ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ (Fugitive Economic Offenders Act) ಆರೋಪಿಗಳಿಂದ 15,113 ಕೋಟಿ ರೂಪಾಯಿಗಳನ್ನು ಸರ್ಕಾರ ವಸೂಲಿ ಮಾಡಿದೆ. ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ನೀಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ರಾಜ್ಯಸಭೆಗೆ ತಿಳಿಸಿದರು.
ಪ್ರತಿಯೊಬ್ಬ ಆರೋಪಿಯಿಂದ ಎಷ್ಟು ಮೊತ್ತವನ್ನು ವಸೂಲಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಪಂಕಜ್ ಚೌಧರಿ ಹಂಚಿಕೊಂಡಿಲ್ಲ. 19 ಮಂದಿಯ ಪೈಕಿ ಹತ್ತು ಮಂದಿಯನ್ನು ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 ಅಡಿಯಲ್ಲಿ ಎಫ್ಇಒಗಳು ಎಂದು ಘೋಷಿಸಲಾಗಿದೆ. ದೇಶ ಬಿಟ್ಟು ಪರಾರಿಯಾದವರು ಸುಮಾರು 40000 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ದೇಶ ಬಿಟ್ಟು ಪರಾರಿಯಾದ ಹತ್ತು ಮಂದಿ ಯಾರು?
ವಿಜಯ್ ಮಲ್ಯ, ನೀರವ್ ಮೋದಿ, ನಿತಿನ್ ಜಯಂತಿಲಾಲ್ ಸಂದೇಸರ, ಚೇತನ್ ಜಯಂತಿಲಾಲ್ ಸಂದೇಸರ, ದೀಪ್ತಿ ಚೇತನ್ ಜಯಂತಿಲಾಲ್ ಸಂದೇಸರ, ಹಿತೇಶ್ ಕುಮಾರ್ ನರೇಂದ್ರಭಾಯಿ ಪಟೇಲ್, ಜುನೈದ್ ಇಕ್ಬಾಲ್ ಮೆಮನ್, ಹಜ್ರಾ ಇಕ್ಬಾಲ್ ಮೆಮನ್, ಆಸಿಫ್ ಇಕ್ಬಾಲ್ ಮೆಮನ್ ಮತ್ತು ರಾಮಚಂದ್ರನ್ ವಿಶ್ವನಾಥನ್ ಎಂಬ ಹತ್ತು ಮಂದಿಯನ್ನು ಎಫ್ಇಒಗಳು ಎಂದು ಘೋಷಣೆ ಮಾಡಲಾಗಿದೆ.
ಜಾರಿ ನಿರ್ದೇಶನಾಲಯವು ಇತರ ಒಂಬತ್ತು ಮಂದಿಯ ವಿರುದ್ಧ ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 (ಎಫ್ಇಒಎ) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದೆ. ಸಂದೇಸರಸ್ ಮತ್ತು ಹಿತೇಶ್ ಕುಮಾರ್ ಪಟೇಲ್ ಗುಜರಾತ್ ಮೂಲದ ಫಾರ್ಮಾ ದೈತ್ಯ ಸ್ಟರ್ಲಿಂಗ್ ಬಯೋಟೆಕ್ನಲ್ಲಿ ತೊಡಗಿಸಿಕೊಂಡಿದ್ದರು. ಹಾಗೆಯೇ ಈ ಹಿಂದೆ ವಿಶ್ವದ ಆರನೇ ಅತಿದೊಡ್ಡ ಜೆಲಾಟಿನ್ ಉತ್ಪಾದಕರಾಗಿದ್ದರು.
ಆದರೆ ಬಳಿಕ ಈ ಸಂಸ್ಥೆಯು ದಿವಾಳಿಯಾಗಿದ್ದು, ಯುಎಸ್ ಆಧಾರಿತ ಆಹಾರ ಪ್ರಾರಂಭಿಕ ಪರ್ಫೆಕ್ಟ್ ಡೇ ಸ್ವಾಧೀನಪಡಿಸಿಕೊಂಡಿತು. ಜುನೈದ್ ಮೆಮೊನ್, ಹಜ್ರಾ ಮೆಮನ್ ಮತ್ತು ಆಸಿಫ್ ಮೆಮನ್ ಇಕ್ಬಾಲ್ ಮಿರ್ಚಿಯ ಕುಟುಂಬ ಸದಸ್ಯರಾಗಿದ್ದಾರೆ. ಇಕ್ಬಾಲ್ ಮಿರ್ಚಿ ದಾವೂದ್ ಇಬ್ರಾಹಿಂನ ಬಲಗೈ ಬಂಟನಾಗಿದ್ದರು, ಹಾಗೆಯೇ ಡ್ರಗ್ ಜಾಲವನ್ನು ನಡೆಸಿದ ಕುಖ್ಯಾತಿಯನ್ನು ಪಡೆದವರಾಗಿದ್ದಾರೆ.
ಈ ಪಟ್ಟಿಯಲ್ಲಿ ದೇವಾಸ್ ಮಲ್ಟಿಮೀಡಿಯಾದ ರಾಮಚಂದ್ರನ್ ವಿಶ್ವನಾಥನ್, ಮಾಜಿ ಮದ್ಯದ ಉದ್ಯಮಿ ವಿಜಯ್ ಮಲ್ಯ ಮತ್ತು ಆಭರಣ ವ್ಯಾಪಾರಿ ನೀರವ್ ಮೋದಿ ಅವರೂ ಸೇರಿದ್ದಾರೆ. ಆದಾಗ್ಯೂ, ಜಾರಿ ನಿರ್ದೇಶನಾಲಯವು ಈ 19 ಮಂದಿಯಲ್ಲಿ ಕೇವಲ ನಾಲ್ವರನ್ನು ಮಾತ್ರ ಭಾರತಕ್ಕೆ ಗಡೀಪಾರು ಮಾಡಲಾಗಿದೆ / ಹಸ್ತಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications