ಬೈಜೂಸ್ ಆಪ್ನಲ್ಲಿ ಪೋಷಕರಿಗೆ ಆಮಿಷ ಒಡ್ಡಲಾಗಿದೆ ಹಾಗೂ ಸಾಲ ಒಪ್ಪಂದಗಳನ್ನು ಕೂಡಾ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ಭಾರತದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೈಜೂಸ್ನ ಸಿಇಒ ರವೀಂದ್ರನ್ಗೆ ಸಮನ್ಸ್ ನೀಡಿದೆ.
ಬೈಜೂಸ್ ಆರ್ಥಿಕ ನಷ್ಟ ಕಾಣುತ್ತಿರುವ ನಡುವೆಯೇ ಸಂಸ್ಥೆಯ ವಿರುದ್ಧ ಹಲವಾರು ಆರೋಪಗಳು ಕೇಳಿಬಂದಿದೆ. ಬೈಜೂಸ್ನಲ್ಲಿ ಸಾಲ ನೀಡುವ ಒಪ್ಪಂದಗಳನ್ನು ಮಾಡಲಾಗುತ್ತಿದೆ. ಪೋಷಕರಿಗೆ ಆಮಿಷ ಒಡ್ಡಲಾಗುತ್ತಿದೆ. ಹಾಗೆಯೇ ಉದ್ಯೋಗಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.
ಈ ನಡುವೆ ಭಾರತದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೈಜೂಸ್ನ ಸಿಇಒ ರವೀಂದ್ರನ್ಗೆ ನೋಟಿಸ್ ನೀಡಿದೆ. ಎನ್ಸಿಪಿಸಿಆರ್ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ 2005ರ ಅಡಿಯಲ್ಲಿ ರಚಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಇದರ ನಿರ್ವಹಣೆ ಮಾಡುತ್ತದೆ. ಈ ಆಯೋಗ ನೋಟಿಸ್ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಆರೋಪವೇನು, ಆಯೋಗ ಹೇಳುವುದೇನು?
ಬೈಜೂಸ್ನಲ್ಲಿ ಕೋರ್ಸ್ಗಳನ್ನು ಖರೀದಿ ಮಾಡುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆಮಿಷ ಒಡ್ಡಿದ್ದಾರೆ. ಸಾಲ ಒಪ್ಪಂದಗಳನ್ನು ಮಾಡಿದ್ದಾರೆ. ದಬ್ಬಾಳಿಕೆ ಮಾಡಿ ಹಣ ಪಾವತಿಸುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕಾಗಿ ಬೈಜೂಸ್ನ ಸಿಇಒ ರವೀಂದ್ರನ್ಗೆ ಸಮನ್ಸ್ ನೀಡಿರುವ ಆಯೋಗವು ವಿಚಾರಣೆಗೆ ಖುದ್ಧಾಗಿ ಹಾಜರಾಗುವಂತೆ ತಿಳಿಸಿದೆ.
ಹಾಗೆಯೇ ಕೋರ್ಸ್ ಬಗ್ಗೆ ಮಾಹಿತಿ, ಶುಲ್ಕ ಎಷ್ಟಿದೆ, ನೋಂದಣಿ ಹೇಗೆ, ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ, ಕಂಪನಿಯ ಹಣ ಮರುಪಾವತಿ ನೀತಿ ಮೊದಲಾದವುಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಬೇಕು ಎಂದು ಕೂಡಾ ಆಯೋಗವು ಸೂಚಿಸಿದೆ.
ಗುಲಾಮರಂತೆ ಉದ್ಯೋಗಿಗಳು!
ಇನ್ನು ಈ ಹಿಂದೆ ಬೈಜೂಸ್ನಲ್ಲಿ ಉದ್ಯೋಗಿಗಳನ್ನು ಗುಲಾಮರಂತೆ ನೋಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಸ್ತುತ ಬೈಜೂಸ್ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ 18 ಉದ್ಯೋಗಿಗಳು ಈ ಹಿಂದೆ ಕಾರ್ಯನಿರ್ವಹಣೆ ಮಾಡಿದ್ದ 8 ಮಂದಿ ಸೇರಿ ಒಟ್ಟು ಸುಮಾರು 21 ಬೈಜೂಸ್ ವಿರುದ್ಧ ಕಿಡಿಕಾರಿದ್ದಾರೆ. ಸಂಸ್ಥೆಯಲ್ಲಿ ಉದ್ಯೋಗಿಗಳನ್ನು ಅಧಿಕ ಅವಧಿ ಕೆಲಸ ಮಾಡಿಸಲಾಗುತ್ತಿದೆ.
ದೈಹಿಕ ಹಾಗೂ ಮಾತಿನ ಮೂಲಕ ದೌರ್ಜನ್ಯ ಮಾಡಲಾಗುತ್ತಿದೆ. ಸಂಸ್ಥೆಯ ಆಪ್ನಲ್ಲಿ ಜನರು ಕೋರ್ಸ್ ಖರೀದಿ ಮಾಡದಿದ್ದರೆ ನಮ್ಮ ಮೇಲೆ ಒತ್ತಡ ಹೇರಲಾಗುತ್ತದೆ. ವಾರಕ್ಕೆ 72 ಗಂಟೆಗೂ ಅಧಿಕ ಕಾಲ ಕೆಲಸ ಮಾಡಲು ಒತ್ತಡ ಹೇರಲಾಗುತ್ತದೆ ಎಂಬ ಆರೋಪಗಳು ಕೇಳಿಬಂದಿದೆ. 72 ಗಂಟೆಗೂ ಅಧಿಕ ಕಾಲ ಕೆಲಸ ಮಾಡದಿದ್ದರೆ ಕೆಲಸ ತೊರೆದು ಹೋಗಿ ಎಂದು ಕೂಡಾ ಹೇಳಲಾಗುತ್ತಿದೆ.
ಬೈಜೂಸ್ ಉದ್ಯೋಗಿಗಳು ಹೆಚ್ಚಾಗಿ ಕಾಲೇಜು ಪದವಿದರರಾಗಿದ್ದಾರೆ ಹಾಗೂ ಕಡಿಮೆ ಆದಾಯವನ್ನು ಹೊಂದಿರುವ ಕುಟುಂಬಕ್ಕೆ ಸೇರಿದವರು ಆಗಿದ್ದಾರೆ. ಆದ್ದರಿಂದಾಗಿ ಕೆಲಸವನ್ನು ಕಳೆದುಕೊಳ್ಳುವ ಆತಂಕದಲ್ಲಿ ಈ ಉದ್ಯೋಗಿಗಳು ಅವಧಿಗೂ ಅಧಿಕ ದುಡಿಯುತ್ತಿದ್ದಾರೆ ಎಂಬ ಮಾಹಿತಿಯೂ ಕೂಡಾ ಲಭ್ಯವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications