ಅಲ್ಪಾವಧಿ ಬೆಳೆ ಸಾಲದ ಮೇಲಿನ 'ಪ್ರಾಮಾಣಿಕ ಮರುಪಾವತಿ ಪ್ರೋತ್ಸಾಹಧನವನ್ನು' (PRI) 2018-19, 2019- 20ರ ಸಾಲಿಗೆ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಕೊರೊನಾ ಲಾಕ್ ಡೌನ್ ಇರುವ ಕಾರಣಕ್ಕೆ ಈ ಘೋಷಣೆ ಮಾಡಲಾಗಿದೆ.
ಕೊರೊನಾ ಹಬ್ಬದಂತೆ ತಡೆಯಬೇಕು ಎಂದು ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಇಂಥ ಸನ್ನಿವೇಶದಲ್ಲಿ ರೈತರಿಗೆ ಬ್ಯಾಂಕ್ ನ ಶಾಖೆಗೆ ತೆರಳಿ ಅಲ್ಪಾವಧಿ ಸಾಲದ ಬಾಕಿಯನ್ನು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರಿಸರ್ವ್ ಬ್ಯಾಂಕ್ ನ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೊರೊನಾ ಲಾಕ್ ಡೌನ್ ನಲ್ಲಿ ಘೋಷಿಸಲಾದ ಪ್ಯಾಕೇಜ್ ಪ್ರಕಾರ, ಮಾರ್ಚ್ 1, 2020 ಹಾಗೂ ಮೇ 31, 2020ರ ಮಧ್ಯೆ ಕಟ್ಟಬೇಕಾದ ಸಾಲದ ಕಂತುಗಳಿಗೆ ವಿನಾಯಿತಿ ನೀಡಲಾಗಿದೆ. ಆ ಸಾಲದ ಕಂತುಗಳಲ್ಲಿ ಅಲ್ಪಾವಧಿ ಬೆಳೆ ಸಾಲವೂ ಒಳಗೊಂಡಿದೆ. ಅದರ ಪ್ರಕಾರ, ರೈತರು ದಂಡವಾಗಿ ಬಡ್ಡಿ ಕಟ್ಟುವ ಅಗತ್ಯ ಇಲ್ಲ.

ಜತೆಗೆ ಬಡ್ಡಿ ರಿಯಾಯಿತಿ ಯೋಜನೆ ಕೂಡ ಸಿಗಲಿದೆ. ಈ ಅವಧಿಯಲ್ಲಿ ಬಡ್ಡಿ ರಿಯಾಯಿತಿ 2% ಹಾಗೂ ಪ್ರಾಮಾಣಿಕ ಮರುಪಾವತಿ ಪ್ರೋತ್ಸಾಹ ಧನ 3% ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. 3 ಲಕ್ಷ ರುಪಾಯಿಯೊಳಗೆ ಬೆಳೆ ಸಾಲ ಪಡೆದ ಕೃಷಿಕರಿಗೆ ಈ ಯೋಜನೆ ಅನ್ವಯ ಮಾಡುವಂತೆ ಸರ್ಕಾರ ಸೂಚಿಸಿದೆ. ಉಳಿದ ಯಾವ ಷರತ್ತು, ನಿಬಂಧನೆಗಳಲ್ಲೂ ಬದಲಾವಣೆ ಮಾಡಿಲ್ಲ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications