ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ (Fugitive Economic Offenders Act) ಆರೋಪಿಗಳಿಂದ 15,113 ಕೋಟಿ ರೂಪಾಯಿಗಳನ್ನು ಸರ್ಕಾರ ವಸೂಲಿ ಮಾಡಿದೆ. ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ನೀಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ರಾಜ್ಯಸಭೆಗೆ ತಿಳಿಸಿದರು.
ಪ್ರತಿಯೊಬ್ಬ ಆರೋಪಿಯಿಂದ ಎಷ್ಟು ಮೊತ್ತವನ್ನು ವಸೂಲಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಪಂಕಜ್ ಚೌಧರಿ ಹಂಚಿಕೊಂಡಿಲ್ಲ. 19 ಮಂದಿಯ ಪೈಕಿ ಹತ್ತು ಮಂದಿಯನ್ನು ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 ಅಡಿಯಲ್ಲಿ ಎಫ್ಇಒಗಳು ಎಂದು ಘೋಷಿಸಲಾಗಿದೆ. ದೇಶ ಬಿಟ್ಟು ಪರಾರಿಯಾದವರು ಸುಮಾರು 40000 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ದೇಶ ಬಿಟ್ಟು ಪರಾರಿಯಾದ ಹತ್ತು ಮಂದಿ ಯಾರು?
ವಿಜಯ್ ಮಲ್ಯ, ನೀರವ್ ಮೋದಿ, ನಿತಿನ್ ಜಯಂತಿಲಾಲ್ ಸಂದೇಸರ, ಚೇತನ್ ಜಯಂತಿಲಾಲ್ ಸಂದೇಸರ, ದೀಪ್ತಿ ಚೇತನ್ ಜಯಂತಿಲಾಲ್ ಸಂದೇಸರ, ಹಿತೇಶ್ ಕುಮಾರ್ ನರೇಂದ್ರಭಾಯಿ ಪಟೇಲ್, ಜುನೈದ್ ಇಕ್ಬಾಲ್ ಮೆಮನ್, ಹಜ್ರಾ ಇಕ್ಬಾಲ್ ಮೆಮನ್, ಆಸಿಫ್ ಇಕ್ಬಾಲ್ ಮೆಮನ್ ಮತ್ತು ರಾಮಚಂದ್ರನ್ ವಿಶ್ವನಾಥನ್ ಎಂಬ ಹತ್ತು ಮಂದಿಯನ್ನು ಎಫ್ಇಒಗಳು ಎಂದು ಘೋಷಣೆ ಮಾಡಲಾಗಿದೆ.
ಜಾರಿ ನಿರ್ದೇಶನಾಲಯವು ಇತರ ಒಂಬತ್ತು ಮಂದಿಯ ವಿರುದ್ಧ ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 (ಎಫ್ಇಒಎ) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದೆ. ಸಂದೇಸರಸ್ ಮತ್ತು ಹಿತೇಶ್ ಕುಮಾರ್ ಪಟೇಲ್ ಗುಜರಾತ್ ಮೂಲದ ಫಾರ್ಮಾ ದೈತ್ಯ ಸ್ಟರ್ಲಿಂಗ್ ಬಯೋಟೆಕ್ನಲ್ಲಿ ತೊಡಗಿಸಿಕೊಂಡಿದ್ದರು. ಹಾಗೆಯೇ ಈ ಹಿಂದೆ ವಿಶ್ವದ ಆರನೇ ಅತಿದೊಡ್ಡ ಜೆಲಾಟಿನ್ ಉತ್ಪಾದಕರಾಗಿದ್ದರು.
ಆದರೆ ಬಳಿಕ ಈ ಸಂಸ್ಥೆಯು ದಿವಾಳಿಯಾಗಿದ್ದು, ಯುಎಸ್ ಆಧಾರಿತ ಆಹಾರ ಪ್ರಾರಂಭಿಕ ಪರ್ಫೆಕ್ಟ್ ಡೇ ಸ್ವಾಧೀನಪಡಿಸಿಕೊಂಡಿತು. ಜುನೈದ್ ಮೆಮೊನ್, ಹಜ್ರಾ ಮೆಮನ್ ಮತ್ತು ಆಸಿಫ್ ಮೆಮನ್ ಇಕ್ಬಾಲ್ ಮಿರ್ಚಿಯ ಕುಟುಂಬ ಸದಸ್ಯರಾಗಿದ್ದಾರೆ. ಇಕ್ಬಾಲ್ ಮಿರ್ಚಿ ದಾವೂದ್ ಇಬ್ರಾಹಿಂನ ಬಲಗೈ ಬಂಟನಾಗಿದ್ದರು, ಹಾಗೆಯೇ ಡ್ರಗ್ ಜಾಲವನ್ನು ನಡೆಸಿದ ಕುಖ್ಯಾತಿಯನ್ನು ಪಡೆದವರಾಗಿದ್ದಾರೆ.
ಈ ಪಟ್ಟಿಯಲ್ಲಿ ದೇವಾಸ್ ಮಲ್ಟಿಮೀಡಿಯಾದ ರಾಮಚಂದ್ರನ್ ವಿಶ್ವನಾಥನ್, ಮಾಜಿ ಮದ್ಯದ ಉದ್ಯಮಿ ವಿಜಯ್ ಮಲ್ಯ ಮತ್ತು ಆಭರಣ ವ್ಯಾಪಾರಿ ನೀರವ್ ಮೋದಿ ಅವರೂ ಸೇರಿದ್ದಾರೆ. ಆದಾಗ್ಯೂ, ಜಾರಿ ನಿರ್ದೇಶನಾಲಯವು ಈ 19 ಮಂದಿಯಲ್ಲಿ ಕೇವಲ ನಾಲ್ವರನ್ನು ಮಾತ್ರ ಭಾರತಕ್ಕೆ ಗಡೀಪಾರು ಮಾಡಲಾಗಿದೆ / ಹಸ್ತಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.


Click it and Unblock the Notifications