Actress Ramya: ಮೋಹಕತಾರೆ ಎಂದೇ ಖ್ಯಾತಿ ಗಳಿಸಿರುವ ಸ್ಯಾಂಡಲ್ವುಡ್ ನಟಿ ರಮ್ಯಾ. ಕನ್ನಡ ಚಿತ್ರರಂಕ್ಕೆ ಹೆಜ್ಜೆಯಿಟ್ಟಾಗ ಅವರಿಗೆ ಇದ್ದ ಹೆಸರು ದಿವ್ಯ ಸ್ಪಂದನ. ಇವರಿಗೆ, ಪಾರ್ವತಮ್ಮ ರಾಜ್ಕುಮಾರ್ ಅವರು ರಮ್ಯಾ ಎಂದು ನಾಮಕರಣ ಮಾಡಿದರು. ಹಾಗಿನಿಂದ ಇವರು ರಮ್ಯಾ ಎಂದೇ ಹೆಸರುವಾಸಿ. ಇವರು ಒಂದು ಕಾಲದಲ್ಲಿ ಸ್ಯಾಂಡಲ್ವುಡ್ ಆಳಿದ, ಒಂದರ ಮೇಲೊಂದು ಹಿಟ್ ಸಿನಿಮಾ ಕೊಟ್ಟಿದ್ದ ಕ್ವೀನ್. ನಟನೆ ಮಾತ್ರವಲ್ಲದೇ ರಾಜಕೀಯಕ್ಕೂ ಎಂಟ್ರಿ ಕೊಟ್ಟಿ ತನ್ನ ಛಾಫು ಮೂಡಿಸಿದರು. ಹಾಗಿದ್ದರೆ, ನಟಿ ರಮ್ಯಾ ಬಳಿ ಇರುವ ಆಸ್ತಿ ಎಷ್ಟು? ಇವರ ಸಂಭಾವನೆ, ನಿಜವಾದ ವಯಸ್ಸು ಎಷ್ಟು? ಎಂಬ ಹೆಚ್ಚಿನ ವಿವರ ಇಲ್ಲಿದೆ.
ಮೋಹಕತಾರೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಇಂದುವರೆಗೂ ಸುಮಾರು 40 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು 2003 ರಲ್ಲಿ ದಿವಂಗತ ಪುನೀತ್ ರಾಜ್ಕುಮಾರ್ ಅಭಿನಯದ 'ಅಭಿ' ಚಿತ್ರದಲ್ಲಿ ನಾಯಕ ನಟಿಯಾಗಿ ಕನ್ನಡದ ಚದನವನಕ್ಕೆ ಎಂಟ್ರಿ ಕೊಟ್ಟಿದ್ದರು. ಆದು ಆದ ನಂತರ 'ತನನಂ ತನನಂ' ಮತ್ತು 'ಸಂಜು ವೆಡ್ಸ್ ಗೀತಾ' ಚಿತ್ರಗಳಿಗೆ ಎರಡು ಬಾರಿ ಬೆಸ್ಟ್ ಫಿಲಂಫೇರ್ ಪ್ರಶಸ್ತಿ ಯನ್ನು ಗಟ್ಟಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಇವರು ತಮಿಳು ಚಿತ್ರರಂಗದಲ್ಲೂ ಕೂಡ ಮಿಂಚಿದ್ದಾರೆ.

ನಟಿ ರಮ್ಯಾ 'ಊರಿಗೆ ಒಬ್ಬಳೇ ಪದ್ಮಾವತಿ' ಎಂಬ ಎಟಂ ಸಾಂಗ್ಸ್ಗೆ ಹೆಜ್ಜೆ ಹಾಕಿ, ಪಡ್ಡೆ ಹುಡುಗರ ದಿಲ್ ಕದ್ದಿದ್ದರು. ಈ ಹಾಡಿನ ಮುಲಕ ಫುಲ್ ಫೇಮಸ್ ಕೂಡ ಆಗಿದ್ದರು. ನಟನೆಯಿಂದ ಕೊಂಚ ವಿರಾಮ ಪಡೆದ ನಟಿ ರಮ್ಯಾ ಸೌಂಡ್ ಮಾತ್ರ ನಿಲ್ಲಲಿಲ್ಲ. ಆಗಾಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಲ್ಚಲ್ ಸೃಷ್ಟಿಸುತ್ತಾರೆ. ವಿವಾದಾತ್ಮಕ ಹೇಳಿಕೆ ಮೂಲಕ ಚರ್ಚೆಯಲ್ಲಿ ಇದ್ದೇ ಇರುತ್ತಾರೆ. ವಿಶೇಷವೆಂದರೆ, ಈಗಲೂ 'ಪದ್ಮಾವತಿ' ಪದ ನೆಟ್ಟಿಗರಿಗೆ ಆಹಾರವಾಗಿದೆ.
ನಟಿ ರಮ್ಯಾ ಹಾಗೂ ಕಿಚ್ಚ ಸುದೀಪ್ ಅವರ ನಟ್ಟನೆಯ ಮುಸ್ಸಂಜೆ ಮಾತು ಸಿನಿಮಾ ಇಂದಿಗೂ ಎಲ್ಲರ ಹಾಟ್ ಫೇವರೆಟ್ ಸಿನಿಮಾ.
ಇವರು ಜೀವನ ಪ್ರಯಾಣ ಕೇವಲ ನಟನೆ ಮಾತ್ರವಲ್ಲದೇ ರಾಜಕೀಯದಲ್ಲೂ ಇವರು ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಸದಸ್ಯರಾಗಿದ್ದು ಮಂಡ್ಯ ಕ್ಷೇತ್ರದಿಂದ ಲೋಕಸಭೆ ಸದಸ್ಯರಾಗಿಯೂ ಕೂಡ ಆಯ್ಕೆ ಜನರ ಸೇವೆಯನ್ನು ಮಾಡಿದ್ದಾರೆ. 23 ಆಗಸ್ಟ್ 2013 ರಂದು ನಡೆದ ಲೋಕಸಭಾ ಉಪ-ಚುನಾವಣೆಯಲ್ಲಿ ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಕನ್ನಡ ಚಿತ್ರರಂಗದ ಟಾಪ್ ಹೀರೋಯಿನ್ ಆಗಿದ್ದ ರಮ್ಯಾ ಕೆಲ ದಿನಗಳ ಕಾಲ ಸಿನಿರಂಗ ಮಾತ್ರವಲ್ಲ ಭಾರತದಿಂದಲೇ ದೂರ ತೆರಳಿದ್ದರು. ಬಳಿಕ ಮತ್ತೆ ಕರ್ನಾಟಕಕ್ಕೆ ಮರಳಿದರು. ತಮ್ಮದೇ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಿ ಸಿನಿಮಾ ನಿರ್ಮಾಪಕಿ ಆಗಿಯೂ ಕೆಲಸ ಮಾಡುತ್ತಿದ್ದಾರೆ.
ನಟಿ ರಮ್ಯಾ ಆಸ್ತಿ ಎಷ್ಟು..?
ಕನ್ನಡ ಚಿತ್ರದ ಟಾಪ್ ನಟಿಯಾದ ರಮ್ಯಾ ಮಾಜಿ ಸಂಸದೆ ನಿರ್ಮಾಪಕಿಯೂ ಆಗಿರುವ ನಟಿ ರಮ್ಯಾ ಆಸ್ತಿ 5 ರಿಂದ 6 ಕೋಟಿ ರೂಪಾಯಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತದೆ.
ದಿವ್ಯ ಸ್ಪಂದನ (ರಮ್ಯಾ) 1989 ನವೆಂಬರ್ 29ರಂದು ಬೆಂಗಳೂರಿನ ಸದಾಶಿವನಗರದಲ್ಲಿನ ಐಡಿಯಲ್ ನರ್ಸಿಂಗ್ ಹೋಮ್ನಲ್ಲಿ ಜನಿಸಿದ್ದಾರೆ. ಇವರ ತಂದೆ ಆರ್. ಟಿ. ನಾರಾಯಣ್ ರಾಜಕೀಯ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ತಾಯಿ ರಂಜಿತಾ ಅವರು ಕೊಡಗು ಮೂಲದವರಾಗಿದ್ದಾರೆ. ರಮ್ಯಾ ಅವರು ತಮ್ಮ ಬಾಲ್ಯವನ್ನು ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸವನ್ನು ಮಾಡಿದ್ದಾರೆ.
ಬಾಲವಿಹಾರ್ ಮತ್ತು ಸೇಂಟ್ ಹಿಲ್ಡಾ'ಸ್ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ ಸೇಂಟ್ ಜೋಸೆಫ್ ಶಾಲೆಯಲ್ಲಿ ವಿದ್ಯಾಭ್ಯಾಸ ಮುಂದುವರಿಸಿದರು. ಪದವಿಪೂರ್ವ ಶಿಕ್ಷಣವನ್ನು ವಿಜಯ ಕಾಲೇಜಿನಲ್ಲಿ ಮುಗಿಸಿದ ಬಳಿಕ, ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಸಂಬಂಧಗಳ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications