ಹಣದುಬ್ಬರವನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಏರಿಕೆ ಮಾಡಿದೆ. ಇದರಿಂದಾಗಿ ದೇಶದ ಬೆಳವಣಿಗೆ ದರವು ಕೊಂಚ ಕುಗ್ಗಬಹುದು. ಕೇಂದ್ರ ಬ್ಯಾಂಕ್ನ ಕ್ರಮದಿಂದಾಗಿ ಬೇಡಿಕೆಯು ಮಧ್ಯಮವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಹೇಳಿದ್ದಾರೆ.
"ಬಡ್ಡಿ ದರಗಳು ಹೆಚ್ಚಾದಾಗ, ಬೇಡಿಕೆಯು ಮಧ್ಯಮವಾಗುವ ನಿರೀಕ್ಷೆಯಿದೆ ಮತ್ತು ಇದು ಬಡ್ಡಿದರಗಳನ್ನು ಹೆಚ್ಚಿಸುವ ಒಂದು ಭಾಗವಾಗಿದೆ," ಎಂದು ತಿಳಿಸಿದ್ದಾರೆ. ಹಾಗೆಯೇ ಇದೇ ಸಂದರ್ಭದಲ್ಲಿ ಇದರ ಹೊರತಾಗಿಯೂ ಭಾರತವು ಇನ್ನೂ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ," ಎಂದು ಮಾಹಿತಿ ನೀಡಿದರು.
"ಹಣದುಬ್ಬರವನ್ನು ನಾವು ಸರಿದೂಗಿಸಲು ಬಡ್ಡಿ ದರವು ಒಂದು ವಿತ್ತೀಯ ನೀತಿ ಸಾಧನವಾಗಿದೆ," ಎಂದು ಹೇಳಿರುವ ಅಧಿಕಾರಿ, ದೇಶದ ಬೆಳವಣಿಗೆ ದರವು ಕೊಂಚ ನಿಧಾನವಾಗಬಹುದು ಎಂದಿದ್ದಾರೆ. ಮೇ 4ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಳ ಮಾಡಿದೆ.

"ಸರ್ಕಾರವು ಎಲ್ಲಾ ಸಮಯದಲ್ಲೂ ಆರ್ಬಿಐನೊಂದಿಗೆ ನಿರಂತರ ಚರ್ಚೆ ನಡೆಸುತ್ತಿದೆ. ಒಳ್ಳೆಯ ಸಮಯಗಳು, ಕೆಟ್ಟ ಸಮಯಗಳು, ಸಾಮಾನ್ಯ ಸಮಯಗಳು ಮತ್ತು ಅಸಹಜ ಸಮಯಗಳು ಸರ್ಕಾರವು ಆರ್ಬಿಐ ಜೊತೆ ಚರ್ಚೆ ನಡೆಸಲಿದೆ. ಆಗುಹೋಗುಗಳ ಬಗ್ಗೆ ತಿಳಿದಿರುತ್ತದೆ," ಎಂದು ಹೇಳಿದರು.
ರಸಗೊಬ್ಬರ (ಸುಮಾರು ರೂಪಾಯಿ 1 ಟ್ರಿಲಿಯನ್) ಮತ್ತು ಆಹಾರ (H1 ನಲ್ಲಿ ಉಚಿತ ಧಾನ್ಯಗಳ ಯೋಜನೆಯಲ್ಲಿ ರೂಪಾಯಿ 0.8 ಟ್ರಿಲಿಯನ್) ಮೇಲಿನ ಸಬ್ಸಿಡಿಗಳ ಮೇಲೆ ಸುಮಾರು 1.8 ಟ್ರಿಲಿಯನ್ ಹೆಚ್ಚುವರಿ ವೆಚ್ಚದ ಸಾಧ್ಯತೆಯ ಹೊರತಾಗಿಯೂ ಈ ಹಂತದಲ್ಲಿ ಹಣಕಾಸಿನ ನೀತಿಯಲ್ಲಿ ಮೂಲಭೂತ ಬದಲಾವಣೆಗೆ ಯಾವುದೇ ಕಾರಣ ಕಂಡುಬಂದಿಲ್ಲ ಎಂದು ಸೋಮನಾಥನ್ ಹೇಳಿದರು. "ಕೆಲವು ಬದಲಾವಣೆಗಳು ಸಂಭವಿಸಿದೆ. ಆದರೆ ಬದಲಾವಣೆಗಳು ಖರ್ಚು ಮತ್ತು ಆದಾಯದ ಎರಡೂ ಒಂದೇ ತರನಾಗಿದೆ," ಎಂದು ಕೂಡಾ ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ದಿಡೀರ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಆರ್ಬಿಐ ರೆಪೋ ದರವನ್ನು ಶೇಕಡ 4.40ಕ್ಕೆ ಹೆಚ್ಚಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಈ ಹಿಂದೆ ರೆಪೋ ದರವು ಶೇಕಡ 4ರಲ್ಲೇ ಉಳಿಸಿಕೊಳ್ಳಲಾಗಿತ್ತು. ಆದರೆ ಈಗ ರೆಪೋ ದರವನ್ನು ಏರಿಕೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಸಿ ರೆಪೊ ದರಗಳನ್ನು 40 ಬಿಪಿಎಸ್ಗಳಷ್ಟು ಹೆಚ್ಚಿಸಲು ಎಂಪಿಸಿ ಸರ್ವಾನುಮತದಿಂದ ಮತ ಹಾಕಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications