ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 'ಎಸ್ಬಿಐ ತುರ್ತು ಸಾಲ ಯೋಜನೆ' ಅಡಿಯಲ್ಲಿ ತನ್ನ ಗ್ರಾಹಕರಿಗೆ ಕೇವಲ 45 ನಿಮಿಷಗಳಲ್ಲಿ 5 ಲಕ್ಷ ರುಪಾಯಿವರೆಗೆ ಸಾಲವನ್ನು ನೀಡಲಿದೆ.
ಸಾಲ ತೆಗೆದುಕೊಂಡು 6 ತಿಂಗಳ ಬಳಿಕ EMI ಪ್ರಾರಂಭ
ಎಸ್ಬಿಐನ ಈ ತುರ್ತು ಸಾಲ ಯೋಜನೆ ಅಡಿಯಲ್ಲಿ ಸಾಲ ಪಡೆದವರು, ಸಾಲ ಅನುಮೋದಿಸಿದ ಆರು ತಿಂಗಳ ನಂತರ ಸಮನಾದ ಮಾಸಿಕ ಕಂತುಗಳನ್ನು ಪಾವತಿಸಬೇಕಾಗುತ್ತದೆ. ಅಂದರೆ ನಿಮ್ಮ ಇಎಂಐ ಸಾಲ ಪಡೆದು ಆರು ತಿಂಗಳ ಬಳಿಕ ಶುರುವಾಗಲಿದೆ.
ಕೊರೊನಾವೈರಸ್ದಿಂದಾಗಿ ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದ ಉಂಟಾಗಿರುವ ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಗ್ರಾಹಕರಿಗೆ ಈ ತುರ್ತು ಸಾಲ ಯೋಜನೆಯಿಂದ ಸಹಾಯವಾಗುತ್ತದೆ.
10.5 ಪರ್ಸೆಂಟ್ ಬಡ್ಡಿದರದಲ್ಲಿ ಸಾಲ
ಎಸ್ಬಿಐ ತುರ್ತು ಸಾಲ ಯೋಜನೆಯು 10.5 ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ನೀಡುತ್ತಿದೆ ಮತ್ತು ಸಾಲದ ಇಎಂಐ ಆರು ತಿಂಗಳ ನಂತರ ಪ್ರಾರಂಭವಾಗಲಿದೆ. ಇದು ಇತರ ವೈಯಕ್ತಿಕ ಸಾಲಗಳಿಗೆ ಹೋಲಿಸಿದರೆ ಸಾಕಷ್ಟು ಉತ್ತಮವಾಗಿದೆ.
ನೀವು ಸಾಲ ಪಡೆಯಲು ಅರ್ಹರೆಂದು ತಿಳಿಯಲು ಮೊದಲು SMS ಮಾಡಬೇಕು
ಆನ್ಲೈನ್ನಲ್ಲಿ ಅಥವಾ ಎಸ್ಬಿಐನ ಯೋನೊ ಆಪ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ನೀವು ಈ ತುರ್ತು ಸಾಲ ಯೋಜನೆಯನ್ನು ಪಡೆಯಬಹುದು. ಆದರೆ ಅದಕ್ಕೂ ಮೊದಲು ನೀವು ಈ ಸಾಲ ಪಡೆಯಲು ಅರ್ಹರೆಂದು ತಿಳಿದುಕೊಳ್ಳಲು ಎಸ್ಎಂಎಸ್ ಮಾಡಬೇಕು. ನಿಮ್ಮ ಮೊಬೈಲ್ನಲ್ಲಿ 'PAPL' ಎಂದು ಟೈಪ್ ಮಾಡಿ ನಿಮ್ಮ ಎಸ್ಬಿಐ ಅಕೌಂಟ್ ನಂಬರ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ಟೈಪ್ ಮಾಡಿ 567676 ಗೆ ಕಳುಹಿಸುವ ಮೂಲಕ ನೀವು ಈ ಸಾಲ ಯೋಜನೆಯ ಅರ್ಹತೆಯನ್ನು ಪರಿಶೀಲಿಸಬಹುದು. ನೀವು ಸಾಲಕ್ಕೆ ಅರ್ಹರಾಗಿದ್ದರೆ ಎಸ್ಬಿಐ ನಿಮ್ಮ ಎಸ್ಎಂಎಸ್ಗೆ ಪ್ರತಿಕ್ರಿಯಿಸುತ್ತದೆ. ಜೊತೆಗೆ ಕೆಲವು ನಿಯಮಗಳು ಕೂಡ ಅನ್ವಯವಾಗಲಿದೆ.
ಎಸ್ಬಿಐ ತುರ್ತು ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ
- ಯೋನೊ ಎಸ್ಬಿಐ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮತ್ತು 'ಪೂರ್ವ-ಅನುಮೋದಿತ ಸಾಲ'(Pre-approved Loan) ಕ್ಲಿಕ್ ಮಾಡಿ.
- ಅಧಿಕಾರಾವಧಿ ಮತ್ತು ಸಾಲದ ಮೊತ್ತವನ್ನು ಸೆಲೆಕ್ಟ್ ಮಾಡಿ.
- ನಿಮ್ಮ ಖಾತೆಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುವುದು ಮತ್ತು ನೀವು ಅದನ್ನು ಸಲ್ಲಿಸಬೇಕು.
- ಎಸ್ಬಿಐ ತುರ್ತು ಸಾಲದ ಮೊತ್ತವನ್ನು ತಕ್ಷಣ ನಿಮ್ಮ ಎಸ್ಬಿಐ ಉಳಿತಾಯ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಪ್ರಕ್ರಿಯೆಯು ಎಲ್ಲವೂ ಸರಿಯಾಗಿ ನಡೆದರೆ 45 ನಿಮಿಷಗಳಲ್ಲಿ 5 ಲಕ್ಷ ರುಪಾಯಿವರೆಗೆ ಸಾಲವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications