ತಂತ್ರಜ್ಞಾನ (Technology) ದಿನೇ ದಿನೇ ಅಭಿವೃದ್ಧಿಯಾಗುತ್ತಲೇ ಇದೆ. ಈ ಮಧ್ಯೆ ಸೈಬರ್ ವಂಚಕರ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಮಾಯಕ ಜನರನ್ನು ಮೋಸ ಮಾಡಲು ಖದೀಮರು ಪ್ಲಾನ್ ಮಾಡುತ್ತಿದ್ದಾರೆ. ಆದ್ರೆ ಈ ಎಲ್ಲಾ ಕೃತ್ಯಗಳಿಗೆ ಕಡಿವಾಣ ಹಾಕಲು ಇದೀಗ ಎರಡು ಬ್ಯಾಂಕ್ಗಳು ಸಜ್ಜಾಗಿದೆ. ಭಾರತದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಬ್ಯಾಂಕ್ ಆಫ್ ಬರೋಡಾ (BoB) ದೇಶದಲ್ಲಿ ಡಿಜಿಟಲ್ ಪೇಮೆಂಟ್ನಲ್ಲಾಗುತ್ತಿರುವ ವಂಚನೆ ತಡೆಗಟ್ಟಲು ಹೊಸ ಐಡಿಯಾ ಕಂಡುಕೊಂಡಿದೆ. ಅದಕ್ಕಾಗಿ ಹೊಸ ಪ್ಲಾಟ್ ಫಾರ್ಮ್ವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇದು ಆನ್ಲೈನ್ ಪೇಮೆಂಟ್ನಲ್ಲಾಗುವ ವಂಚನೆಯನ್ನು (Online Payment Scam) ತಕ್ಷಣ ಪತ್ತೆಹಚ್ಚಲಿದೆ.

ಈ ಹೊಸ ಸಂಸ್ಥೆಗೆ "ಇಂಡಿಯನ್ ಡಿಜಿಟಲ್ ಪೇಮೆಂಟ್ ಇಂಟೆಲಿಜೆನ್ಸ್ ಕಾರ್ಪೊರೇಷನ್" (IDPIC) ಎಂದು ಹೆಸರಿಡಲಾಗಿದೆ. ಅಲ್ಲದೇ ಸಾರ್ವಜನಿಕ ವಲಯದ ಎಲ್ಲ 12 ಬ್ಯಾಂಕ್ಗಳು ಇದರಲ್ಲಿ ಇಕ್ವಿಟಿ ಪಾಲುದಾರರಾಗುವ ನಿರೀಕ್ಷೆಯಿದೆ ವರದಿಯಾಗಿದೆ.
ಐಡಿಪಿಐಸಿ ಒಂದು ಸೆಕ್ಷನ್ 8 ಕಂಪನಿಯಾಗಿ ಸ್ಥಾಪನೆಯಾಗಲಿದೆ. ಇದರ ಅಧಿಕೃತ ಬಂಡವಾಳ 500 ಕೋಟಿ ರೂ. ಮತ್ತು ಪಾವತಿಸಿದ ಬಂಡವಾಳ 200 ಕೋಟಿ ರೂ. ಆಗಿರುತ್ತದೆ. ಸದ್ಯ ಈ ಪ್ಲಾಟ್ಫಾರ್ಮ್ಗೆ ಎಸ್ಬಿಐ ಮತ್ತು ಬ್ಯಾಂಕ್ ಆಫ್ ಬರೋಡಾದಿಂದ ಇಬ್ಬರು ಹಿರಿಯ ಅಧಿಕಾರಿಗಳು ನಿರ್ದೇಶಕರಾಗಿರುತ್ತಾರೆ ಎಂದು ವರದಿಯಾಗಿದೆ.
ಆರ್ಬಿಐನಿಂದ ಅನುಮೋದನೆ:
ಭಾರತೀಯ ರಿಸರ್ವ್ ಬ್ಯಾಂಕ್ (RBI) ಈಗಾಗಲೇ ಈ ಕಂಪನಿಯ ನೀತಿ, ನಿಯಮಗಳಿಗೆ ಅನುಮೋದನೆ ನೀಡಿದೆ. ಎಸ್ಬಿಐ ಆರಂಭದಲ್ಲಿ 10 ಕೋಟಿ ರೂಪಾಯಿಗಳನ್ನು ನೀಡಲು ಒಪ್ಪಿಕೊಂಡಿದ್ದು, ಬ್ಯಾಂಕ್ ಆಫ್ ಬರೋಡಾ ಸಹ ಅಷ್ಟೇ ಮೊತ್ತವನ್ನು ಹೂಡಿಕೆ ಮಾಡಲಿದೆ ಎಂದು ವರದಿಯಾಗಿದೆ. ನಂತರದ ದಿನಗಳಲ್ಲಿ ಬಹುತೇಕ ಎಲ್ಲಾ ಬ್ಯಾಂಕುಗಳು ಈ ಸಂಸ್ಥೆಯಲ್ಲಿ ಪಾಲು ಹೊಂದಲು ಸಿದ್ಧವಾಗಿವೆ ಎಂದು ಹೇಳಲಾಗಿದೆ.
ದೇಶದಲ್ಲಿ ಹೆಚ್ಚುತ್ತಿದೆ ಬ್ಯಾಂಕ್ ವಂಚನೆ:
ದೇಶದಲ್ಲಿ ಇತ್ತೀಚೆಗೆ ಬ್ಯಾಂಕ್ ವಂಚನೆಗಳು ಹೆಚ್ಚಾಗುತ್ತಿದ್ದು, ಇದೀಗ ಈ ಎಲ್ಲದಕ್ಕೆ ಕಡಿವಾಣ ಹಾಕಲು ಈ ಕಂಪನಿ ಸಹಕಾರಿಯಾಗಲಿದೆ. ಆರ್ಬಿಐ ವರದಿ ಪ್ರಕಾರ, ಮಾರ್ಚ್ನಲ್ಲಿ ಅಂತ್ಯದಲ್ಲಿ ಬ್ಯಾಂಕ್ ವಂಚನೆಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಎಲ್ಲಾ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಆರ್ಬಿಐ ವರದಿ ಪ್ರಕಾರ, ಮಾರ್ಚ್ 2025 ಕ್ಕೆ 36,014 ಕೋಟಿ ರೂ.ಗೆ ಏರಿಕೆಯಾಗಿದೆ. ಪ್ರಸ್ತುತ, ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ( I4C) ಸೈಬರ್ ವಂಚನೆಯನ್ನು ತಡೆಯಲು ನೋಡಲ್ ಪಾಯಿಂಟ್ ಆಗಿ ಕಾರ್ಯನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೇ ಕೆಲವು ಬ್ಯಾಂಕುಗಳು ಈಗಾಗಲೇ ಆರ್ಬಿಐ ಅಭಿವೃದ್ಧಿಪಡಿಸಿದ MuleHunter.Ai ಎಂಬ AI/ML ಎಂಬ ಟೆಕ್ನಾಲಜಿಯನ್ನು ಬಳಸುತ್ತಿದೆ. ಇದರಿಂದ ಮ್ಯೂಲ್ ಅಕೌಂಟ್ಗಳನ್ನು ಪತ್ತೆ ಮಾಡಲು ಸುಲಭವಾಗುತ್ತದೆ. ಈ ಮೂಲಕ ಬ್ಯಾಂಕಿಂಗ್ ವಹಿವಾಟುಗಳಲ್ಲಾಗುತ್ತಿರುವ ವಂಚನೆಯನ್ನು ತಡೆಯಬಹುದಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications