ಕೊರೊನಾ ಬಿಕ್ಕಟ್ಟಿನ ಮಧ್ಯೆ ಸತತವಾಗಿ ರೆಪೋ ದರವನ್ನು ಇಳಿಸುತ್ತಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ (ಆಗಸ್ಟ್ 6, 2020) ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 4% ದರದಲ್ಲೇ ಮುಂದುವರಿಸಿದೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆರ್ ಬಿಐ ಅಧ್ಯಕ್ಷ ಶಕ್ತಿಕಾಂತ ದಾಸ್, ಕೇಂದ್ರಬ್ಯಾಂಕ್ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಘೋಷಣೆ ಮಾಡಿದರು.
ಆಗಸ್ಟ್ 4ರಿಂದ 6ರ ತನಕ ಸಭೆ ನಡೆದಿತ್ತು. ಈ ಸಮಿತಿಯ ಅಧಿಕಾರಾವಧಿ ನಾಲ್ಕು ವರ್ಷವಾಗಿದ್ದು, ಅದು ಪೂರ್ಣಗೊಳ್ಳುವ ಮುನ್ನ ಕೊನೆ ಬಾರಿಗೆ ನಡೆಯುತ್ತಿರುವ ಸಭೆ ಇದಾಗಿದೆ. ಹಣದುಬ್ಬರ ನಿಯಂತ್ರಣ ಹಾಗೂ ಬೆಳವಣಿಗೆ ಎರಡನ್ನೂ ಗಮನದಲ್ಲಿ ಇಟ್ಟುಕೊಂಡು, ಇಂದಿನ ತೀರ್ಮಾನ ಮಾಡಲಾಗಿದೆ.
ಕಳೆದ ಒಂದೂವರೆ ವರ್ಷದಲ್ಲಿ 250 ಬೇಸಿಸ್ ಪಾಯಿಂಟ್ ಕಡಿತ ಮಾಡಿದೆ ಆರ್ ಬಿಐ. ಅದರಲ್ಲೂ ಕೊರೊನಾ ಬಿಕ್ಕಟ್ಟು ಆರಂಭವಾದ ಮೇಲೆ 115 ಬೇಸಿಸ್ ಪಾಯಿಂಟ್ ಇಳಿಕೆ ಮಾಡಲಾಗಿದೆ. ರೆಪೋ ಹಾಗೂ ರಿವರ್ಸ್ ರೆಪೋ ಎಂಬ ಈ ಎರಡೂ ಪದಗಳನ್ನು ನೀವು ಆಗಾಗ ಕೇಳುತ್ತಲೇ ಇರುತ್ತೀರಿ. ಹಾಗಿದ್ದರೆ ಈ ರೆಪೋ- ರಿವರ್ಸ್ ರೆಪೋ ದರಕ್ಕೆ ಏನು ವ್ಯತ್ಯಾಸ ಅನ್ನೋದನ್ನು ತಿಳಿದುಕೊಂಡು ಬಿಡಿ.

ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ವಾಣಿಜ್ಯ ಬ್ಯಾಂಕ್ ಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರ. ವಾಣಿಜ್ಯ ಬ್ಯಾಂಕ್ ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ ಬಿಐನಿಂದ ಹಣ ಪಡೆಯುತ್ತವೆ. ಹಾಗೆ ಪಡೆದ ಹಣಕ್ಕೆ ಬಡ್ಡಿ ಪಾವತಿಸುತ್ತವೆ. ಆ ಬಡ್ಡಿ ದರವೇ ರೆಪೋ ದರ.
ಮಾರುಕಟ್ಟೆಯಲ್ಲಿ ಹಣದ ಕೊರತೆ ಎದುರಾದಾಗ ರಿಸರ್ವ್ ಬ್ಯಾಂಕ್ ನಿಂದ ರೆಪೋ ದರವನ್ನು ಇಳಿಸುವ ಕ್ರಮ ಕೈಗೊಳ್ಳುತ್ತದೆ. ಆರ್ ಬಿಐನಿಂದ ಕಡಿಮೆ ಬಡ್ಡಿಗೆ ಹಣ ಸಿಗುವುದರಿಂದ ಅದರ ಲಾಭವನ್ನು ಬ್ಯಾಂಕ್ ಗಳು ಗ್ರಾಹಕರಿಗೂ ವರ್ಗಾಯಿಸಬಹುದು. ಇದರಿಂದ ಬ್ಯಾಂಕ್ ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಗಳು ಲಭ್ಯವಾಗುತ್ತವೆ.
ಬ್ಯಾಂಕ್ ಗಳಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಹಣ ಸಾಲ ಪಡೆದರೆ, ಅದರ ಮೇಲೆ ವಿಧಿಸುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎನ್ನಲಾಗುತ್ತದೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಅತ್ಯಧಿಕ ಹಣವು ಚಲಾವಣೆಯಾಗುತ್ತಿದೆ ಎಂದು ಅನಿಸಿದರೆ ಆರ್ಬಿಐ ರಿವರ್ಸ್ ರೆಪೊ ಎಂಬ ಆಯುಧವನ್ನು ಬಳಸುತ್ತದೆ. ಎಲ್ಲಾದರೂ ರಿವರ್ಸ್ ರೆಪೊ ದರ ಹೆಚ್ಚಾಗಿದೆಯೆಂದರೆ ಆರ್ ಬಿಐ ಬ್ಯಾಂಕುಗಳಿಂದ ಆಕರ್ಷಕ ಬಡ್ಡಿದರಕ್ಕೆ ಹಣ ಸಾಲ ಪಡೆಯುತ್ತಿದೆ ಎಂದರ್ಥ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications