ಭಾರತದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಶುಕ್ರವಾರದಂದು 2023ರ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕದ (ಮೊದಲ ತ್ರೈಮಾಸಿಕ) ಹಣಕಾಸು ಫಲಿತಾಂಶವನ್ನು ಪ್ರಕಟಿಸಿದ್ದು, ಪ್ರತಿ ಹತ್ತು ರೂಪಾಯಿ ಮುಖಬೆಲೆಯ ಷೇರಿಗೆ 9 ರೂಪಾಯಿ ಲಾಭಾಂಶವನ್ನು (ಡಿವಿಡೆಂಡ್) ಘೋಷಣೆ ಮಾಡಲಾಗಿದೆ. ಕಂಪನಿಯ ನಿವ್ವಳ ಲಾಭವು ಕಳೆದ ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 17,955 ಕೋಟಿ ರೂಪಾಯಿಗೆ ಹೋಲಿಸಿದಲ್ಲಿ ಶೇಕಡ 10.8ರಷ್ಟು ಇಳಿಕೆ ಆಗಿದ್ದು, 16,011 ಕೋಟಿ ರೂಪಾಯಿಗೆ ಇಳಿದಿದೆ.
ಈ ಮೊದಲ ತ್ರೈಮಾಸಿಕದಲ್ಲಿ ರಿಲಯನ್ಸ್ನ ಏಕೀಕೃತ ಆದಾಯವು 2,31,132 ಕೋಟಿ ರೂಪಾಯಿ ದಾಖಲಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 2,42,529 ಕೋಟಿ ರೂಪಾಯಿಗೆ ಹೋಲಿಕೆ ಮಾಡಿದರೆ ಶೇಕಡಾ 4.6 ರಷ್ಟು ಇಳಿಕೆ ಆಗಿದೆ. ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 31 ರಷ್ಟು ಕುಸಿತ ಕಂಡಿದ್ದರಿಂದಾಗಿ ತೈಲದಿಂದ ರಾಸಾಯನಿಕ (O2C) ವ್ಯವಹಾರದಲ್ಲಿ ಆದಾಯ ತುಂಬ ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡಿದೆ.

ರಿಲಯನ್ಸ್ ಜಿಯೋ
ಪ್ರಸಕ್ತ ತ್ರೈ ಮಾಸಿಕದಲ್ಲಿ ರಿಲಯನ್ಸ್ ಜಿಯೋದ ಲಾಭವು ಶೇಕಡಾ 12ರಷ್ಟು ಹೆಚ್ಚಳವಾಗಿ, 4,863 ಕೋಟಿ ರೂಪಾಯಿಯನ್ನು ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಜಿಯೋ 4,335 ಕೋಟಿ ರೂಪಾಯಿ ಲಾಭ ದಾಖಲಿಸಿತ್ತು. ಇನ್ನು ಆದಾಯದಲ್ಲೂ ಏರಿಕೆಯನ್ನು ಕಂಡಿದೆ. ಕಳೆದ ಬಾರಿ ಇದೇ ಅವಧಿಗೆ 21,873 ಕೋಟಿ ರೂಪಾಯಿ ದಾಖಲು ಮಾಡಿತ್ತು. ಈ ಬಾರಿ 10 ರಷ್ಟು ಹೆಚ್ಚಳವಾಗಿ, 24,042 ಕೋಟಿ ರೂಪಾಯಿ ಮುಟ್ಟಿದೆ.
ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ತನ್ನ ಪಾರಮ್ಯವನ್ನು ಮುಂದುವರಿಸಿದೆ. 2023 ರ ಏಪ್ರಿಲ್ ತಿಂಗಳ ಡೇಟಾದ ಪ್ರಕಾರ, ರಿಲಯನ್ಸ್ ಜಿಯೋ ಒಟ್ಟಾರೆ ಮಾರುಕಟ್ಟೆಯ ಶೇಕಡಾ 37.9ರ ಪಾಲನ್ನು ಹೊಂದಿದ್ದು, ಅಗ್ರ ಸ್ಥಾನದಲ್ಲಿದೆ. ಈ ತ್ರೈಮಾಸಿಕದಲ್ಲಿ 92 ಲಕ್ಷ ನಿವ್ವಳ ಗ್ರಾಹಕರನ್ನು ಸೇರ್ಪಡೆ ಮಾಡಿಕೊಂಡಿದೆ. 2023ರ ಜೂನ್ 30ಕ್ಕೆ ಕೊನೆಗೊಂಡ ಅವಧಿಗೆ ಜಿಯೋದ ಗ್ರಾಹಕರ ಸಂಖ್ಯೆಯು 44.85 ಕೋಟಿ ಆಗಿದೆ. ಇದೇ ವೇಳೆ ಜಿಯೋಗೆ ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯವು ರೂ. 180.5 ಆಗಿದ್ದು, ಕಳೆದ ವರ್ಷಕ್ಕಿಂತ ಈ ಸಲ ಶೇ 2.8ರಷ್ಟು ಹೆಚ್ಚಾಗಿದೆ.
ರಿಲಯನ್ಸ್ ರೀಟೇಲ್ ನಿವ್ವಳ ಲಾಭ ಎಷ್ಟಿದೆ?
ಭಾರತದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಶುಕ್ರವಾರ 2023ರ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕದ ಹಣಕಾಸು ಫಲಿತಾಂಶವನ್ನು ಪ್ರಕಟಿಸಲಾಗಿದೆ. ರಿಲಯನ್ಸ್ ರೀಟೇಲ್ ನಿವ್ವಳ ಲಾಭವು ಶೇ 18.8 ರಷ್ಟು ಏರಿಕೆ ಕಂಡು, 2,448 ಕೋಟಿ ರೂಪಾಯಿ ತಲುಪಿದೆ. ಒಟ್ಟಾರೆ ಆದಾಯ ಕಳೆದ ವರ್ಷಕ್ಕಿಂತ ಈ ವರ್ಷ ಶೇ 19 ರಷ್ಟು ಹೆಚ್ಚಳವಾಗಿ, 69,948 ಕೋಟಿ ರೂಪಾಯಿ ಬಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications