದೇಶದಲ್ಲಿ ಆರ್ಬಿಐ ಬ್ಯಾಂಕ್ನ ಲೈಸೆನ್ಸ್ ಅನ್ನು ರದ್ದು ಮಾಡುವ ಆದೇಶವನ್ನು ನೀಡಿಲ್ಲ ಎಂಬ ಸ್ಪಷ್ಟಣೆಯನ್ನು ಕೂಡಾ ನೀಡಿದೆ. "ಹಣಕಾಸು ಸ್ಥಿತಿಯು ಸರಿಯಾದ ದಾರಿಗೆ ಬರುವವರೆಗೂ ಬ್ಯಾಂಕ್ ಮೇಲೆ ಆರ್ಬಿಐ ಹೇರಿರುವ ನಿರ್ಬಂಧವನ್ನು ಮುಂದುವರಿಸಲಾಗುತ್ತದೆ," ಎಂದು ಆರ್ಬಿಐ ತಿಳಿಸಿದೆ. ಇನ್ನು ಅರ್ಹ ಹೂಡಿಕೆದಾರರು ಸುಮಾರು 5 ಲಕ್ಷ ರೂಪಾಯಿವರೆಗೆ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿಯನ್ನು ಹೊಂದಿರುತ್ತದೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications