ಭಾರತವು ಹಿಂದೆಂದೂ ಕಾಣದ ರೀತಿಯಲ್ಲಿ ಕೋವಿಡ್-19 ಸಂಕಷ್ಟವನ್ನು ಅನುಭವಿಸುತ್ತಿದೆ. ಆಕ್ಸಿಜನ್ ಕೊರತೆ ಕೂಡ ದೇಶದಲ್ಲಿ ಹೆಚ್ಚಾಗಿದ್ದು, ಕೋವಿಡ್ ಎರಡನೆಯ ಅಲೆಯಲ್ಲಿ ಅಮೂಲ್ಯ ಜೀವಗಳನ್ನು ಉಳಿಸಲು ರಿಲಯನ್ಸ್ ಇಂಡಸ್ಟ್ರೀಸ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.
ದೇಶದೆಲ್ಲೆಡೆ ತೀವ್ರ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಚಿಕಿತ್ಸೆಗೆ ವೈದ್ಯಕೀಯ ಶ್ರೇಣಿಯ ಲಿಕ್ವಿಡ್ ಆಕ್ಸಿಜನ್ ಲಭ್ಯತೆಯ ಖಾತರಿಯು ಈ ಸಂಕಷ್ಟದ ಸಮಯದ ತುರ್ತು ಅಗತ್ಯವಾಗಿದೆ. ರಿಲಯನ್ಸ್ ವೈದ್ಯಕೀಯ ಶ್ರೇಣಿಯ ಲಿಕ್ವಿಡ್ ಆಕ್ಸಿಜನ್ಗಳ ಸಾಂಪ್ರದಾಯಿಕ ಉತ್ಪಾದಕ ಕಂಪೆನಿಯಲ್ಲ. ಆದರೂ ಸಾಂಕ್ರಾಮಿಕದ ಕಾರಣದಿಂದಾಗಿ ವೈದ್ಯಕೀಯ ಆಕ್ಸಿಜನ್ ಉತ್ಪಾದನೆಗೆ ಮುಂದಾಗಿದ್ದು, ಪ್ರಸ್ತುತ ಭಾರತದ ಅತಿ ದೊಡ್ಡ ಉತ್ಪಾದಕನಾಗಿ ರಿಲಯನ್ಸ್ ಇಂಡಸ್ಟ್ರೀಸ್ ಬೆಳೆದಿದೆ.

ಜಾಮ್ನಗರ ಮತ್ತು ಇತರೆ ಸ್ಥಳಗಳಲ್ಲಿನ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್ಗಳಲ್ಲಿ ರಿಲಯನ್ಸ್ ಪ್ರಸ್ತುತ 1000 ಮೆಟ್ರಿಕ್ ಟನ್ನಷ್ಟು ವೈದ್ಯಕೀಯ ಶ್ರೇಣಿಯ ಲಿಕ್ವಿಡ್ ಆಕ್ಸಿಜನ್ಗಳನ್ನು ಪ್ರತಿದಿನ ಉತ್ಪಾದಿಸುತ್ತಿದೆ. ಇದು ಭಾರತದ ಒಟ್ಟಾರೆ ಉತ್ಪಾದನೆಯ ಶೇ 11ರಷ್ಟು ಪಾಲು ಹೊಂದಿದೆ. ಈ ಮೂಲಕ ದೇಶದ ಪ್ರತಿ ಹತ್ತು ರೋಗಿಗಳಲ್ಲಿ ಒಬ್ಬರ ಆಕ್ಸಿಜನ್ ಅಗತ್ಯವನ್ನು ರಿಲಯನ್ಸ್ ಪೂರೈಸುತ್ತಿದೆ.
'ಭಾರತವು ಕೋವಿಡ್-19 ಸಾಂಕ್ರಾಮಿಕದ ಹೊಸ ಅಲೆಯ ವಿರುದ್ಧ ಹೋರಾಡುತ್ತಿರುವಾಗ ನನಗೆ ಹಾಗೂ ರಿಲಯನ್ಸ್ನ ಸಮಸ್ತರಿಗೂ, ಪ್ರತಿ ಜೀವವನ್ನು ಉಳಿಸುವುದಕ್ಕಿಂತ ಮುಖ್ಯವಾಗಿರುವುದು ಬೇರೇನೂ ಇಲ್ಲ. ಭಾರತದ ವೈದ್ಯಕೀಯ ಶ್ರೇಣಿಯ ಆಕ್ಸಿಜನ್ಗಳ ಉತ್ಪಾದನೆ ಮತ್ತು ಸಾಗಾಣಿಕೆ ಸಾಮರ್ಥ್ಯವನ್ನು ಹೆಚ್ಚಿಸುವುದು ತಕ್ಷಣದ ಅಗತ್ಯವಾಗಿದೆ. ಜಾಮ್ನಗರದಲ್ಲಿರುವ ನಮ್ಮ ಎಂಜಿನಿಯರ್ಗಳು ಈ ಹೊಸ ಸವಾಲನ್ನು ಎದುರಿಸುವ ಸಲುವಾಗಿ, ದೇಶಾಭಿಮಾನದ ಪ್ರಜ್ಞೆಯೊಂದಿಗೆ ದಣಿವಿಲ್ಲದೆ ಕೆಲಸ ಮಾಡುತ್ತಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಭಾರತಕ್ಕೆ ಹೆಚ್ಚಿನ ಅಗತ್ಯಬಿದ್ದ ಸಂದರ್ಭದಲ್ಲಿ ರಿಲಯನ್ಸ್ ಕುಟುಂಬದ ಯುವ ಸದಸ್ಯರು ಮತ್ತೆ ಸಕ್ರಿಯವಾಗಿ ಅದನ್ನು ಪೂರೈಸುವ ಬದ್ಧತೆ ಮತ್ತು ಸಂಕಲ್ಪದ ಪ್ರಜ್ಞೆ ಪ್ರದರ್ಶಿಸುವುದನ್ನು ಕಂಡು ನಾನು ನಿಜಕ್ಕೂ ವಿನೀತನಾಗಿದ್ದೇನೆ' ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ.
ರಿಲಯನ್ಸ್ ಸಂಸ್ಥೆಯು ದೇಶದ ವಿವಿಧ ರಾಜ್ಯ ಸರ್ಕಾರಗಳಿಗೆ ಉಚಿತವಾಗಿ ಆಕ್ಸಿಜನ್ ಒದಗಿಸುತ್ತಿದ್ದು, ಇದು ಪ್ರತಿ ದಿನವೂ 1 ಲಕ್ಷಕ್ಕೂ ಅಧಿಕ ರೋಗಿಗಳಿಗೆ ನೆರವಾಗುತ್ತಿದೆ. 2020ರ ಮಾರ್ಚ್ನಲ್ಲಿ ಕೊರೊನಾ ಆರಂಭವಾದಾಗಿನಿಂದ ದೇಶದಾದ್ಯಂತ 55,000 ಎಂಟಿಗಿಂತಲೂ ಅಧಿಕ ವೈದ್ಯಕೀಯ ಶ್ರೇಣಿಯ ಲಿಕ್ವಿಡ್ ಆಕ್ಸಿಜನ್ ಅನ್ನು ರಿಲಯನ್ಸ್ ಪೂರೈಕೆ ಮಾಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications