ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಹಣಕಾಸು ವರದಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಪ್ರಕಟಿಸಿದೆ. ರಿಲಯನ್ಸ್ ಕಂಪನಿಯು ತ್ರೈಮಾಸಿಕದಲ್ಲಿ 15,479 ಕೋಟಿ ರೂಪಾಯಿ ತೆರಿಗೆಯ ನಂತರದ ನಿವ್ವಳ ಲಾಭವನ್ನು ವರದಿ ಮಾಡಿದೆ.
ಕಳೆದ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಸುಮಾರು ಶೇಕಡಾ 46.0ರಷ್ಟು ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಿಲಯನ್ಸ್ನ ಕ್ರೂಡೀಕೃತ ಆದಾಯವು 30 ಸೆಪ್ಟೆಂಬರ್ 2021 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 1.67 ಲಕ್ಷ ಕೋಟಿ ರೂ. ನಷ್ಟಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಈ ಆದಾಯ 1.40 ಲಕ್ಷ ಕೋಟಿ ರೂ. ನಷ್ಟಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಎರಡನೇ ತ್ರೈಮಾಸಿಕದ ಪ್ರಮುಖ ಅಂಶಗಳು :
*ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಕ್ರೋಢೀಕೃತ ನಿವ್ವಳ ಲಾಭವು ವರ್ಷದಿಂದ ವರ್ಷಕ್ಕೆ ಶೇಕಡಾ 46.0 ರಷ್ಟು ಏರಿಕೆಯಾಗಿ ರೂ. 15,479 ಕೋಟಿಗೆ ತಲುಪಿದೆ. ಎರಡನೇ ತ್ರೈಮಾಸಿಕದಲ್ಲಿ ಕನ್ಸಾಲಿಡೇಟೆಡ್ ಇಪಿಎಸ್ ಪ್ರತಿ ವರ್ಷಕ್ಕೆ ಶೇ. 40.7 ರಷ್ಟು ಏರಿಕೆಯಾಗಿ ಪ್ರತಿ ಷೇರಿಗೆ ರೂ. 20.9 ಕ್ಕೆ ತಲುಪಿದೆ.
*ರಿಲಯನ್ಸ್ನ ಡಿಜಿಟಲ್ ಸೇವೆಗಳು ಇಬಿಐಟಿಡಿಎಯನ್ನು 9,561 ಕೋಟಿ ರೂ. ಸಿಕ್ಕಿದೆ. ರಿಲಯನ್ಸ್ ಜಿಯೋ ಪ್ಲಾಟ್ಫಾರ್ಮ್ಗಳ ತ್ರೈಮಾಸಿಕ ಏಕೀಕೃತ ನಿವ್ವಳ ಲಾಭವು ವರ್ಷದಿಂದ ವರ್ಷಕ್ಕೆ ಶೇಕಡಾ 23.5 ರಷ್ಟು ಏರಿಕೆಯಾಗಿ 3,728 ಕೋಟಿ ರೂ. ಮುಟ್ಟಿದೆ. ರಿಲಯನ್ಸ್ ಜಿಯೋದ ಎಎಪಿಯು ಎರಡನೇ ತ್ರೈಮಾಸಿಕದಲ್ಲಿ ಪ್ರತಿ ಚಂದಾದಾರರಿಗೆ ತಿಂಗಳಿಗೆ ರೂ 143.6 ರಂತೆ ದಾಖಲಾಗಿದ್ದು, ಹಿಂದಿನ ತ್ರೈಮಾಸಿಕದಲ್ಲಿ ರೂ 138.4 ರಷ್ಟಿತ್ತು.
* ರಿಲಯನ್ಸ್ ರಿಟೇಲ್ ನ ಇಬಿಐಟಿಡಿಎ ಮಾರ್ಜಿನ್ ವರ್ಷದಿಂದ ವರ್ಷಕ್ಕೆ ಶೇ .45.2 ರಷ್ಟು ಏರಿಕೆಯಾಗಿ 2,913 ಕೋಟಿ ರೂ. ತಲುಪಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ರಿಲಯನ್ಸ್ ರಿಟೇಲ್ 813 ಹೊಸ ಮಳಿಗೆಗಳನ್ನು ತೆರೆದಿದೆ. ಇವುಗಳನ್ನು ಒಳಗೊಂಡಂತೆ, ಒಟ್ಟು ಮಳಿಗೆಗಳ ಸಂಖ್ಯೆ ಈಗ 13,635 ಕ್ಕೆ ಏರಿದೆ.
ಇನ್ನು ಇಂದು ರಿಲಯನ್ಸ್ ಷೇರುಗಳು ಫಲಿತಾಂಶ ಬಿಡುಗಡೆಗೂ ಮುನ್ನವೇ ಏರಿಕೆ ಕಂಡುಬಂದಿದೆ. ಇಂದು ರಿಲಯನ್ಸ್ ಷೇರು ಎನ್ಎಸ್ಇಯಲ್ಲಿ 5 ರೂಪಾಯಿಗಳ ಲಾಭದೊಂದಿಗೆ 2,627.40 ರೂಗಳಲ್ಲಿ ಕೊನೆಗೊಂಡಿತು. ಅದೇ ಸಮಯದಲ್ಲಿ, ಬಿಎಸ್ಇನಲ್ಲಿ ರಿಲಯನ್ಸ್ ನ ಷೇರು ರೂ. 2,627.05 ಕ್ಕೆ ಮುಕ್ತಾಯವಾಯಿತು.
More From GoodReturns

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications