ಕೊರೊನಾವೈರಸ್ ಸೋಂಕು ತಡೆಗಟ್ಟಲು ಮಾರ್ಚ್ 25ರಿಂದ ಹೇರಿದ್ದ ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದಾಗಿ ದೇಶದ ಚಿಲ್ಲರೆ ವಲಯವು ಭಾರೀ ಪ್ರಮಾಣದಲ್ಲಿ ಆಘಾತ ಅನುಭವಿಸಿದೆ. ಸುಮಾರು 5.5 ಲಕ್ಷ ಕೋಟಿಯಷ್ಟು ನಷ್ಟವಾಗಿದೆ ಎಂದು ಅಖಿಲ ಭಾರತ ಚಿಲ್ಲರೆ ವ್ಯಾಪಾರಿಗಳ ಒಕ್ಕೂಟ ಮಂಗಳವಾರ ಹೇಳಿದೆ.
ದೇಶದ 20 ಪರ್ಸೆಂಟ್ರಷ್ಟು ಚಿಲ್ಲರೆ ಕ್ಷೇತ್ರದ ವ್ಯಾಪಾರಿಗಳು ಈ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರು ಎಂದಿನಂತೆ ವ್ಯಾಪಾರದಲ್ಲಿ ತೊಡಗಲು ಇನ್ನೂ ಕೆಲವು ತಿಂಗಳುಗಳೇ ಬೇಕಾಗಲಿವೆ ಎಂದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಕ್ತ ಆರ್ಥಿಕ ನೆರವನ್ನು ಒದಗಿಸುವ ಮೂಲಕ ಈ ಕ್ಷೇತ್ರದ ವ್ಯಾಪಾರಿಗಳನ್ನು ಬೆಂಬಲಿಸಬೇಕಾಗಿದೆ ಎಂದು ಒಕ್ಕೂಟ ಕೇಳಿಕೊಂಡಿದೆ.

ಚಿಲ್ಲರೆ ವ್ಯಾಪಾರಿಗಳು ಪ್ರತಿದಿನ 15 ಸಾವಿರ ಕೋಟಿ ವ್ಯಾಪಾರ ಮಾಡುತ್ತಿದ್ದರು. 40 ದಿನಗಳಿಂದ ಲಾಕ್ ಡೌನ್ ಜಾರಿಯಾಗಿರುವುದರಿಂದ ಏಳು ಕೋಟಿ ವ್ಯಾಪಾರಿಗಳ ಪೈಕಿ 1.5 ಕೋಟಿ ವ್ಯಾಪಾರಿಗಳು ಶಾಶ್ವತವಾಗಿ ಇನ್ನೂ ಕೆಲವು ತಿಂಗಳುಗಳ ಕಾಲ ವ್ಯಾಪಾರ ಬಂದ್ ಮಾಡುವಂತಾಗಿದೆ. 75 ಲಕ್ಷಕ್ಕೂ ಹೆಚ್ಚಿನ ವ್ಯಾಪಾರಿಗಳು ಮಧ್ಯಮ ಹಂತದಲ್ಲಿದ್ದಾರೆ ಎಂದು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿಸಿ ಭಾರ್ತಿಯಾ ಮತ್ತು ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೆಲ್ ವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದು ಕಡೆ ಚಿಲ್ಲರೆ ವ್ಯಾಪಾರಿಗಳಿಗೆ ತಿಂಗಳ ಸಂಬಳ, ಬಾಡಿಗೆ ಮತ್ತಿತರ ತಿಂಗಳ ವೆಚ್ಚ ತಗುಲಲಿದೆ. ಮತ್ತೊಂದೆಡೆ ಕಠಿಣ ಸಾಮಾಜಿಕ ಅಂತರ ನಿಯಮದಿಂದಾಗಿ ಗ್ರಾಹಕರಿಲ್ಲದೆ ಆದಾಯ ಕಡಿಮೆಯಾಗಿದೆ. ಎಂದಿನಂತೆ ವ್ಯಾಪಾರ ಮಾಡಲು ಪರಿಸ್ಥಿತಿ ಬರಲು ಕನಿಷ್ಠ 6 ರಿಂದ 9 ತಿಂಗಳುಗಳು ಬೇಕಾಗಲಿವೆ. ಕೊರೊನಾ ಚೇತರಿಕೆಯ ಭರವಸೆಗಳು ಬತ್ತಿ ಹೋಗಿವೆ. ಆರ್ಥಿಕ ಹೊಡೆತ ಸಾಂಕ್ರಾಮಿಕ ರೋಗಕ್ಕಿಂತಲೂ ಹೆಚ್ಚಾಗಿದೆ ಎಂದು ಭಾರ್ತಿಯಾ ಮತ್ತು ಖಂಡೆಲ್ ವಾಲ್ ಹೇಳಿಕೊಂಡಿದ್ದಾರೆ.
ಸದ್ಯದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಂದು ಸುತ್ತಿನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚಿಲ್ಲರೆ ಕ್ಷೇತ್ರದ ಉತ್ತಮ ಆರ್ಥಿಕ ಪರಿಹಾರ ಪ್ಯಾಕೇಜ್ ನೀಡುವಂತೆ CAIT ಮನವಿ ಮಾಡಿಕೊಂಡಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications